ಹಲ್ಲೆಗೊಳಗಾದ ಹೆಡ್ ವಾರ್ಡನ್ ವಾಸಾ ವೀರರಾಜು 
ದೇಶ

Andhra Pradesh: ಹೆಡ್ ವಾರ್ಡನ್ ಮೇಲೆ ಹಲ್ಲೆ, ಇಬ್ಬರು ವಿಚಾರಣಾಧೀನ ಕೈದಿಗಳು ಜೈಲಿನಿಂದ ಎಸ್ಕೇಪ್!

ಪಿಂಚಣಿ ಹಣ ದುರುಪಯೋಗಪಡಿಸಿಕೊಂಡು ಜೈಲು ಸೇರಿದ್ದ ಮಾಜಿ ಪಂಚಾಯತ್ ಕಾರ್ಯದರ್ಶಿ ನಕ್ಕಾ ರವಿಕುಮಾರ್ ಜೈಲಿನ ಅಡುಗೆ ಕೋಣೆಯಲ್ಲಿ ಹೆಡ್ ವಾರ್ಡನ್ ವಾಸಾ ವೀರರಾಜು ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ.

ಆಂಧ್ರ ಪ್ರದೇಶ: ಹೆಡ್ ವಾರ್ಡನ್ ಮೇಲೆ ಹಲ್ಲೆ ಮಾಡಿ ಜೈಲಿನಿಂದ ಇಬ್ಬರು ವಿಚಾರಣಾಧೀನ ಕೈದಿಗಳು ಎಸ್ಕೇಪ್ ಆಗಿರುವ ಘಟನೆ ಆಂಧ್ರಪ್ರದೇಶದ ಚೋಡವರಂ ಉಪ ಕಾರಾಗೃಹದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಪಿಂಚಣಿ ಹಣ ದುರುಪಯೋಗಪಡಿಸಿಕೊಂಡು ಜೈಲು ಸೇರಿದ್ದ ಮಾಜಿ ಪಂಚಾಯತ್ ಕಾರ್ಯದರ್ಶಿ ನಕ್ಕಾ ರವಿಕುಮಾರ್ ಜೈಲಿನ ಅಡುಗೆ ಕೋಣೆಯಲ್ಲಿ ಹೆಡ್ ವಾರ್ಡನ್ ವಾಸಾ ವೀರರಾಜು ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ.

ಸುತ್ತಿಗೆಯಿಂದ ವೀರರಾಜು ಅವರ ತಲೆಗೆ ಹೊಡೆದಿದ್ದಾನೆ. ಬಳಿಕ ಅವರಿಂದ ಕೀ ಕಸಿದುಕೊಂಡು ಜೈಲು ಆವರಣದಿಂದ ಪರಾರಿಯಾಗಿದ್ದಾನೆ.

ಈ ಅವ್ಯವಸ್ಥೆಯ ಲಾಭ ಪಡೆದುಕೊಂಡ ಮತ್ತೋರ್ವ ಕೈದಿ ಬೇಜವಾಡ ರಾಮು ಕೂಡಾ ರವಿಕುಮಾರ್ ಜೊತೆಗೆ ಪರಾರಿಯಾಗಿದ್ದಾನೆ. ಜೈಲಿನ ಅಧಿಕಾರಿಗಳು ಕೂಡಲೇ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ನೆರೆಹೊರೆಯ ಪೊಲೀಸ್ ಠಾಣೆಗಳಿಗೆ ಮಾಹಿತಿ ತಿಳಿಸಿದ್ದು, ಅವರಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರವಿಕುಮಾರ್, ಪಂಚಾಯಿತಿಯೊಂದರ ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ಪಿಂಚಣಿ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಉಪ ಕಾರಾಗೃಹದಲ್ಲಿದ್ದರು. ರಾಮು ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದರು. ಆದಷ್ಟು ಬೇಗ ಇಬ್ಬರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ: ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಸಿದ್ದರಾಮಯ್ಯ ಹೇಳಿದ್ದು ಏನು?

SIIMA 2025: ಕನ್ನಡ ಅಷ್ಟೊಂದು ಕೆಳಮಟ್ಟಕ್ಕೆ ಇಳಿದಿಲ್ಲ; ವೇದಿಕೆಯಲ್ಲೇ ಆಯೋಜಕರಿಗೆ ದುನಿಯಾ ವಿಜಯ್ ಎಚ್ಚರಿಕೆ, Video!

IVF ಮೂಲಕ ನಟಿ ಭಾವನಾ ಅವಳಿ ಮಕ್ಕಳಿಗೆ ಜನನ; ಒಂದು ಮಗು ಸಾವು!

ಧರ್ಮಸ್ಥಳ ಕೇಸ್: ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ; ಅಣ್ಣಾಮಲೈ ವಿಚಾರಣೆ ಯಾಕಿಲ್ಲ?

'ಅವ್ನ ಬಿಟ್.. ಇವ್ನ ಬಿಟ್.. ಇನ್ಯಾರೋ..': ಲವರ್ ಜೊತೆ ವಿವಾಹಿತ ಮಹಿಳೆ ಪರಾರಿ ಕೇಸ್ ಗೆ ಬಿಗ್ ಟ್ವಿಸ್ಟ್!

SCROLL FOR NEXT