ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತನೊಂದಿಗೆ ವಿವಾಹಿತ ಮಹಿಳೆ ಪ್ರೇಮ ಪ್ರಸಂಗ; ಖಾಸಗಿಯಾಗಿದ್ದದ್ದನ್ನು ನೋಡಿದ ಬಾಲಕಿಯ ಕೊಂದ ಆರೋಪಿಗಳ ಬಂಧನ

ಸುಮಾರು 30 ವರ್ಷ ವಯಸ್ಸಿನ ಮಹಿಳೆ, 17 ವರ್ಷದ ಹುಡುಗನೊಂದಿಗೆ ಸುಮಾರು ಮೂರು ತಿಂಗಳಿನಿಂದ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ.

ಹತ್ರಾಸ್: ಸಿಕಂದ್ರಾ ರೌ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆರು ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದ್ದು, ಆಕೆಯ ಪ್ರಿಯಕರನನ್ನೂ ಬಂಧಿಸಲಾಗಿದೆ.

ಬುಧವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಊರ್ವಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು.

ಮಧ್ಯಾಹ್ನ 1.30ರ ಸುಮಾರಿಗೆ, ಕುತ್ತಿಗೆಗೆ ಬಟ್ಟೆ ಸುತ್ತಿದ ಮತ್ತು ಗೋಣಿ ಚೀಲದಲ್ಲಿದ್ದ ರೀತಿಯಲ್ಲಿ ಆಕೆಯ ಶವ ಬಾವಿಯೊಳಗೆ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿಯು ಕತ್ತು ಹಿಸುಕಿ ಸಾವಿಗೀಡಾಗಿರುವುದನ್ನು ದೃಢಪಡಿಸಿದೆ.

'ಬಂಧಿತ ಮಹಿಳೆ ಮತ್ತು ಅಪ್ರಾಪ್ತ ಬಾಲಕ ಆಕ್ಷೇಪಾರ್ಹ ರೀತಿಯ ಭಂಗಿಯಲ್ಲಿದ್ದದ್ದನ್ನು ಬಾಲಕಿ ನೋಡಿದ್ದಳು. ಬಾಲಕಿ ತನ್ನ ತಂದೆಗೆ ವಿಷಯ ತಿಳಿಸುವುದಾಗಿ ಬೆದರಿಸಿದ್ದಾಳೆ. ಇದರಿಂದಾಗಿ ಅವರಿಬ್ಬರು ಆಕೆಯ ಕತ್ತು ಹಿಸುಕಿ ಕೊಂದಿದ್ದಾರೆ' ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ಹೇಳಿದರು.

ಸುಮಾರು 30 ವರ್ಷ ವಯಸ್ಸಿನ ಮಹಿಳೆ, 17 ವರ್ಷದ ಹುಡುಗನೊಂದಿಗೆ ಸುಮಾರು ಮೂರು ತಿಂಗಳಿನಿಂದ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ. ಘಟನೆಯ ದಿನದಂದು, ತನ್ನ ಪತಿ ಮತ್ತು ಅತ್ತೆ ಹೊರಗೆ ಇದ್ದಾಗ, ಆಕೆ ಬಾಲಕನನ್ನು ಮನೆಗೆ ಕರೆಸಿಕೊಂಡಿದ್ದಳು.

'ಅವರಿಬ್ಬರೂ ಖಾಸಗಿಯಾಗಿದ್ದದ್ದನ್ನು ಕಂಡ ಬಾಲಕಿ, ಎಚ್ಚರಿಕೆ ನೀಡಿದರೂ ಸಹ, ತನ್ನ ತಂದೆಗೆ ಹೇಳುವುದಾಗಿ ಹೇಳಿದ್ದಾಳೆ. ಬಳಿಕ ಆರೋಪಿಗಳಿಬ್ಬರೂ ಆಕೆಯನ್ನು ಕೊಂದು, ಗೋಣಿ ಚೀಲದಲ್ಲಿ ತುಂಬಿಸಿ, ನಿರ್ಜನ ಪ್ರದೇಶದಲ್ಲಿದ್ದ ಪಾಳುಬಿದ್ದ ಬಾವಿಗೆ ಎಸೆದಿದ್ದಾರೆ' ಎಂದು ಅಧಿಕಾರಿ ಹೇಳಿದರು.

ಬಂಧನದ ಸಮಯದಲ್ಲಿ ಮಹಿಳೆಯ ಕೈಯಲ್ಲಿ ಕಚ್ಚಿದ ಗುರುತುಗಳಿದ್ದವು. ಬಹುಶಃ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಬಾಲಕಿಯೇ ಕಚ್ಚಿರಬಹುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಸ್ರೇಲ್ ನಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಜೆರುಸಲೆಮ್ ಬಸ್ ಮೇಲೆ ಗುಂಡಿನ ದಾಳಿ: 5 ಸಾವು, 12 ಜನರಿಗೆ ಗಾಯ

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!

ಕೋಮು ಘರ್ಷಣೆ: ಸೆಪ್ಟೆಂಬರ್ 9 ರಂದು ಮದ್ದೂರು ಬಂದ್‌ಗೆ ಬಿಜೆಪಿ ಕರೆ

ನಾಳೆ ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ BRS-BJD ದೂರ; ಇದು INDIA ಅಭ್ಯರ್ಥಿ ವಿರುದ್ಧ NDA ಅಭ್ಯರ್ಥಿ ಗೆಲುವಿಗೆ ವರವಾಗುತ್ತಾ?

ರಷ್ಯಾದಿಂದ ತೈಲ ಖರೀದಿ "ರಕ್ತದ ಹಣ": ಭಾರತದ ಮೇಲೆ ಮತ್ತೆ ಕಿಡಿ ಕಾರಿದ ವ್ಯಾಪಾರ ಸಲಹೆಗಾರ ಪೀಟರ್ ನವರೊ!

SCROLL FOR NEXT