ರೀನಾ ಸಿಂಗ್ ಮೇಲೆ ಹಲ್ಲೆ 
ದೇಶ

ಉತ್ತರಪ್ರದೇಶ: BJP ಸಂಸದನ ಸಹೋದರಿಯ ಬೆತ್ತಲೆ Video ಸೆರೆ ಹಿಡಿದ ಮಾವ; ಪ್ರಶ್ನಿಸಿದಕ್ಕೆ ರಸ್ತೆಯಲ್ಲೇ ಹಲ್ಲೆ!

ಕಾಸ್ಗಂಜ್ ಜಿಲ್ಲೆಯ ಸಹವರ್ ಕೊಟ್ವಾಲಿ ಪ್ರದೇಶದಲ್ಲಿ ವೃದ್ಧನೊಬ್ಬ ಮಹಿಳೆಯೊಬ್ಬರನ್ನು ಥಳಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವೈರಲ್ ವಿಡಿಯೋ ಸಹವರ್ ಪಟ್ಟಣದ ಅವಂತಿಬಾಯಿ ನಗರದ್ದು ಎನ್ನಲಾಗಿದೆ.

ಕಾಸ್ಗಂಜ್ ಜಿಲ್ಲೆಯ ಸಹವರ್ ಕೊಟ್ವಾಲಿ ಪ್ರದೇಶದಲ್ಲಿ ವೃದ್ಧನೊಬ್ಬ ಮಹಿಳೆಯೊಬ್ಬರನ್ನು ಥಳಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವೈರಲ್ ವಿಡಿಯೋ ಸಹವರ್ ಪಟ್ಟಣದ ಅವಂತಿಬಾಯಿ ನಗರದ್ದು ಎನ್ನಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ವೃದ್ಧನೊಬ್ಬ ಮಹಿಳೆಯನ್ನು ತೀವ್ರವಾಗಿ ಥಳಿಸುತ್ತಿದ್ದಾನೆ. ಈ ಮಹಿಳೆ ಫರೂಕಾಬಾದ್‌ನ ಬಿಜೆಪಿ ಸಂಸದ ಮುಖೇಶ್ ರಜಪೂತ್ ಅವರ ಸಹೋದರಿ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್ 7ರ ಮಧ್ಯಾಹ್ನ ಈ ಘಟನೆ ನಡೆದಿದೆ. ಸಂತ್ರಸ್ತೆ ರೀನಾ ತನ್ನ ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದಾಗ ನನ್ನ ಮಾವಂದಿರಾದ ಗಿರೀಶ್ ಮತ್ತು ಲಕ್ಷ್ಮಣ್ ಸಿಂಗ್ ಎಂಬುವರು ಬೆತ್ತಲೆ ವಿಡಿಯೋ ಸೆರೆ ಹಿಡಿದಿದ್ದಾರೆ. ಇದನ್ನು ಪ್ರತಿಭಟಿಸಿದ್ದಕ್ಕೆ ಮಹಿಳೆ ಆರೋಪಿಗಳು ಆಕೆಯನ್ನು ನಿಂದಿಸಿ ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಸಂತ್ರಸ್ತ ರೀನಾ ಈಗಾಗಲೇ ತನ್ನ ಮಾವಂದಿರ ವಿರುದ್ಧ ಸಹವರ್ ಕೊಟ್ವಾಲಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕೊಲೆ ಮಾಡುವುದಾಗಿ ಬೆದರಿಕೆ

ದೂರಿನ ಪ್ರಕಾರ, ಮಾವ ಪರವಾನಗಿ ಪಡೆದ ರೈಫಲ್‌ನೊಂದಿಗೆ ಬಂದು ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಆತ ರೈಫಲ್‌ನಿಂದ ದಾಳಿ ಮಾಡಿದ್ದಾರೆ. ಮಹಿಳೆ ಹೇಗೋ ಅಲ್ಲಿಂದ ತಪ್ಪಿಸಿಕೊಂಡಿದ್ದಳು. ಆದರೆ ಮತ್ತೊಬ್ಬ ಮಾವ ರಾಜೇಶ್ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಆಕೆಯ ಕೈಗೆ ಗಾಯವಾಗಿದೆ. ಮನೆಯಿಂದ ಹೊರಬರುವಾಗ ಮಾವ ಗಿರೀಶ್ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಸಂತ್ರಸ್ತೆಯ ಪ್ರಕಾರ, ನಾನು ರಸ್ತೆಗೆ ಓಡಿ ಬಂದಿದ್ದೆ ಮಾವ ಸ್ಥಳೀಯರ ಮುಂದೆಯೇ ನನ್ನನ್ನು ಹೊಡೆದು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಮತ್ತು ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಪೊಲೀಸರಿಂದ ಒತ್ತಾಯಿಸಿದ್ದಾರೆ. ಸಂತ್ರಸ್ತೆಯು ಸುಮಾರು 17 ವರ್ಷಗಳ ಹಿಂದೆ ಶ್ರೀಖಂಡ್ ಅವರನ್ನು ವಿವಾಹವಾಗಿದ್ದರು. ಈ ಪ್ರಕರಣದಲ್ಲಿ, ಸಹಾರಾ ಕೊತ್ವಾಲಿಯ ಉಸ್ತುವಾರಿ ಇನ್ಸ್‌ಪೆಕ್ಟರ್ ಚಮನ್ ಗೋಸ್ವಾಮಿ ಮಾತನಾಡಿ, ರೀನಾ ರಜಪೂತ್ ಅವರು ಕೌಟುಂಬಿಕ ಕಲಹದಿಂದಾಗಿ ತಮ್ಮ ಅತ್ತೆ ಮಾವನ ವಿರುದ್ಧ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT