ಅಮೃತಾ ಫಡ್ನವಿಸ್  
ದೇಶ

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ?'; ಮಹಾ ಸಿಎಂ ಪತ್ನಿ ವಿರುದ್ಧ ನೆಟ್ಟಿಗರ ಆಕ್ರೋಶ; Video

ಅಮೃತಾ ಫಡ್ನವೀಸ್ ಸ್ಥಾಪಿಸಿರುವ ಎನ್‌ಜಿಒ ದಿವ್ಯಾಜ್ ಫೌಂಡೇಶನ್ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಭಾಗವಹಿಸಿದ್ದರು.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಇತ್ತೀಚಿಗೆ ಅಕ್ಷಯ್ ಕುಮಾರ್ ಅವರೊಂದಿಗೆ ಪಾಲ್ಗೊಂಡಿದ್ದ 'ಬೀಚ್ ಸ್ವಚ್ಛತಾ' ಕಾರ್ಯಕ್ರಮದಲ್ಲಿ ಧರಿಸಿದ್ದ ಬಟ್ಟೆಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದಾರೆ.

ಅನೇಕ ನೆಟ್ಟಿಗರು ಆಕೆ ಧರಿಸಿದ್ದ ಬಟ್ಟೆ ಅಸಭ್ಯಕರವಾಗಿದ್ದು, ನೀತಿಯ ಪಾಠ ಹೇಳುವವರೆ ಈ ರೀತಿ ಉಡುಪು ಧರಿಸಿದರೆ ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ.

ಮತ್ತೆ ಕೆಲವರು ಉಡುಪು ಧರಿಸಿವುದು ಆಕೆಯ ವೈಯಕ್ತಿಕ ಆಯ್ಕೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಜನರು ಪ್ರಶ್ನೆ ಮಾಡುವಂತಹದಲ್ಲಾ ಎಂದಿದ್ದಾರೆ. ಈ ಘಟನೆಯು ಸಾರ್ವಜನಿಕ ಸಮಾರಂಭಗಳಲ್ಲಿ ಡ್ರೆಸ್ ಕೋಡ್‌ ಬಗ್ಗೆ ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ.

ಟ್ರೋಲ್ ಗೆ ಗುರಿಯಾದ ಅಮೃತಾ ಫಡ್ನವೀಸ್

ಗಣೇಶ ಚತುರ್ಥಿಯ 10 ದಿನಗಳ ಹಬ್ಬ ಮುಗಿಯುತ್ತಿದ್ದಂತೆಯೇ ಸಾವಿರಾರು ಗಣೇಶ ಮೂರ್ತಿಗಳ ವಿಸರ್ಜನೆ ನಂತರ ಭಾನುವಾರ ಮುಂಬೈಯ ಜುಹು ಬೀಚ್ ನಲ್ಲಿ ಅಮೃತ ಫಡ್ನವೀಸ್ ಬೀಚ್ ಸ್ವಚ್ಛತೆಯ ಕಾರ್ಯಕ್ರಮ ಆಯೋಜಿಸಿದ್ದರು.

ಅಮೃತಾ ಫಡ್ನವೀಸ್ ಸ್ಥಾಪಿಸಿರುವ ಎನ್‌ಜಿಒ ದಿವ್ಯಾಜ್ ಫೌಂಡೇಶನ್ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಭಾಗವಹಿಸಿದ್ದರು.

ಈ ಕಾರ್ಯಕ್ರಮದ ವಿಡಿಯೋಗಳು ವೈರಲ್ ಆಗಿದ್ದು, ಅನೇಕ ನೆಟ್ಟಿಗರು ಅಮೃತಾ ಧರಿಸಿದ್ದ ಬಟ್ಟೆ ತೀರಾ ಕೆಟ್ಟದಾಗಿದೆ ಎಂದು ಟೀಕಿಸುತ್ತಿದ್ದಾರೆ. ಮತ್ತೆ ಕೆಲವರು ಅದು ಅವರ ಇಷ್ಟ ಎಂದು ಹೇಳುವ ಮೂಲಕ ಸಮರ್ಥಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ

Bengaluru tunnel project: ಟ್ರಾಫಿಕ್ ಸಮಸ್ಯೆ ಹೋಗಲಾಡಿಸುವ ಯೋಜನೆಗೆ ವಿರೋಧವೇಕೆ? ಸಿಎಂ ಸಿದ್ದರಾಮಯ್ಯ

ನನ್ನ ಮೇಲೆ ಒತ್ತಡ ಹೇರಲು ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿತ್ತು : ನಿವೃತ್ತ ಸಿಜೆಐ ಸ್ಫೋಟಕ ಹೇಳಿಕೆ; ಮಾಜಿ CJI ಆರೋಪ ಯಾರ ವಿರುದ್ಧ?

ಫಲೋಡಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಯಾತ್ರಾರ್ಥಿಗಳ ಸಾವು!

News healines 02-11-2025| ಟನಲ್ ರಸ್ತೆ: ಟನಲ್ ರಸ್ತೆ: ಅಶೋಕ್ ನೇತೃತ್ವದಲ್ಲಿ ಸಮಿತಿಗೆ ಸಿದ್ಧ-DCM; ಮದರಸಾ ಉರ್ದು ಶಾಲೆಗಳಲ್ಲಿ ಕನ್ನಡ ಕಡ್ಡಾಯ- ಜಮೀರ್ ಅಹ್ಮದ್ ಖಾನ್

SCROLL FOR NEXT