ದೇಶ

ದೋಹಾ ಮೇಲೆ ಇಸ್ರೇಲ್ ದಾಳಿ: ಭಾರತ ತೀವ್ರ ಕಳವಳ

ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಅಪಾಯವಾಗದಂತೆ ಸಂಯಮದಿಂದ ವರ್ತಿಸುವಂತೆ ಭಾರತ ಕರೆ ನೀಡಿದೆ.

ನವದೆಹಲಿ: ಕತಾರ್‌ ರಾಜಧಾನಿ ದೋಹಾದಲ್ಲಿ ನೆಲಸಿರುವ ಹಮಾಸ್‌ ಸಂಘಟನೆಯ ನಾಯಕರನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿ ಮತ್ತು ಆ ಪ್ರದೇಶದ ಭದ್ರತಾ ಪರಿಸ್ಥಿತಿಯ ಮೇಲೆ ಅದರ ಸಂಭಾವ್ಯ ಪರಿಣಾಮದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.

ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಅಪಾಯವಾಗದಂತೆ ಸಂಯಮದಿಂದ ವರ್ತಿಸುವಂತೆ ಭಾರತ ಕರೆ ನೀಡಿದೆ.

ದೋಹಾದಲ್ಲಿ ಇಸ್ರೇಲ್ ನಡೆಸಿದ ದಾಳಿಗಳ ಬಗ್ಗೆ ವರದಿಗಳು ಬಂದಿವೆ. ಈ ಬೆಳವಣಿಗೆ ಮತ್ತು ಆ ಪ್ರದೇಶದ ಭದ್ರತಾ ಪರಿಸ್ಥಿತಿಯ ಮೇಲೆ ಅದರ ಪರಿಣಾಮದ ಬಗ್ಗೆ ನಾವು ತೀವ್ರ ಕಳವಳಗೊಂಡಿದ್ದೇವೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ.

ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಅಪಾಯವಾಗದಂತೆ ನಾವು ಸಂಯಮ ಮತ್ತು ರಾಜತಾಂತ್ರಿಕತೆಯನ್ನು ಬಲವಾಗಿ ಒತ್ತಾಯಿಸುತ್ತೇವೆ ಎಂದು ಹೇಳಿದೆ.

ಕತಾರ್‌ನಲ್ಲಿ ಹಮಾಸ್ ನಾಯಕತ್ವವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿತು, ಅಲ್ ಜಜೀರಾ ಪ್ರಸಾರ ಮಾಡಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ದೋಹಾದ ರಾಜತಾಂತ್ರಿಕ ಕ್ವಾರ್ಟರ್‌ನಲ್ಲಿ ಹಮಾಸ್‌ನ ರಾಜಕೀಯ ವಿಭಾಗವನ್ನು ಹೊಂದಿರುವ ಕಟ್ಟಡಗಳ ಮೇಲೆ ದಾಳಿ ನಡೆಸಲಾಗಿದೆ.

ಹಮಾಸ್, ತನ್ನ ಎಲ್ಲಾ ನಾಯಕರು ದಾಳಿಯಿಂದ ಬದುಕುಳಿದರು ಆದರೆ ಐದು ಕೆಳ ಶ್ರೇಣಿಯ ಸದಸ್ಯರು ಮೃತಪಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ತನ್ನ ಆಂತರಿಕ ಭದ್ರತಾ ಪಡೆಯ ಸದಸ್ಯನೊಬ್ಬ ದಾಳಿಯಲ್ಲಿ ಮೃತಪಟ್ಟು ಇತರರು ಗಾಯಗೊಂಡಿದ್ದಾರೆ ಎಂದು ಕತಾರ್ ಹೇಳಿದೆ.

ಗಾಜಾ ಪಟ್ಟಿಯಲ್ಲಿನ ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನಗಳಲ್ಲಿ ಕತಾರ್ ಪ್ರಮುಖ ಸಂಧಾನಕಾರನಾಗಿ ಸೇವೆ ಸಲ್ಲಿಸಿದೆ. ಈ ದಾಳಿಯು ಆ ಪ್ರಯತ್ನಗಳನ್ನು ಸ್ಥಗಿತಗೊಳಿಸುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ದಾಳಿಯನ್ನು ಖಂಡಿಸಿದ್ದಾರೆ.ಎಲ್ಲಾ ಪಕ್ಷಗಳು ಶಾಶ್ವತ ಕದನ ವಿರಾಮವನ್ನು ಸಾಧಿಸುವತ್ತ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!