ಹಾರ್ದಿಕ್ ಪಟೇಲ್ 
ದೇಶ

ಪಾಟೀದಾರ್ ಪ್ರತಿಭಟನೆ ಪ್ರಕರಣ: ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ವಿರುದ್ಧ ಬಂಧನ ವಾರಂಟ್

ಆಗ ಪಾಟೀದಾರ್ ಮೀಸಲಾತಿ ಆಂದೋಲನದ ನಾಯಕರಾಗಿದ್ದ ಹಾರ್ದಿಕ್ ತಮ್ಮ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ಅಹಮದಾಬಾದ್: ಗುಜರಾತ್‌ನ ಪಾಟೀದಾರ್ ಮೀಸಲಾತಿ ಆಂದೋಲನ ಭೂತ ಮತ್ತೆ ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ಅವರನ್ನು ಕಾಡುತ್ತಿದ್ದು, 2018 ರ ಗಲಭೆ ಪ್ರಕರಣದಲ್ಲಿ ಪಟೇಲ್ ಮತ್ತು ಇತರ ಇಬ್ಬರ ವಿರುದ್ಧ ಅಹಮದಾಬಾದ್ ಗ್ರಾಮೀಣ ನ್ಯಾಯಾಲಯವು ಬುಧವಾರ ಬಂಧನ ವಾರಂಟ್ ಹೊರಡಿಸಿದೆ.

ಪದೇ ಪದೇ ನ್ಯಾಯಾಲಯಕ್ಕೆ ಗೈರು ಹಾಜರಾಗುತ್ತಿರುವ ಹಾರ್ದಿಕ್ ಪಟೇಲ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದ್ದು, ಗುಜರಾತ್‌ನಲ್ಲಿ ಕಾನೂನು, ರಾಜಕೀಯ ಮತ್ತು ಸಮುದಾಯದ ಭಾವನೆಗಳ ನಡುವಿನ ತೀವ್ರ ಘರ್ಷಣೆಗೆ ಕಾರಣವಾಗುವ ಸಾಧ್ಯತೆ ಇದೆ.

ಈ ಪ್ರಕರಣವು ಆಗಸ್ಟ್ 2018 ರಲ್ಲಿ ಆರಂಭವಾಗಿದ್ದು, ಆಗ ಪಾಟೀದಾರ್ ಮೀಸಲಾತಿ ಆಂದೋಲನದ ನಾಯಕರಾಗಿದ್ದ ಹಾರ್ದಿಕ್ ತಮ್ಮ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ಅಹಮದಾಬಾದ್‌ನ ನಿಕೋಲ್ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ಹಾರ್ದಿಕ್ ಮತ್ತು ಅವರ ಸಹಾಯಕರ ವಿರುದ್ಧ ಗಲಭೆ, ಹಿಂಸಾಚಾರಕ್ಕೆ ಪ್ರಚೋದನೆ ಮತ್ತು ಸಾರ್ವಜನಿಕ ಆಸ್ತಿಗಳ ನಾಶಪಡಿಸಿದ ಪ್ರಕರಣ ದಾಖಲಿಸಲಾಗಿದೆ.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಹಾರ್ದಿಕ್ ವಿಚಾರಣೆಗೆ ಹಾಜರಾಗಲು ಪದೇ ಪದೇ ವಿಫಲರಾಗಿದ್ದಾರೆ. ಅವರ ನಿರಂತರ ಗೈರು ಹಾಜರಿಯಿಂದ ಕೋಪಗೊಂಡ ನ್ಯಾಯಾಲಯ, ಅವರನ್ನು ತಕ್ಷಣ ಬಂಧಿಸುವಂತೆ ಆದೇಶಿಸಿದೆ.

ಅಹಮದಾಬಾದ್ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತಂಡಗಳನ್ನು ಸಿದ್ಧಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು

SCROLL FOR NEXT