ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ 
ದೇಶ

Chhattisgarh: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲೀಯರು ಎನ್ ಕೌಂಟರ್ ನಲ್ಲಿ ಹತ್ಯೆ!

ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.

ಗರಿಯಾಬಾದ್: ಛತ್ತೀಸ್‌ಗಢದ ಗರಿಯಾಬಾದ್ ಜಿಲ್ಲೆಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಹಿರಿಯ ನಾಯಕ ಸೇರಿದಂತೆ 10 ನಕ್ಸಲೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಹತ್ಯೆಯಾದವರಲ್ಲಿ ತಲೆಗೆ ರೂ. 1 ಕೋಟಿ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಮನೋಜ್ ಕೂಡಾ ಒಬ್ಬರಾಗಿದ್ದಾರೆ. ಈತ ಮೊಡೆಮ್ ಬಾಲಕೃಷ್ಣ ಎಂದು ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ.

ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.

ಬೆಳಗ್ಗೆಯಿಂದಲೇ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಹಲವು ಹಿರಿಯ ನಕ್ಸಲ್ ನಾಯಕರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್ ಕೋಬ್ರಾ ಕಮಾಂಡೋಗಳು ಮತ್ತು ಛತ್ತೀಸ್‌ಗಢ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಹಿರಿಯ ನಕ್ಸಲ್ ನಾಯಕ ಮನೋಜ್ ಸೇರಿದಂತೆ 10 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾರ್ಯಾಚರಣೆ ಮುಗಿದ ನಂತರ ಪ್ರತ್ಯೇಕವಾಗಿ ಸಮಗ್ರ ವಿವರ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗರಿಯಾಬಂದ್ ಜಿಲ್ಲೆಯಲ್ಲಿ ನಡೆಯುತ್ತಿರುವ ನಕ್ಸಲ್ ನಿರ್ಮೂಲನಾ ಕಾರ್ಯಾಚರಣೆಯ ಭಾಗವಾಗಿ ಈ ಕಾರ್ಯಾಚರಣೆ ನಡೆದಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'