ಸಾಂದರ್ಭಿಕ ಚಿತ್ರ 
ದೇಶ

ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ ಆರನೇ ಬಲಿ; ಇನ್ನೂ 10 ರೋಗಿಗಳಿಗೆ ಚಿಕಿತ್ಸೆ

ಪ್ರಸ್ತುತ, ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ 10 ರೋಗಿಗಳು "ಮೆದುಳು ತಿನ್ನುವ" ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಝಿಕೋಡ್: ಕೇರಳದ ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ಮೆದುಳು ತಿನ್ನುವ ಸೋಂಕಿಗೆ ಮತ್ತೊಬ್ಬ ರೋಗಿ ಬಲಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಅಪರೂಪದ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌ (Amoebic meningoencephalitis) ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮಲಪ್ಪುರಂ ಜಿಲ್ಲೆಯ ಚೆಲಂಬ್ರಾದ ಶಾಜಿ(47) ಅವರು ಕೇರಳದಲ್ಲಿ "ಮೆದುಳು ತಿನ್ನುವ" ಸೋಂಕಿಗೆ ಬಲಿಯಾದ ಆರನೇ ವ್ಯಕ್ತಿಯಾಗಿದ್ದಾರೆ.

ವೈದ್ಯಕೀಯ ಕಾಲೇಜು ಅಧಿಕಾರಿಗಳ ಪ್ರಕಾರ, ಶಾಜಿಯನ್ನು ಆಗಸ್ಟ್ 9 ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಸ್ಥಿತಿ ಗಂಭೀರವಾಯಿತು ಮತ್ತು ಇಂದು ಬೆಳಗ್ಗೆ ಅವರು ನಿಧನರಾದರು. ಅಗತ್ಯ ಕಾರ್ಯವಿಧಾನಗಳು ಪೂರ್ಣಗೊಂಡ ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದ್ದಾರೆ.

ಕಲುಷಿತ ನೀರಿನಲ್ಲಿ ಇರುವ ಅಮೀಬಾದಿಂದ ಬರುವ ಈ ಸೋಂಕು ಅವರಿಗೆ ಹೇಗೆ ತಗುಲಿತು ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಪ್ರಸ್ತುತ, ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ 10 ರೋಗಿಗಳು "ಮೆದುಳು ತಿನ್ನುವ" ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ, ಮಲಪ್ಪುರಂ ಜಿಲ್ಲೆಯ ವಂಡೂರಿನ 54 ವರ್ಷದ ಮಹಿಳೆ ಕೂಡ ಈ ಕಾಯಿಲೆಯಿಂದ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಾಹಸಸಿಂಹ ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಣೆ

'ರಷ್ಯಾದ ತೈಲ ಖರೀದಿಯನ್ನು ಭಾರತ ತಕ್ಷಣ ನಿಲ್ಲಿಸಲೇಬೇಕು, ಇಲ್ಲದಿದ್ದರೆ...: ಮತ್ತೆ ಬೆದರಿಕೆ ಹಾಕಿದ ಅಮೆರಿಕ ಸಚಿವ ಲುಟ್ನಿಕ್!

ಟ್ರಂಪ್ ಮಿತ್ರ ಚಾರ್ಲಿ ಕಿರ್ಕ್ ಹತ್ಯೆಗೆ ಬಳಸಿದ್ದ ರೈಫಲ್ ಪತ್ತೆ-ಎಫ್‌ಬಿಐ; 'ಕಾಲೇಜು ವಯಸ್ಸಿನ ಯುವಕನಿಂದ ಕೃತ್ಯ!

Manipur: ಪ್ರಧಾನಿ ಮೋದಿ ಮಣಿಪುರ ಭೇಟಿಗೂ ಮುನ್ನ ಬಿಜೆಪಿ ಸದಸ್ಯರ ಸಾಮೂಹಿಕ ರಾಜೀನಾಮೆ! ಕಾರಣವೇನು?

BCCI ಮುಂದಿನ ಅಧ್ಯಕ್ಷರಾಗಿ ಸಚಿನ್ ತೆಂಡೂಲ್ಕರ್?

SCROLL FOR NEXT