ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ದೋಡಾದಲ್ಲಿ ಕಡಿಮೆ ತೀವ್ರತೆಯ ಸ್ಫೋಟ, ಇಬ್ಬರ ಬಂಧನ!

ಜಾಮಿಯಾ ಮಸೀದಿ ಬಳಿಯ ದುಮ್ರಿ-ತುಕರ್ ಮೊಹಲ್ಲಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಆದರೆ ಸ್ಫೋಟದಲ್ಲಿ ಯಾರಿಗೂ ಗಾಯಗಳಾಗಿಲ್ಲ.

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾದ ಮನೆಯೊಂದರಲ್ಲಿ ಗುರುವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭಿವಿಸಿದ ನಂತರ ಇಬ್ಬರನ್ನು ಬಂಧಿಸಲಾಗಿದೆ. ಇದು ಈಗಾಗಲೇ ರಾಜಕೀಯ ಅಶಾಂತಿಯಿಂದ ನಲುಗುತ್ತಿರುವ ಜಿಲ್ಲೆಯಲ್ಲಿ ಹೊಸ ಆತಂಕ ಮೂಡಿಸಿದೆ.

ಪೋಲೀಸರು ಮತ್ತು ವಿಧಿವಿಜ್ಞಾನ ತಜ್ಞರು ಸ್ಫೋಟದ ತನಿಖೆ ನಡೆಸುತ್ತಿದ್ದಾರೆ. "ಸ್ಟಿಕ್ ಗ್ರೆನೇಡ್" ನಿಂದ ಈ ಸ್ಪೋಟ ಸಂಭವಿಸಿದೆ ಎನ್ನಲಾಗಿದೆ. ತನ್ನ ಮನೆಯ ಕಸದಲ್ಲಿ ಇದು ಕಂಡುಬಂದಿದೆ ಎಂದು ಹುಸೇನ್ ಎಂಬಾತ ಹೇಳಿಕೊಂಡಿದ್ದಾನೆ.

ಜಾಮಿಯಾ ಮಸೀದಿ ಬಳಿಯ ದುಮ್ರಿ-ತುಕರ್ ಮೊಹಲ್ಲಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಆದರೆ ಸ್ಫೋಟದಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಜಾವೇದ್ ಹುಸೇನ್ ಅವರ ಮನೆಯ ಪ್ರವೇಶದ್ವಾರದಲ್ಲಿ ಚೂರುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಕೂಡಲೇ ಸುತ್ತಮುತ್ತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸ್ಫೋಟದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಹುಸೇನ್ ಮತ್ತು ಖುರ್ಷಿದ್ ಎಂಬ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಹುಸೇನ್ ಅವರ ದಿವಂಗತ ತಂದೆ ಅಬ್ದುಲ್ ಅಹದ್ ಇಟೂ ತನ್ನ ಮನೆಯಲ್ಲಿ ಆಗಾಗ್ಗೆ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದರು. ಇದೇ ಮನೆಯಲ್ಲಿ 1996ರಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆಗೈಯಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಹಾಲಿ ಶಾಸಕ ಮೆಹರಾಜ್ ಮಲಿಕ್ ಅವರನ್ನು ಜಿಲ್ಲಾಡಳಿತ ಕಠಿಣ ಸಾರ್ವಜನಿಕ ಭದ್ರತಾ ಕಾಯ್ದೆ (PSA) ಅಡಿಯಲ್ಲಿ ಬಂಧಿಸಿದ ನಂತರ ದೋಡಾದಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವಂತೆಯೇ ಈ ಸ್ಫೋಟ ನಡೆದಿದೆ. ಜಿಲ್ಲಾಡಳಿತ ಮೊಬೈಲ್ ಇಂಟರ್ನೆಟ್ ಮತ್ತು ವೈಫೈ ಸೇವೆಗಳನ್ನು ಸ್ಥಗಿತಗೊಳಿಸಿದೆ. ಮಲಿಕ್ ಅವರನ್ನು ಬಂಧಿಸಿದಾಗಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ. ಇದು ಘರ್ಷಣೆಗೆ ಕಾರಣವಾಗಿದ್ದು, 80ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್