ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್  online desk
ದೇಶ

ಸೇನೆಗೆ ಭಾರತೀಯ ಪ್ರಜೆಗಳ ಸೇರ್ಪಡೆ: ನೇಮಕಾತಿ ಕೈಬಿಟ್ಟು, ನಮ್ಮ ನಾಗರೀಕರ ಬಿಡುಗಡೆಗೊಳಿಸಿ; ರಷ್ಯಾಗೆ ಭಾರತ ಆಗ್ರಹ

ಇತ್ತೀಚೆಗೆ ರಷ್ಯಾದ ಸೈನ್ಯಕ್ಕೆ ಭಾರತೀಯರನ್ನ ನೇಮಸಿಕೊಳ್ಳಲಾಗಿದೆ ಎಂಬ ವರದಿಗಳನ್ನ ನೋಡಿದ್ದೇವೆ. ಕಳೆದ ಒಂದು ವರ್ಷದಿಂದ ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಇದರಲ್ಲಿನ ಅಪಾಯಗಳನ್ನ ಒತ್ತಿ ಹೇಳಿದೆ.

ನವದಹಲಿ: ಸೇನೆಗೆ ಭಾರತೀಯ ಪ್ರಜೆಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ರಷ್ಯಾ ನಡೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ನೇಮಕಾತಿ ಕೈಬಿಟ್ಟು ಕೂಡಲೇ ಭಾರತೀಯರನ್ನು ಬಿಡುಗಡೆಗೊಳಿಸುವಂತೆ ಗುರುವಾರ ಆಗ್ರಹಿಸಿದೆ.

ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ಹೋರಾಡಲು ಭಾರತೀಯರು ರಷ್ಯಾ ಸೇನೆ ಸೇರುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಹೀಗೆ ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ದೂರಬೇಕು. ಏಕೆಂದರೆ ಇದು ತುಂಬಾ ಅಪಾಯಕಾರಿ ನಡೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಇತ್ತೀಚೆಗೆ ರಷ್ಯಾದ ಸೈನ್ಯಕ್ಕೆ ಭಾರತೀಯರನ್ನ ನೇಮಸಿಕೊಳ್ಳಲಾಗಿದೆ ಎಂಬ ವರದಿಗಳನ್ನ ನೋಡಿದ್ದೇವೆ. ಕಳೆದ ಒಂದು ವರ್ಷದಿಂದ ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಇದರಲ್ಲಿನ ಅಪಾಯಗಳನ್ನ ಒತ್ತಿ ಹೇಳಿದೆ. ಇದೀಗ ಮತ್ತೆ ಭಾರತೀಯರಿಗೆ ಎಚ್ಚರಿಕೆ ನೀಡುತ್ತಿದ್ದೇವೆಂದು ತಿಳಿಸಿದೆ.

ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ ಅಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಿದ್ದೇವೆ. ಈ ಪದ್ದತಿಯನ್ನ ಕೊನೆಗೊಳಿಸಬೇಕು. ನಮ್ಮ ಪ್ರಜೆಗಳನ್ನು ಬಿಡುಗಡೆ ಮಾಡಬೇಕು ಎಂದು ಕೇಳಿಕೊಂಡಿದ್ದೇವೆ. ರಷ್ಯಾ ಸೇನೆಯಲ್ಲಿ ಸಿಲುಕಿರುವ ಕುಟುಂಬದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ ಎಂದು ಸಚಿವಾಲಯ ತಿಳಿಸಿದೆ.

ಇದೇ ವೇಳೆ ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯ ಪ್ರಜೆಗಳು ಇದರಿಂದ ದೂರವಿರಬೇಕೆಂದು ಹೇಳಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ. ಇದು ತುಂಬಾ ಅಪಾಯಕಾರಿಯಾದ ನಡೆ ಎಂದೂ ಎಚ್ಚರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ABVP ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದೇನು? Video

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ; BMTC ಡ್ರೈವರ್ ತಾತ್ಕಾಲಿಕ ವಜಾ; ಮುತ್ತಿಕ್ಕುವಂತೆ ಪೀಡಿಸಿದ ಚಾಲಕ ಆರೀಫ್‍ಗೆ ಧರ್ಮದೇಟು!

ನಿಮ್ಮ ಕಲ್ಪನೆಗೂ ಒಂದು ಮಿತಿ ಇರಲಿ: ವಿನಯ್ ಜತೆ ಸುತ್ತಾಟ ಎಂದವರಿಗೆ ರಮ್ಯಾ ತಿರುಗೇಟು

'ರಾಜಕೀಯವಾಗಿ ನನ್ನನ್ನು ಟಾರ್ಗೆಟ್ ಮಾಡಲು 'Paid campaign': ಕೇಂದ್ರ ಸಚಿವ ನಿತಿನ್ ಗಡ್ಕರಿ ಆಕ್ರೋಶ!

2ನೇ ಸ್ಥಾನಕ್ಕೆ ಕುಸಿದ ಕೆಲ ಗಂಟೆಗಳಲ್ಲೇ Larry ellison ಹಿಂದಿಕ್ಕಿ ಮತ್ತೆ ವಿಶ್ವದ ಅತ್ಯಂತ ಶ್ರೀಮಂತ ಪಟ್ಟಕೇರಿದ Elon Musk!

SCROLL FOR NEXT