ಬೀದಿ ನಾಯಿ 
ದೇಶ

Thane: ಒಂದೇ ದಿನದಲ್ಲಿ 67 ನಾಯಿ ಕಡಿತ ಪ್ರಕರಣ ವರದಿ; ಸ್ಥಳೀಯರಲ್ಲಿ ಆತಂಕ

ಶನಿವಾರ ಕಲ್ಯಾಣ ಮತ್ತು ಡೊಂಬಿವ್ಲಿ ಪಟ್ಟಣಗಳಲ್ಲಿ ಒಟ್ಟು 67 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿ ಡಾ. ದೀಪಾ ಶುಕ್ಲಾ ತಿಳಿಸಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ಮತ್ತು ಡೊಂಬಿವ್ಲಿ ಪ್ರದೇಶದ ವ್ಯಾಪ್ತಿಯಲ್ಲಿ ಒಂದೇ ದಿನದಲ್ಲಿ 67 ಮಂದಿ ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲವು ವಾರಗಳಿಂದ, ಈ ಪ್ರದೇಶದಲ್ಲಿ ನಾಯಿ ಕಡಿತದ ಘಟನೆಗಳು ವಿರಳವಾಗಿ ಸಂಭವಿಸುತ್ತಿದ್ದವು. ಆದರೆ ಶನಿವಾರ ಕಲ್ಯಾಣ ಮತ್ತು ಡೊಂಬಿವ್ಲಿ ಪಟ್ಟಣಗಳಲ್ಲಿ ಒಟ್ಟು 67 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿ ಡಾ. ದೀಪಾ ಶುಕ್ಲಾ ತಿಳಿಸಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.

ಕಲ್ಯಾಣ, ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಕೆಡಿಎಂಸಿ) ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಈ ಘಟನೆಗಳಿಗೆ ಕಾರಣವಾಗಿದೆ. ನಾಯಿ ಕಡಿತಕ್ಕೆ ಒಳಗಾದವರಿಗೆ ರೇಬೀಸ್ ನಿರೋಧಕ ಲಸಿಕೆ ಸೇರಿದಂತೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಕೆಡಿಎಂಸಿ ನಿಯಮಿತವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುತ್ತಿದೆ. ಪ್ರತಿ ತಿಂಗಳು 1,000 ರಿಂದ 1,100 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದೂ ಅವರು ಹೇಳಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ನಿವಾಸಿಗಳು ತುರ್ತು ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್