ಪೊಲೀಸ್ ವಾಹನದಲ್ಲಿ ಕುಳಿತಿದ್ದ ಕುಡುಕರು 
ದೇಶ

'ಎಣ್ಣೆಬೇಕು ಅಣ್ಣಾ..': ಪೊಲೀಸ್ ವಾಹನದ ಕೀ ಕದ್ದು, ಮನೆಗೆ ಡ್ರಾಪ್ ಕೇಳಿದ ಕುಡುಕರು! Video

ಮದ್ಯ ಸೇವಿಸಿದ ಇಬ್ಬರು ವ್ಯಕ್ತಿಗಳು ಪೊಲೀಸರಿಂದಲೇ ಅವರ ಕಾರಿನ ಕೀ ಕದ್ದಿದ್ದಾರೆ. ಬಳಿಕ ಬೊಲೆರೋ ಕಾರಿನೊಳಗೆ ಕುಳಿತು ತಮ್ಮನ್ನು ಮನೆಗೆ ಡ್ರಾಪ್ ಮಾಡುವಂತೆ ಒತ್ತಾಯಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಭುವನೇಶ್ವರ: ಮದ್ಯದ ಅಮಲಿನಲ್ಲಿದ್ದವ ಯಾರ ಮಾತನ್ನೂ ಕೇಳುವುದಿಲ್ಲ ಎಂಬ ಮಾತಿದೆ.. ಆದರೆ ಇಲ್ಲಿ ಇಬ್ಬರು ಭೂಪರು ಕಂಠಪೂರ್ತಿ ಮದ್ಯಸೇವಿಸಿ ಪೊಲೀಸರನ್ನೇ ಮನೆಗೆ ಡ್ರಾಪ್ ಮಾಡುವಂತೆ ಕೇಳಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಹೌದು.. ಒಡಿಶಾದಲ್ಲಿ ಈ ಘಟನೆ ನಡೆದಿದ್ದು, ಮದ್ಯ ಸೇವಿಸಿದ ಇಬ್ಬರು ವ್ಯಕ್ತಿಗಳು ಪೊಲೀಸರಿಂದಲೇ ಅವರ ಕಾರಿನ ಕೀ ಕದ್ದಿದ್ದಾರೆ. ಬಳಿಕ ಬೊಲೆರೋ ಕಾರಿನೊಳಗೆ ಕುಳಿತು ತಮ್ಮನ್ನು ಮನೆಗೆ ಡ್ರಾಪ್ ಮಾಡುವಂತೆ ಒತ್ತಾಯಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಪೊಲೀಸ್ ಅಧಿಕಾರಿ ವಾಹನದ ಕೀ ಕೊಡುವಂತೆ ಕೇಳಿದರೂ ಕೊಡದ ಕುಡುಕರು, “ನಮಗೆ ಹಕ್ಕುಗಳು ಬೇಕು”.. ಮನೆಗೆ ನಮ್ಮನ್ನು ಡ್ರಾಪ್ ಮಾಡಿ ಎಂದು ಕೂಗಾಡಿದ್ದಾನೆ. ಈ ವೇಳೆ ಪೊಲೀಸ್ ಅಧಿಕಾರಿ ನಿರಾಶೆಗೊಂಡು ಅವನ ಮತ್ತು ಅವನ ಸ್ನೇಹಿತನ ಮೇಲೆ ಕೂಗಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಈ ಕಾರು ನಮ್ಮ ತೆರಿಗೆ ಹಣದಿಂದ ಖರೀದಿ ಮಾಡಿದ್ದು, ಹೀಗಾಗಿ ಇದು ನಮಗೆ ಸೇರಿದ್ದು. ನಮ್ಮನ್ನು ಮನೆಗೆ ಡ್ರಾಪ್ ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದು ವಾದಿಸಿದ್ದಾನೆ. ಅದು ಸಾಧ್ಯವಿಲ್ಲ ಎಂದು ಅಧಿಕಾರಿ ಹೇಳಿದಾಗ ನಾವೇನೂ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿಲ್ಲ. ಬದಲಿಗೆ ನಮ್ಮನ್ನು ಮನೆಗೆ ಬಿಡುವಂತೆ ಕೇಳುತ್ತಿದ್ದೇವೆ. ಅದೇನೂ ತಪ್ಪಲ್ಲವಲ್ಲ ಎಂದು ವಾದಿಸಿದ್ದಾರೆ.

ಈ ವೇಳೆ ತಾಳ್ಮೆ ಕಳೆದುಕೊಂಡ ಪೊಲೀಸರು ಬಲವಂತವಾಗಿ ಅವರ ಜೇಬಿಗೆ ಕೈ ಹಾಕಿ ಕೀ ಹುಡುಕಿದ್ದಾರೆ. ಈ ವೇಳೆ ಕುಡುಕ ಯುವಕರು ಮಾತಿನ ಚಕಮಕಿ ನಡೆಸಿದ್ದಾರೆ. ವಿಡಿಯೋದ ಅಂತ್ಯದಲ್ಲಿ ಯುವಕರು ತಾವು ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳು ಎಂದು ಹೇಳಿಕೊಂಡಿದ್ದಾರೆ. ಬಳಿಕ ಇಬ್ಬರನ್ನೂ ಬಂಧಿಸಿ ದಂಡ ಹಾಕಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

SCROLL FOR NEXT