ಪ್ರಧಾನಿಗೆ ಸ್ವಾಗತ ಕೋರುವ ಬ್ಯಾನರ್  
ದೇಶ

Manipur: ಚುರಾಚಾಂದ್‌ಪುರದಲ್ಲಿ ಪ್ರಧಾನಿ ಬ್ಯಾನರ್‌ ಧ್ವಂಸ; ಇಬ್ಬರ ಬಂಧನ ವಿರೋಧಿಸಿ ಪ್ರತಿಭಟನೆ, ಭದ್ರತಾ ಪಡೆಗಳೊಂದಿಗೆ ಘರ್ಷಣೆ!

ಈ ಇಬ್ಬರು ಯುವಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಗುಂಪೊಂದು ಚುರಾಚಾಂದ್‌ಪುರದ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಆರಂಭಿಸಿದೆ.

ಚುರಾಚಾಂದ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಂಬಂಧಿಸಿದಂತೆ ಹಾಕಲಾಗಿದ್ದ ಬ್ಯಾನರ್‌ಗಳು ಮತ್ತು ಕಟೌಟ್‌ಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಿರುವುದನ್ನು ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸಿದ ಉದ್ರಿಕ್ತ ಗುಂಪೊಂದು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದೆ.

ಸೆಪ್ಟೆಂಬರ್ 11 ರ ರಾತ್ರಿ, ಪಿಯರ್ಸನ್‌ಮುನ್ ಮತ್ತು ಫೈಲಿಯನ್ ಬಜಾರ್‌ನಲ್ಲಿ ಹಾಕಲಾಗಿದ್ದ ಹಲವಾರು ಬ್ಯಾನರ್‌ಗಳು ಮತ್ತು ಕಟೌಟ್‌ಗಳನ್ನು ಧ್ವಂಸಗೊಳಿಸಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ಹಲವು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ನಂತರ ಅವರೆಲ್ಲರನ್ನೂ ಬಿಡುಗಡೆ ಮಾಡಲಾಗಿದ್ದು, ಇಬ್ಬರು ಯುವಕರನ್ನು ಬಂಧಿಸಲಾಗಿದೆ.

ಈ ಇಬ್ಬರು ಯುವಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಗುಂಪೊಂದು ಚುರಾಚಂದ್‌ಪುರದ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಆರಂಭಿಸಿದೆ. ಪರಿಸ್ಥಿತಿ ಉದ್ರಿಕ್ತಗೊಳ್ಳುತ್ತಿದ್ದಂತೆಯೇ ಪ್ರತಿಭಟನಾಕಾರರು ಭದ್ರತಾ ಪಡೆಗಳತ್ತ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೇ 2023 ರಲ್ಲಿ ಕುಕಿಗಳು ಮತ್ತು ಮೈಟೀಸ್ ನಡುವೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಇದೇ ಮೊದಲ ಬಾರಿಗೆ ಶನಿವಾರ ಪ್ರಧಾನಿ ಮೋದಿ ಮಣಿಪುರ ರಾಜ್ಯಕ್ಕೆ ಭೇಟಿ ನೀಡಿದರು. ಅವರು ಚುರಾಚಾಂದ್‌ಪುರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಜ್ಯವನ್ನು 'ಶಾಂತಿಯ ಸಂಕೇತ'ವಾಗಿ ಮಾಡುವ ಭರವಸೆ ನೀಡಿದ್ದರು. ಜಿಲ್ಲೆಯಲ್ಲಿ ಹಿಂಸಾಚಾರದಿಂದ ಸಂತ್ರಸ್ತರಾದ ಜನರನ್ನು ಭೇಟಿ ಮಾಡಿದ ಅವರು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT