ಸಾಂದರ್ಭಿಕ ಚಿತ್ರ 
ದೇಶ

Uttar Pradesh: ತಾಯಿ ಬೈದಿದ್ದಕ್ಕೆ ಆರನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಬಾಲಕನ ತಾಯಿ ಕಾರ್ಖಾನೆಯೊಂದಕ್ಕೆ ಕೆಲಸಕ್ಕೆ ತೆರಳುವ ಮುನ್ನ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ಆತನನ್ನು ಗದರಿಸಿ ಕೊಠಡಿಯೊಂದರಲ್ಲಿ ಕೂಡಿಹಾಕಿದ್ದಾಳೆ.

ಮೊರಾದಾಬಾದ್: ಇತ್ತೀಚಿಗೆ ಮಕ್ಕಳಲ್ಲಿ ಆತ್ಮಹತ್ಯೆ ಪಿಡುಗು ಹೆಚ್ಚಾಗುತ್ತಿದೆ. ತಾಯಿ ಬೈದಿದ್ದಕ್ಕೆ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು 6ನೇ ತರಗತಿ ವಿದ್ಯಾರ್ಥಿ ಕೃಷ್ಣ ಎಂದು ಗುರುತಿಸಲಾಗಿದೆ.

ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಬಾಲಕನ ತಾಯಿ ಕಾರ್ಖಾನೆಯೊಂದಕ್ಕೆ ಕೆಲಸಕ್ಕೆ ತೆರಳುವ ಮುನ್ನ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ಆತನನ್ನು ಗದರಿಸಿ ಕೊಠಡಿಯೊಂದರಲ್ಲಿ ಕೂಡಿಹಾಕಿದ್ದಾಳೆ.

ಬಳಿಕ ಸಂಜೆ ಮನೆಗೆ ಹಿಂತಿರುಗಿ ನೋಡಿದಾಗ ಮಗ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.

ಒಬ್ಬನೇ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿಶಾ, ತನ್ನ ಪತಿ ಸುನೀಲ್ ಮದ್ಯವ್ಯಸನಿಯಾಗಿದ್ದು, ಇತ್ತೀಚೆಗೆ ಜಗಳವಾಡಿಕೊಂಡು ಮನೆ ಬಿಟ್ಟು ಹೋಗಿದ್ದ ಎಂದು ವಿವರಿಸಿದ್ದಾರೆ. ಈ ಹಿಂದೆ ತನ್ನ ತಂದೆಯ ಹಿಂಸಾತ್ಮಕ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೃಷ್ಣ ಬೆದರಿಕೆ ಹಾಕಿದ್ದ ಎಂದು ನಿಶಾ ಪೊಲೀಸರಿಗೆ ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಇದುವರೆಗೆ ಯಾರ ವಿರುದ್ಧವೂ ಪೊಲೀಸ್ ವರದಿ ದಾಖಲಾಗಿಲ್ಲ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಕೋಟ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೇವೇಂದ್ರ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; ಕನಿಷ್ಠ 9 ಸಾವು, 20 ಜನರಿಗೆ ಗಾಯ; ದೆಹಲಿಯಲ್ಲಿ ಹೈ ಅಲರ್ಟ್; Video

Delhi ಸ್ಫೋಟ: ತನಿಖೆಗೆ ಕೈಜೋಡಿಸುವಂತೆ NIA, NSGಗೆ ಅಮಿತ್ ಶಾ ಆದೇಶ; ಕಾರು ಮಾಲೀಕ ವಶಕ್ಕೆ

Delhi ಕೆಂಪುಕೋಟೆ ಬಳಿ ಕಾರು ಸ್ಫೋಟ; ಬೆಂಗಳೂರಿನಲ್ಲೂ ತೀವ್ರ ಕಟ್ಟೆಚ್ಚರ; ಗಸ್ತು, ತಪಾಸಣೆ ಹೆಚ್ಚಿಸಲು ಸೂಚನೆ

Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

SCROLL FOR NEXT