ಯೋಗಿ ಆದಿತ್ಯನಾಥ್  online desk
ದೇಶ

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಪಾರದರ್ಶಕ ತನಿಖೆ ಮತ್ತು ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಸಿಂಗ್ ಹೇಳಿದರು.

ಲಖನೌ: ಈ ವಾರದ ಆರಂಭದಲ್ಲಿ ಘಾಜಿಪುರ ಜಿಲ್ಲೆಯಲ್ಲಿ ನಡೆದ ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿದ್ದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನ ಸಾವಿನ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ಭಾನುವಾರ ಎಸ್‌ಐಟಿ ರಚಿಸಿದೆ.

ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ಕಾಶಿ ವಲಯ ಡಿಸಿಪಿ ಗೌರವ್ ಬನ್ಸ್ವಾಲ್ ನೇತೃತ್ವ ವಹಿಸಲಿದ್ದು, ಹೆಚ್ಚುವರಿ ಕಮಿಷನರ್ (ವಾರಣಾಸಿ) ಅಂಶುಮಾನ್ ಮಿಶ್ರಾ ಮತ್ತು ಸಹಾಯಕ ಕಮಿಷನರ್ (ವಾರಣಾಸಿ ಕಂಟೋನ್ಮೆಂಟ್) ನಿತಿನ್ ತನೇಜಾ ಸದಸ್ಯರಾಗಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಎಸ್ಐಟಿ ರಚನೆಗೂ ಮುನ್ನ, ಬಿಜೆಪಿಯ ಘಾಜಿಪುರ ಉಸ್ತುವಾರಿ ರಾಕೇಶ್ ತ್ರಿವೇದಿ, ಜಿಲ್ಲಾಧ್ಯಕ್ಷ ಓಂ ಪ್ರಕಾಶ್ ರೈ ಮತ್ತು ಮಾಜಿ ಜಿಲ್ಲಾ ಮುಖ್ಯಸ್ಥ ಭಾನುಪ್ರತಾಪ್ ಸಿಂಗ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದರು.

ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಪಾರದರ್ಶಕ ತನಿಖೆ ಮತ್ತು ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಸಿಂಗ್ ಹೇಳಿದರು.

ಸೆಪ್ಟೆಂಬರ್ 9 ರಂದು, ನೋನ್ಹರಾ ಪೊಲೀಸ್ ಠಾಣೆಯ ಹೊರಗೆ ಸುಮಾರು 20-25 ಜನರು ವಿದ್ಯುತ್ ಕಂಬ ಅಳವಡಿಸುವುದನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದಾಗ ಬಿಜೆಪಿ ಕಾರ್ಯಕರ್ತ ಸಿಯಾರಾಮ್ ಉಪಾಧ್ಯಾಯ (35) ಗಾಯಗೊಂಡರು. ಸೆಪ್ಟೆಂಬರ್ 11 ರಂದು ಚಿಕಿತ್ಸೆಯ ಸಮಯದಲ್ಲಿ ಉಪಾಧ್ಯಾಯ ನಿಧನರಾದರು. ಘಟನೆಯ ನಂತರ ಆರು ಪೊಲೀಸರನ್ನು ಅಮಾನತುಗೊಳಿಸಲಾಯಿತು ಮತ್ತು ಐವರನ್ನು ಘಾಜಿಪುರ ಎಸ್ಪಿ ಪೊಲೀಸ್ ಲೈನ್‌ಗೆ ಕಳುಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ರಷ್ಯಾದ ಅತಿದೊಡ್ಡ ತೈಲ ಸಂಸ್ಕರಣಾಗಾರದ ಮೇಲೆ ಉಕ್ರೇನ್‌ನಿಂದ 361 ಡ್ರೋನ್‌ ದಾಳಿ; ಹೊತ್ತಿ ಉರಿದ ಘಟಕ!

SCROLL FOR NEXT