ಯೋಗಿ ಆದಿತ್ಯನಾಥ್  online desk
ದೇಶ

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಪಾರದರ್ಶಕ ತನಿಖೆ ಮತ್ತು ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಸಿಂಗ್ ಹೇಳಿದರು.

ಲಖನೌ: ಈ ವಾರದ ಆರಂಭದಲ್ಲಿ ಘಾಜಿಪುರ ಜಿಲ್ಲೆಯಲ್ಲಿ ನಡೆದ ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿದ್ದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನ ಸಾವಿನ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ಭಾನುವಾರ ಎಸ್‌ಐಟಿ ರಚಿಸಿದೆ.

ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ಕಾಶಿ ವಲಯ ಡಿಸಿಪಿ ಗೌರವ್ ಬನ್ಸ್ವಾಲ್ ನೇತೃತ್ವ ವಹಿಸಲಿದ್ದು, ಹೆಚ್ಚುವರಿ ಕಮಿಷನರ್ (ವಾರಣಾಸಿ) ಅಂಶುಮಾನ್ ಮಿಶ್ರಾ ಮತ್ತು ಸಹಾಯಕ ಕಮಿಷನರ್ (ವಾರಣಾಸಿ ಕಂಟೋನ್ಮೆಂಟ್) ನಿತಿನ್ ತನೇಜಾ ಸದಸ್ಯರಾಗಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಎಸ್ಐಟಿ ರಚನೆಗೂ ಮುನ್ನ, ಬಿಜೆಪಿಯ ಘಾಜಿಪುರ ಉಸ್ತುವಾರಿ ರಾಕೇಶ್ ತ್ರಿವೇದಿ, ಜಿಲ್ಲಾಧ್ಯಕ್ಷ ಓಂ ಪ್ರಕಾಶ್ ರೈ ಮತ್ತು ಮಾಜಿ ಜಿಲ್ಲಾ ಮುಖ್ಯಸ್ಥ ಭಾನುಪ್ರತಾಪ್ ಸಿಂಗ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದರು.

ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಪಾರದರ್ಶಕ ತನಿಖೆ ಮತ್ತು ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಸಿಂಗ್ ಹೇಳಿದರು.

ಸೆಪ್ಟೆಂಬರ್ 9 ರಂದು, ನೋನ್ಹರಾ ಪೊಲೀಸ್ ಠಾಣೆಯ ಹೊರಗೆ ಸುಮಾರು 20-25 ಜನರು ವಿದ್ಯುತ್ ಕಂಬ ಅಳವಡಿಸುವುದನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದಾಗ ಬಿಜೆಪಿ ಕಾರ್ಯಕರ್ತ ಸಿಯಾರಾಮ್ ಉಪಾಧ್ಯಾಯ (35) ಗಾಯಗೊಂಡರು. ಸೆಪ್ಟೆಂಬರ್ 11 ರಂದು ಚಿಕಿತ್ಸೆಯ ಸಮಯದಲ್ಲಿ ಉಪಾಧ್ಯಾಯ ನಿಧನರಾದರು. ಘಟನೆಯ ನಂತರ ಆರು ಪೊಲೀಸರನ್ನು ಅಮಾನತುಗೊಳಿಸಲಾಯಿತು ಮತ್ತು ಐವರನ್ನು ಘಾಜಿಪುರ ಎಸ್ಪಿ ಪೊಲೀಸ್ ಲೈನ್‌ಗೆ ಕಳುಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಷ್ಟ್ರಪತಿಗಳು, ರಾಜ್ಯಪಾಲರು ಮಸೂದೆ ಅಂಗೀಕರಿಸಲು ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ, ಹಾಗೆಂದು ಅನಿರ್ದಿಷ್ಟಾವಧಿಯವರೆಗೆ ವಿಳಂಬ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ದಾಖಲೆಯ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್; ಮೋದಿ ಭಾಗಿ

ಜಪಾನ್ ಕುಸಿತ, ಜಾಗತಿಕ ಕುಸಿತಕ್ಕೂ ಕಾರಣವಾಗುತ್ತದೆ ಎಚ್ಚರ! (ಹಣಕ್ಲಾಸು)

ಗಗನಯಾನ: 80 ಸಾವಿರ ಪರೀಕ್ಷೆಗಳು ಮುಗಿದಿವೆ, ಯಾವುದೇ ಸಮಯದಲ್ಲಿ ಉಡಾವಣೆಗೆ ಸಿದ್ಧ

ಬಿಹಾರ ಸೋಲಿನಿಂದ ಕಂಗೆಟ್ಟ ಕೈ ಪಡೆ: ಒಡೆದು ಛಿದ್ರವಾಯ್ತಾ INDIA ಒಕ್ಕೂಟ- ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ ಏಕಾಂಗಿ ಹೋರಾಟ?

SCROLL FOR NEXT