ಭಾರತದ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ ಮತ್ತು ಯುವರಾಜ್ ಸಿಂಗ್ ಮತ್ತು ನಟ ಸೋನು ಸೂದ್. 
ದೇಶ

ಆನ್‌ಲೈನ್ ಬೆಟ್ಟಿಂಗ್‌ ಆ್ಯಪ್ ಪ್ರಕರಣ: ಯುವರಾಜ್‌ ಸಿಂಗ್, ರಾಬಿನ್‌ ಉತ್ತಪ್ಪಗೆ ED ಸಮನ್ಸ್‌

ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೆ, ಯುವರಾಜ್ ಸಿಂಗ್ ಅವರನ್ನು ಸೆಪ್ಟೆಂಬರ್ 23 ರಂದು ಮತ್ತು ಸೂದ್ ಅವರನ್ನು ಸೆಪ್ಟೆಂಬರ್ 24 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ನವದೆಹಲಿ: ಆನ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಮತ್ತು ನಟ ಸೋನು ಸೂದ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

1 ಎಕ್ಸ್ ಬೆಟ್ ಎಂಬ ಪ್ಲಾಟ್ ಫಾರ್ಮ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂದಿನ ವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಮ್ಮ ಹೇಳಿಕೆಗಳನ್ನು ದಾಖಲಿಸುವಂತೆ ಉತ್ತಪ್ಪ (39), ಯುವರಾಜ್ ಸಿಂಗ್ (43) ಮತ್ತು ಸೋನು ಸೂದ್ (52) ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೆ, ಯುವರಾಜ್ ಸಿಂಗ್ ಅವರನ್ನು ಸೆಪ್ಟೆಂಬರ್ 23 ರಂದು ಮತ್ತು ಸೂದ್ ಅವರನ್ನು ಸೆಪ್ಟೆಂಬರ್ 24 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ತನಿಖೆಯ ಭಾಗವಾಗಿ ಫೆಡರಲ್ ತನಿಖಾ ಸಂಸ್ಥೆ ಕಳೆದ ಕೆಲವು ವಾರಗಳಿಂದ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ವಿಚಾರಣೆ ನಡೆಸಿದೆ.

ಈ ಪ್ರಕರಣದಲ್ಲಿ ಟಿಎಂಸಿಯ ಮಾಜಿ ಸಂಸದ ಮತ್ತು ನಟಿ ಮಿಮಿ ಚಕ್ರವರ್ತಿ ಅವರ ಹೇಳಿಕೆಯನ್ನು ಸೋಮವಾರ ದಾಖಲಿಸಲಾಗಿದೆ.

ಬಂಗಾಳಿ ನಟ ಅಂಕುಶ್ ಹಜ್ರಾ ಅವರು ಮಂಗಳವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು, ಆದರೆ 1xBetನ ಭಾರತದ ಬ್ರಾಂಡ್ ಅಂಬಾಸಿಡರ್ ನಟಿ ಊರ್ವಶಿ ರೌಟೆಲಾ ಅವರು ಮಂಗಳವಾರ ನಿಗದಿತ ದಿನಾಂಕದಂದು ಇನ್ನೂ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ತುರ್ತು ಸಭೆ, ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ಹೇರಲು ಆಗ್ರಹ..!

'ಹೊರೆ ಹೊತ್ತುಕೊಳ್ಳಬೇಡಿ, ನಿಮ್ಮ ಮಗನದ್ದು ತಪ್ಪು ಎಂದರೆ ಭಾರತದಲ್ಲಿ ಯಾರೂ ನಂಬುವುದಿಲ್ಲ'; Air India ಪೈಲಟ್ ತಂದೆಗೆ 'ಸುಪ್ರೀಂ' ಸಾಂತ್ವನ

ಹುಲಿ ದಾಳಿಗೆ ಓರ್ವ ಬಲಿ: ನಾಗರಹೊಳೆ-ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆಗೆ ಸಿಬ್ಬಂದಿಗಳ ನಿಯೋಜಿಸಿ; ಅಧಿಕಾರಿಗಳಿಗೆ ಸಚಿವ ಖಂಡ್ರೆ ಸೂಚನೆ

ಬೀದಿ ನಾಯಿಗಳನ್ನು ನಿಗದಿತ ಆಶ್ರಯತಾಣಗಳಿಗೆ ಸ್ಥಳಾಂತರಿಸಿ: ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳ ಬಗ್ಗೆ 'ಸುಪ್ರೀಂ' ಕಳವಳ

'ವಂದೇ ಮಾತರಂ' ಭಾರತೀಯರಲ್ಲಿ ಹೊಸ ಚೈತನ್ಯ ತುಂಬುತ್ತದೆ: 150ನೇ ವಾರ್ಷಿಕೋತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ

SCROLL FOR NEXT