ಡೆಹ್ರಾಡೂನ್‌ನಲ್ಲಿ ಭಾರೀ ಮಳೆಯಿಂದ ಎದುರಾಗುವ ಅವಾಂತರಗಳು. 
ದೇಶ

ಡೆಹ್ರಾಡೂನ್​​ನಲ್ಲಿ ಮೇಘಸ್ಫೋಟ, ಉಕ್ಕಿ ಹರಿಯುತ್ತಿದೆ ತಮ್ಸಾ ನದಿ; ಮನೆ-ದೇವಾಲಯ ಮುಳುಗಡೆ, ಅಪಾರ ಹಾನಿ

ಚಂದ್ರಭಾಗ ನದಿ ಬೆಳಿಗ್ಗೆಯಿಂದ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದು, ನೀರು ಹೆದ್ದಾರಿಯನ್ನು ತಲುಪಿದೆ. ಹಲವಾರು ವಾಹನಗಳು ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿವೆ.

ಡೆಹ್ರಾಡೂನ್ (ಉತ್ತರಾಖಂಡ): ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮೇಘಸ್ಫೋಟ ಸಂಭವಿಸಿದ್ದು, ತಮ್ಸಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಇಲ್ಲಿನ ಹಲವಾರು ಮನೆಗಳು, ದೇವಾಲಯಗಳು ಜಲಾವೃತವಾಗಿದ್ದು, ಅಪಾರ ಹಾನಿಯುಂಟಾಗಿದೆ.

ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಪ್ರಮುಖ ದೇವಾಲಯಗಳಲ್ಲಿ ಒಂದಾಗಿರುವ ತಪಕೇಶ್ವರ ಮಹಾದೇವ ದೇವಾಲಯ ಜಲಾವೃತಗೊಂಡಿದೆ.

ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹಾನಿ ಸಂಭವಿಸಿದ್ದು, ಈ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೆ, ನಿರಂತರ ಮಳೆಯಿಂದಾಗಿ ನದಿ ಅಪಾಯದ ಮಟ್ಟ ಮೀರಿದ್ದು, ಪ್ರಮುಖ ಸೇತುವೆ ಕುಸಿದು, ದಡದಲ್ಲಿರುವ ಆಸ್ತಿಪಾಸ್ತಿಗಳಿಗೆ ತೀವ್ರ ಹಾನಿಯಾಗಿದೆ.

ಈ ಪ್ರವಾಹದ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು, ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಭಾರೀ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ. ಅಲ್ಲದೆ, ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ನಡುವೆ ಪ್ರವಾಹದ ಬಗ್ಗೆ ದೂರವಾಣಿ ಕರೆಯ ಮೂಲಕ ಪರಿಸ್ಥಿತಿಯನ್ನು ವಿಚಾರಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಸಿಎಂ ಧಾಮಿರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಅಲ್ಲದೆ, ಕೇಂದ್ರದಿಂದ ಸಂಪೂರ್ಣ ಸಹಕಾರ ನೀಡಲಿದ್ದು. ಈ ವಿಪತ್ತಿನ ಸಮಯದಲ್ಲಿ ಕೇಂದ್ರ ಸರ್ಕಾರ ಉತ್ತರಾಖಂಡದೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಕೇಂದ್ರ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧಿಕಾರಿಗಳು ಸ್ಥಳದಲ್ಲಿ ಬುಲ್ಡೋಜರ್‌ಗಳೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಡೆಹ್ರಾಡೂನ್‌ನ ಸಹಸ್ರಧಾರ, ಮಾಲ್ ದೇವತಾ ಮತ್ತು ಮಸ್ಸೂರಿಯಲ್ಲಿ ಹಾನಿ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ಹೇಳಿದ್ದಾರೆ.

ಡೆಹ್ರಾಡೂನ್‌ನಲ್ಲಿ 2-3 ಜನರು ಕಾಣೆಯಾಗಿದ್ದಾರೆ ಎಂದು ಹೇಳಲಾಗಿದ್ದು, ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಪಡೆಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ, ಈ ವರೆಗೂ 300 ರಿಂದ 400 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗು ಮಾಹಿತಿ ನೀಡಿದ್ದಾರೆ.

ದರ್‌ನ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಹರಿ ಗಿರಿ ಅವರು ಮಾತನಾಡಿ, ನದಿಯಲ್ಲಿ ನೀರಿನ ಮಟ್ಟ ಏರುತ್ತಿದ್ದು, ಅಪಾಯಮಟ್ಟ ಮೀರಿ ಹರಿಯುತ್ತಿದೆ. ಇಲ್ಲಿಯವರೆಗೆ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಡೆಹ್ರಾಡೂನ್‌ನ ಐಟಿ ಪಾರ್ಕ್ ಪ್ರದೇಶದಲ್ಲಿ ನೀರು ನಿಂತಿರುವುದಾಗಿ ತಿಳಿದುಬಂದಿದೆ. ಅನೇಕ ಕಚೇರಿಗಳಿಗೆ ನೀರು ನುಗ್ಗಿ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trade Talks: ಸುಂಕದ ವಿವಾದ, ಭಾರತ- ಅಮೆರಿಕ ಉದ್ದೇಶಿತ ವ್ಯಾಪಾರ ಒಪ್ಪಂದದ ಮಾತುಕತೆ ಆರಂಭ: ಪೀಟರ್ ನವರೊ ಹೇಳಿದ್ದು ಏನು?

Tanushree Dutta: ''ಕೇವಲ ಒಂದು ಶೋಗಾಗಿ ಬೆಡ್ ಮೇಲೆ ಪುರುಷನೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ'': ರೂ. 1.65 ಕೋಟಿಯ ಬಿಗ್ ಬಾಸ್ ಆಫರ್ ತಿರಸ್ಕರಿಸಿದ್ದೇನೆ!

ರಸ್ತೆ ಗುಂಡಿ ದುರಸ್ತಿಗೆ 1,100 ಕೋಟಿ ರೂ: ಗುತ್ತಿಗೆದಾರರು-ಎಂಜಿನಿಯರ್‌ಗಳಿಗಷ್ಟೇ ಲಾಭ ಎಂದ ತಜ್ಞರು

Defamation Suit: ನ್ಯೂಯಾರ್ಕ್ ಟೈಮ್ಸ್ ವಿರುದ್ಧ 15 ಬಿಲಿಯನ್ ಡಾಲರ್ ಮಾನನಷ್ಟ ಮೊಕದ್ದಮೆ ಹಾಕಿದ ಅಮೆರಿಕಾ ಅಧ್ಯಕ್ಷ ಟ್ರಂಪ್!

ಜನಗಣತಿಯಿಂದ ನಕಲಿ ಉಪಜಾತಿ ತೆಗೆದುಹಾಕಿ: ಬ್ರಾಹ್ಮಣ ಸಮುದಾಯ ಆಗ್ರಹ

SCROLL FOR NEXT