ಆಂಧ್ರಪ್ರದೇಶ ರಾಜ್ಯದ ಸಚಿವ ನಾರಾ ಲೋಕೇಶ್ 
ದೇಶ

ವೈಜಾಗ್‌ ಟಾಪ್ 5 ಸ್ವಚ್ಛ ನಗರಗಳಲ್ಲಿ ಒಂದು, ನಿಮ್ಮ ಕಂಪನಿ ಇಲ್ಲಿಗೆ ಸ್ಥಳಾಂತರಿಸಿ: ಬೆಂಗಳೂರು ತೊರೆಯುವುದಾಗಿ ಹೇಳಿದ ಟೆಕ್ ಕಂಪನಿಗೆ ಆಂಧ್ರಪ್ರದೇಶ ಆಹ್ವಾನ..!

ಕಂಪನಿಯನ್ನು ಆಂಧ್ರಪ್ರದೇಶದ ವೈಜಾಗ್'ಗೆ ಸ್ಥಳಾಂತರಿಸಬಹುದು. ನಮ್ಮ ನಗರವು ಭಾರತದ ಟಾಪ್ 5 ಸ್ವಚ್ಛ ನಗರಗಳಲ್ಲಿ ಒಂದಾಗಿದೆ. ಮಹಿಳೆಯರಿಗೆ ಸುರಕ್ಷಿತ ನಗರವೆಂದು ರ್ಯಾಂಕಿಂಗ್ ಪಡೆದಿದ್ದೇವೆ.

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ, ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದ್ದು, ಇದರಿಂದ ಬೇಸತ್ತ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್ ಫಾರ್ಮ್ ಬ್ಲಾಕ್ ಬಕ್ ಕಂಪನಿ ನಗರ ತೊರೆಯುವುದಾಗಿ ಹೇಳಿದೆ. ಇದನ್ನೇ ಲಾಭವಾಗಿ ಬಳಸಿಕೊಳ್ಳಲು ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರ ತಮ್ಮ ರಾಜ್ಯಕ್ಕೆ ಬರುವಂತೆ ಟೆಕ್ ಕಂಪನಿಗೆ ಆಹ್ವಾನ ನೀಡಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆಂಧ್ರಪ್ರದೇಶ ರಾಜ್ಯದ ಸಚಿವ ನಾರಾ ಲೋಕೇಶ್ ಅವರು, ಕಂಪನಿಯನ್ನು ಆಂಧ್ರಪ್ರದೇಶದ ವೈಜಾಗ್'ಗೆ ಸ್ಥಳಾಂತರಿಸಬಹುದು. ನಮ್ಮ ನಗರವು ಭಾರತದ ಟಾಪ್ 5 ಸ್ವಚ್ಛ ನಗರಗಳಲ್ಲಿ ಒಂದಾಗಿದೆ. ಮಹಿಳೆಯರಿಗೆ ಸುರಕ್ಷಿತ ನಗರವೆಂದು ರ್ಯಾಂಕಿಂಗ್ ಪಡೆದಿದ್ದೇವೆ. ಆಸಕ್ತಿ ಇದ್ದರೆ ದಯವಿಟ್ಟು ಮೆಸೇಜ್ ಮಾಡಿ ಎಂದು ಹೇಳಿದ್ದಾರೆ. ಆಂಧ್ರಪ್ರದೇಶ ರಾಜ್ಯದ ಈ ಆಹ್ವಾನ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಬ್ಲಾಕ್‌ಬಕ್ ಕಂಪನಿಯ ಸಿಇಒ, ಕಳೆದ ಒಂಬತ್ತು ವರ್ಷಗಳಿಂದ ಬೆಳ್ಳಂದೂರು ನಮ್ಮ ಕಚೇರಿ ಮತ್ತು ಮನೆಯಾಗಿತ್ತು. ಆದರೆ, ಇಲ್ಲಿ ಮುಂದುವರಿಯುವುದು ಈಗ ತುಂಬಾ ಕಷ್ಟವಾಗಿದೆ. ಇಲ್ಲಿನ ಪರಿಸ್ಥಿತಿ ಮುಂದಿನ 5 ವರ್ಷಗಳಲ್ಲಿ ಸುಧಾರಿಸುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹಾಗಾಗಿ ನಾವು ಇಲ್ಲಿಂದ ಹೊರ ಹೋಗಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದರು. ಟೆಕ್ ಕಂಪನಿಯ ಈ ಹೇಳಿಕೆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

CEC 'ಮತ ಕಳ್ಳರ ರಕ್ಷಕ', ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ

ಉತ್ತರಾಖಂಡ ಮೇಘಸ್ಫೋಟ: ಚಮೋಲಿ ಜಿಲ್ಲೆಯಲ್ಲಿ ಹತ್ತು ಮಂದಿ ನಾಪತ್ತೆ, ಸಂಪರ್ಕ ಕಳೆದುಕೊಂಡ ಗ್ರಾಮಗಳು

ಉಕ್ರೇನ್ ಯುದ್ಧ ಪರಿಹರಿಸಲು ಸಹಾಯಕ್ಕೆ ಭಾರತ ಸಿದ್ಧವಿದೆ: ಪುಟಿನ್ ಗೆ ಪ್ರಧಾನಿ ಮೋದಿ ಭರವಸೆ

MUDA Scam: ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ 9 ದಿನ ED ವಶಕ್ಕೆ

ಹಣಕಾಸು ಸ್ವಾತಂತ್ರ್ಯಕ್ಕೆ 7 ಸರಳ ನಿಯಮಗಳು! (ಹಣಕ್ಲಾಸು)

SCROLL FOR NEXT