ಮುಖಪುಟದಲ್ಲಿ ಸಿಗರೇಟು ಸೇದುವ ಫೋಟೋ 
ದೇಶ

ಮುಖಪುಟದಲ್ಲಿ ಸಿಗರೇಟು ಸೇದುವ ಫೋಟೋ: ಅರುಂಧತಿ ರಾಯ್ ವಿರುದ್ಧ ಹೈಕೋರ್ಟ್‌ಗೆ PIL

ಈ ಪುಸ್ತಕದ ಮುಖಪುಟದಲ್ಲಿ ಶಾಸನಬದ್ಧ ಆರೋಗ್ಯ ಎಚ್ಚರಿಕೆ ಇಲ್ಲದೆ ಅವರು ಸಿಗರೇಟ್ ಸೇದುತ್ತಿರುವ ಫೋಟೋ ಮುದ್ರಿಸಲಾಗಿದೆ.

ಕೊಚ್ಚಿ: ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ಅವರ "ಮದರ್ ಮೇರಿ ಕಮ್ ಟು ಮಿ" ಪುಸ್ತಕದ ಮಾರಾಟ, ಪ್ರಸಾರ ಮತ್ತು ಪ್ರದರ್ಶನವನ್ನು ನಿಷೇಧಿಸುವಂತೆ ಕೋರಿ ಗುರುವಾರ ಕೇರಳ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದೆ. ಈ ಪುಸ್ತಕದ ಮುಖಪುಟದಲ್ಲಿ ಶಾಸನಬದ್ಧ ಆರೋಗ್ಯ ಎಚ್ಚರಿಕೆ ಇಲ್ಲದೆ ಅವರು ಸಿಗರೇಟ್ ಸೇದುತ್ತಿರುವ ಫೋಟೋ ಮುದ್ರಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ನಿತಿನ್ ಜಾಮ್ದಾರ್ ಮತ್ತು ನ್ಯಾಯಮೂರ್ತಿ ಬಸಂತ್ ಬಾಲಾಜಿ ಅವರ ಪೀಠ, ಇಂತಹ ಸಮಸ್ಯೆಗಳನ್ನು ನಿಭಾಯಿಸಲು ಯಾವುದೇ ಸಂಸ್ಥೆ ಅಥವಾ ಕಾರ್ಯವಿಧಾನವಿದೆಯೇ ಎಂದು ನ್ಯಾಯಾಲಯಕ್ಕೆ ತಿಳಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿ, ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಕೊಚ್ಚಿ ಮೂಲದ ವಕೀಲ ರಾಜಸಿಂಹನ್ ಸಲ್ಲಿಸಿದ್ದು, ಮುಖಪುಟದ ಚಿತ್ರವು ಧೂಮಪಾನದ ಕ್ರಿಯೆಯನ್ನು "ವೈಭವೀಕರಿಸುವ" ಮೂಲಕ ಸಮಾಜಕ್ಕೆ, ವಿಶೇಷವಾಗಿ ಹುಡುಗಿಯರು ಮತ್ತು ಮಹಿಳೆಯರಿಗೆ "ಹಾನಿಕಾರಕ ಸಂದೇಶ" ರವಾನಿಸಲಾಗಿದೆ ಎಂದು ವಾದಿಸಿದ್ದಾರೆ.

ತಮ್ಮಂತಹ ಪ್ರಸಿದ್ಧ ಲೇಖಕಿಯೊಬ್ಬರು "ಧೂಮಪಾನವನ್ನು ವೈಭವೀಕರಿಸುವುದು", "ಬೌದ್ಧಿಕ ಸೃಜನಶೀಲತೆಯನ್ನು ಹೆಚ್ಚಿಸುತ್ತದೆ" ಎಂಬ ಸುಳ್ಳು ನಂಬಿಕೆಯನ್ನು ಸೃಷ್ಟಿಸುವುದಕ್ಕೆ ಸಮಾನವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಈ ಚಿತ್ರವು ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ, ಕಾಯ್ದೆ(COTPA), 2003 ರ ಉಲ್ಲಂಘನೆಯಾಗಿದೆ ಎಂದು ಅವರು ಅರ್ಜಿಯಲ್ಲಿ ವಾದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT