ಎನ್ ಡಿಆರ್ ಎಫ್ ನಿಂದ ರಕ್ಷಣಾ ಕಾರ್ಯಾಚರಣೆ 
ದೇಶ

ಮಳೆಯಿಂದ ತತ್ತರಿಸಿದ ಚಮೋಲಿಯಲ್ಲಿ ಮತ್ತೆ ಐದು ಶವ ಪತ್ತೆ, ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ರಕ್ಷಣಾ ತಂಡ, ಅವಶೇಷಗಳನ್ನು ಅಗೆದು ಕೆಸರಿನಲ್ಲಿ ಕಾಣೆಯಾದವರನ್ನು ಹುಡುಕುತ್ತಿದ್ದು, ಗುರುವಾರ ಎರಡು ಶವಗಳು ಪತ್ತೆಯಾಗಿವೆ. ಇಂದು ಮತ್ತೆ ಐದು ಶವಗಳು ಪತ್ತೆಯಾಗಿವೆ.

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಳೆಯಿಂದ ತತ್ತರಿಸಿದ್ದು, ಹಾನಿಗೊಳಗಾದ ಹಳ್ಳಿಗಳಲ್ಲಿ ಶುಕ್ರವಾರ ಮತ್ತೆ ಐದು ಶವಗಳು ಪತ್ತೆಯಾಗಿವೆ. ಇದರೊಂದಿಗೆ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.

ರಕ್ಷಣಾ ತಂಡ, ಅವಶೇಷಗಳನ್ನು ಅಗೆದು ಕೆಸರಿನಲ್ಲಿ ಕಾಣೆಯಾದವರನ್ನು ಹುಡುಕುತ್ತಿದ್ದು, ಗುರುವಾರ ಎರಡು ಶವಗಳು ಪತ್ತೆಯಾಗಿವೆ. ಇಂದು ಮತ್ತೆ ಐದು ಶವಗಳು ಪತ್ತೆಯಾಗಿವೆ.

ಡೆಹ್ರಾಡೂನ್‌ನಿಂದ ಸುಮಾರು 260 ಕಿ.ಮೀ ಮತ್ತು ಗೋಪೇಶ್ವರದಲ್ಲಿರುವ ಚಮೋಲಿ ಜಿಲ್ಲಾ ಕೇಂದ್ರದಿಂದ 50 ಕಿ.ಮೀ ದೂರದಲ್ಲಿರುವ ಚಮೋಲಿಯ ನಂದನಗರ ಪ್ರದೇಶದ ಕುಂಟಾರಿ ಲಗಾ ಫಾಲಿ, ಕುಂಟಾರಿ ಲಗಾ ಸರ್ಪಾನಿ, ಸೆರಾ ಮತ್ತು ಧುರ್ಮಾ ಎಂಬ ನಾಲ್ಕು ಗ್ರಾಮಗಳಲ್ಲಿ ಭಾರೀ ಮಳೆಯಿಂದ ನಿನ್ನೆ ಭೂಕುಸಿತ ಮತ್ತು ಪ್ರವಾಹ ಸಂಭವಿಸಿದೆ.

ನಂದನಗರವು ಈಗಾಗಲೇ ಭೂ ಕುಸಿತದಿಂದ ತತ್ತರಿಸಿದ್ದು, ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂದೀಪ್ ತಿವಾರಿ ಅವರು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆಗೆ ನಂದನಗರದಲ್ಲಿದ್ದಾರೆ.

ಗುರುವಾರ, ಕುಂಟಾರಿ ಲಗಾ ಫಾಲಿ ಮತ್ತು ಧುರ್ಮಾ ಗ್ರಾಮಗಳಿಂದ ಜೀವಂತವಾಗಿ ರಕ್ಷಿಸಲ್ಪಟ್ಟ ಐದು ಜನ ಸೇರಿದಂತೆ 12 ಜನ ಗಾಯಗೊಂಡಿದ್ದು, ಅವರು ಋಷಿಕೇಶದ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 6 ಕ್ಕೇರಿಕೆ

Jammu: ದೇಶ ವಿರೋಧಿ ಚಟುವಟಿಕೆ ಆರೋಪ, 'ಕಾಶ್ಮೀರ್ ಟೈಮ್ಸ್' ಕಚೇರಿ ಮೇಲೆ ದಾಳಿ, AK-47 ಕಾರ್ಟ್ರಿಡ್ಜ್‌ಗಳು ಪತ್ತೆ!

ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಘೋಷಣೆ, ಯಾವಾಗಿಂದ ಗೊತ್ತಾ?

ಯಾವ ಕ್ರಾಂತಿಯು ಇಲ್ಲ, ಕೇವಲ ''ಮಾಧ್ಯಮ ಸೃಷ್ಟಿ''; ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ

ಧರ್ಮಸ್ಥಳ ಬುರುಡೆ ಕೇಸ್; ಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ SIT; 4 ಸಾವಿರ ಪುಟಗಳಲ್ಲಿ ಷಡ್ಯಂತ್ರ, ಸುಳ್ಳು ಸಾಕ್ಷ್ಯದ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ!

SCROLL FOR NEXT