ದೇವೇಂದ್ರ ಫಡ್ನವೀಸ್ - ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ 'ನಗರ ನಕ್ಸಲ'ರಂತೆ ಮಾತನಾಡುತ್ತಿದ್ದಾರೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್

ರಾಹುಲ್ ಗಾಂಧಿ ಅವರು ದೇಶದ ಯುವಕರು ಮತ್ತು ವಿದ್ಯಾರ್ಥಿಗಳಿಗೆ "ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಿ, ಮತ ಕಳ್ಳತನವನ್ನು ನಿಲ್ಲಿಸಬೇಕು" ಎಂದು ಒತ್ತಾಯಿಸಿ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು, ಇದಕ್ಕೆ ಫಡ್ನವೀಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವರು "ನಗರ ನಕ್ಸಲ"ರಂತೆ ಮಾತನಾಡುತ್ತಿದ್ದಾರೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರದ ವಿರುದ್ಧ ಯುವಕರನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು ದೇಶದ ಯುವಕರು ಮತ್ತು ವಿದ್ಯಾರ್ಥಿಗಳಿಗೆ "ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಿ, ಮತ ಕಳ್ಳತನವನ್ನು ನಿಲ್ಲಿಸಬೇಕು" ಎಂದು ಒತ್ತಾಯಿಸಿ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು, ಇದಕ್ಕೆ ಫಡ್ನವೀಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಪೋಸ್ಟ್ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಮಹಾ ಸಿಎಂ, "ರಾಹುಲ್ ಗಾಂಧಿಯವರು ಜನ್ - ಝಡ್(ಯುವಕರನ್ನು) ಅನ್ನು ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು ಉರುಳಿಸಲು ಪರಿಣಾಮಕಾರಿಯಾಗಿ ಕೇಳಿಕೊಂಡಿದ್ದಾರೆ. ಅದು 'ಮತ ಚೋರಿ' ಅಲ್ಲ, ಮೆದುಳು ಚೋರಿ ಎಂದು ಟೀಕಿಸಿದರು.

ರಾಹುಲ್ ಗಾಂಧಿ, ಸಂವಿಧಾನ ಅಥವಾ ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ನಂಬಿಕೆಯಿಲ್ಲದ ನಗರ ನಕ್ಸಲ್ ಗಳ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿಯವರ ಸಲಹೆಗಾರರು ಇದೇ ರೀತಿಯ "ನಗರ ನಕ್ಸಲ್ ಮನಸ್ಥಿತಿಯನ್ನು" ಹಂಚಿಕೊಳ್ಳುತ್ತಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT