ವಾಯುಪಡೆ ಮುಖ್ಯಸ್ಥ ಎಪಿ ಸಿಂಗ್  
ದೇಶ

ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸುವ ಬಗ್ಗೆ ಜಗತ್ತು ಭಾರತದಿಂದ ಕಲಿಯಬೇಕು: IAF ಮುಖ್ಯಸ್ಥ

"ಜಗತ್ತು ಸಾಧ್ಯವಾದಷ್ಟು ಬೇಗ ಸಂಘರ್ಷವನ್ನು ಹೇಗೆ ಪ್ರಾರಂಭಿಸಬೇಕು ಮತ್ತು ಕೊನೆಗೊಳಿಸಬೇಕು ಎಂಬುದನ್ನು ಭಾರತದಿಂದ ಕಲಿಯಬೇಕು ಎಂದು ನಾನು ಭಾವಿಸುತ್ತೇನೆ..." ಎಂದರು.

ನವದೆಹಲಿ: ಭಾರತ ಆಪರೇಷನ್ ಸಿಂಧೂರ್ ಅನ್ನು ನಿರ್ವಹಿಸಿದ ರೀತಿಯಿಂದ ಜಗತ್ತು ಪಾಠ ಕಲಿಯಬೇಕು ಮತ್ತು ಸಂಘರ್ಷಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು ಮತ್ತು ಕೊನೆಗೊಳಿಸಬೇಕು ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಎಪಿ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ವಾಯುಪಡೆಯ ಸಂಘ ಆಯೋಜಿಸಿದ್ದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸಿಂಗ್, "ಜಗತ್ತು ಸಾಧ್ಯವಾದಷ್ಟು ಬೇಗ ಸಂಘರ್ಷವನ್ನು ಹೇಗೆ ಪ್ರಾರಂಭಿಸಬೇಕು ಮತ್ತು ಕೊನೆಗೊಳಿಸಬೇಕು ಎಂಬುದನ್ನು ಭಾರತದಿಂದ ಕಲಿಯಬೇಕು ಎಂದು ನಾನು ಭಾವಿಸುತ್ತೇನೆ..." ಎಂದರು.

ದೀರ್ಘಕಾಲದ ಯುದ್ಧಗಳು ಸನ್ನದ್ಧತೆಯನ್ನು ಬರಿದುಮಾಡುತ್ತವೆ, ಆರ್ಥಿಕತೆಗೆ ಹಾನಿ ಮಾಡುತ್ತವೆ ಮತ್ತು ರಾಷ್ಟ್ರೀಯ ಪ್ರಗತಿಗೆ ಅಡ್ಡಿಯಾಗುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಭಾರತದ ಗುರಿ ಭಯೋತ್ಪಾದನಾ ವಿರೋಧಿ ಕ್ರಮ ಎಂದು ನೆನಪಿಸಿಕೊಂಡ ಅವರು, ಯುದ್ಧವನ್ನು ದೀರ್ಘಕಾಲದವರೆಗೆ ಮುಂದುವರಿಸುವುದು ಆರ್ಥಿಕ ನಷ್ಟವಲ್ಲದೆ ಸನ್ನದ್ಧತೆ ಮತ್ತು ಅಭಿವೃದ್ಧಿಯನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದರು.

"ಇಂದು ನಡೆಯುತ್ತಿರುವ ಪ್ರಮುಖ ಯುದ್ಧಗಳು, ಅದು ರಷ್ಯಾ, ಉಕ್ರೇನ್ ಅಥವಾ ಇಸ್ರೇಲ್ ಯುದ್ಧವಾಗಿರಬಹುದು. ಅವು ವರ್ಷಗಳಿಂದ ನಡೆಯುತ್ತಿವೆ. ಏಕೆಂದರೆ ಯಾರೂ ಸಂಘರ್ಷ ಮುಕ್ತಾಯದ ಬಗ್ಗೆ ಯೋಚಿಸುತ್ತಿಲ್ಲ... ನಾವು ಸಹ ಇನ್ನೂ ಸ್ವಲ್ಪ ಹೆಚ್ಚು ದಿನ ಯುದ್ಧ ಮಾಡಬೇಕಾಗಿತ್ತು ಎಂದು ಜನ ಹೇಳುವುದನ್ನು ನಾವು ಕೇಳಿದ್ದೇವೆ. ಆದರೆ ನಾವು ಯುದ್ಧವನ್ನು ಬಹಳ ಬೇಗನೆ ನಿಲ್ಲಿಸಿದ್ದೇವೆ" ಎಂದು IAF ಮುಖ್ಯಸ್ಥರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT