ಪ್ರಧಾನಿ ನರೇಂದ್ರ ಮೋದಿ  
ದೇಶ

PM Modi address: ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಅಮೆರಿಕವು ಭಾರತದ ಮೇಲೆ ಶೇ.50ರಷ್ಟು ಆಮದು ಶುಲ್ಕವನ್ನು ವಿಧಿಸಿದೆ. ಅಷ್ಟೇ ಅಲ್ಲದೆ ಎಚ್​​1ಬಿ ವೀಸಾದ ಶುಲ್ಕವನ್ನು 1 ಲಕ್ಷ ಡಾಲರ್​​ಗೆ ಹೆಚ್ಚಿಸಿದೆ.

ನವದೆಹಲಿ: ನಾಳೆ ಸೆ.22 ನಾಡಹಬ್ಬ ದಸರಾ ಆರಂಭವಾಗುತ್ತಿದೆ. ಅದಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು(ಸೆ.21) ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿಯವರ ಭಾಷಣವು ಜಿಎಸ್ಟಿ ಸುಧಾರಣೆಯ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

ಹೊಸ ಜಿಎಸ್​ಟಿ 2.0 ದರಗಳು ನಾಳೆಯಿಂದ ದೇಶದಲ್ಲಿ ಜಾರಿಗೆ ಬರಲಿವೆ. ಅಮೆರಿಕ ಭಾರತೀಯ ವಸ್ತುಗಳ ಮೇಲೆ ಸುಂಕ ಹೆಚ್ಚಳ ಮಾಡಿರುವುದು, ನಂತರ H1 B ವೀಸಾ ಹೊಂದಿರುವವರ ಮೇಲೆ ಅಮೆರಿಕ ಕೈಗೊಂಡಿರುವ ಕಠಿಣ ಕ್ರಮದಂತಹ ವಿದ್ಯಾಮಾನಗಳ ನಡುವೆ ಪ್ರಧಾನಿಯವರು ಇಂದು ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ,

ಅಮೆರಿಕವು ಭಾರತದ ಮೇಲೆ ಶೇ.50ರಷ್ಟು ಆಮದು ಶುಲ್ಕವನ್ನು ವಿಧಿಸಿದೆ. ಅಷ್ಟೇ ಅಲ್ಲದೆ ಎಚ್​​1ಬಿ ವೀಸಾದ ಶುಲ್ಕವನ್ನು 1 ಲಕ್ಷ ಡಾಲರ್​​ಗೆ ಹೆಚ್ಚಿಸಿದೆ. ಇದು ವಾರ್ಷಿಕ ಶುಲ್ಕವಲ್ಲ ಬದಲಿಗೆ ಒಂದು ಬಾರಿ ಪಾವತಿಸುವ ಶುಲ್ಕ, ಹಾಗೆಯೇ ಈಗಾಗಲೇ ವೀಸಾ ಪಡೆದು ಬೇರೆ ದೇಶಕ್ಕೆ ಹೋಗಿರುವವರಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವವರಿಗೆ ಅನ್ವಯವಾಗುವುದಿಲ್ಲ.

ಈ ವರ್ಷದ ಮೇ ತಿಂಗಳಲ್ಲಿ ನಡೆದ ಭಾರತ-ಪಾಕಿಸ್ತಾನ ಸಂಘರ್ಷದ ನಂತರ ಪ್ರಧಾನಿ ಮೋದಿ ಕೊನೆಯ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟ ನಂತರ ಮತ್ತು ಭಾರತ ಆಪರೇಷನ್ ಸಿಂದೂರ್ ಮೂಲಕ ಪ್ರತೀಕಾರ ತೀರಿಸಿಕೊಂಡ ನಂತರ ಎರಡೂ ದೇಶಗಳು ಗುಂಡಿನ ದಾಳಿಯಲ್ಲಿ ತೊಡಗಿದ್ದವು.

ಭಾರತಕ್ಕೆ ನಿರ್ಣಾಯಕ ಸಮಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಬೆದರಿಕೆಗಳು ಮತ್ತು ಯುಎಸ್ H-1B ವೀಸಾ ಅರ್ಜಿ ಶುಲ್ಕ ಹೆಚ್ಚಳದ ಮಧ್ಯೆ, ನವರಾತ್ರಿಯ ಮೊದಲ ದಿನದಂದು ಭಾರತ GST ದರ ಕಡಿತವನ್ನು ಜಾರಿಗೆ ತರಲು ಸಿದ್ಧವಾಗಿರುವ ನಿರ್ಣಾಯಕ ಸಮಯದಲ್ಲಿ ಪ್ರಧಾನಿ ಮೋದಿಯವರು ಭಾಷಣ ಮಾಡುತ್ತಿದ್ದಾರೆ.

ಗ್ರಾಹಕರಿಗೆ ಒಂದು ವರದಾನವಾಗಿ, GST ಈಗ ಎರಡು ಹಂತದ ರಚನೆಯಾಗಲಿದ್ದು, ಇದರಲ್ಲಿ ಹೆಚ್ಚಿನ ಸರಕು ಮತ್ತು ಸೇವೆಗಳು ಶೇಕಡಾ 5 ಮತ್ತು ಶೇಕಡಾ 18 ತೆರಿಗೆಯನ್ನು ಆಕರ್ಷಿಸುತ್ತವೆ. ಐಷಾರಾಮಿ ವಸ್ತುಗಳ ಮೇಲೆ 40 ಪ್ರತಿಶತ ತೆರಿಗೆ ವಿಧಿಸಲಾಗುವುದು. ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳು 28 ಪ್ರತಿಶತ ಮತ್ತು ಸೆಸ್ ವಿಭಾಗದಲ್ಲಿ ಮುಂದುವರಿಯುತ್ತವೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಹೇಳಿದೆ.

ಇದುವರೆಗೆ, ಜಿಎಸ್‌ಟಿಯನ್ನು 5, 12, 18 ಮತ್ತು 28 ಪ್ರತಿಶತದ 4 ಸ್ಲ್ಯಾಬ್‌ಗಳಲ್ಲಿ ವಿಧಿಸಲಾಗುತ್ತಿತ್ತು.. ಇದಲ್ಲದೆ, ಐಷಾರಾಮಿ ವಸ್ತುಗಳು ಮತ್ತು ದೋಷಪೂರಿತ ಮತ್ತು ತಂಬಾಕಿನಂತಹ ವಸ್ತುಗಳ ಮೇಲೆ ಸೆಸ್ ವಿಧಿಸಲಾಗುತ್ತಿತ್ತು.

ಜಿಎಸ್‌ಟಿ ಸುಧಾರಣೆಗಳು ಆರ್ಥಿಕತೆಗೆ 2 ಲಕ್ಷ ಕೋಟಿ ರೂಪಾಯಿ ಸೇರಿಸುತ್ತದೆ. ಇದರಿಂದಾಗಿ ಜನರು ಕೈಯಲ್ಲಿ ಹೆಚ್ಚಿನ ನಗದು ಉಳಿಯುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ವಾರ ಹೇಳಿದ್ದರು.

ಜಿ ಎಸ್ ಟಿ 2.0 ಮೂಲಕ ಶೇಕಡಾ 12 ಜಿಎಸ್‌ಟಿ ಸ್ಲ್ಯಾಬ್‌ನಲ್ಲಿರುವ ಸುಮಾರು ಶೇಕಡಾ 99ರಷ್ಟು ಸರಕುಗಳು ಪ್ರಸ್ತುತ ಶೇಕಡಾ 5ಕ್ಕೆ ಸ್ಥಳಾಂತರಗೊಳ್ಳುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಸಂಜೆ 5.30ಕ್ಕೆ CCS ತುರ್ತು ಸಭೆ!

Delhi Blast: 'ಬಿಹಾರ ಚುನಾವಣೆ ಸಮಯದಲ್ಲೇ ಏಕೆ ಸ್ಫೋಟ ನಡೆಯಿತು..? ಯಾರೂ ಗೂಟ ಹೊಡೆದು ಇರಲ್ಲ': ಸಚಿವ ಜಮೀರ್ ವಿಚಿತ್ರ ಪ್ರಶ್ನೆ

Cricket: 'ಯಾರೂ ನಮ್ಮನ್ನ ಕ್ಷಮಿಸೊಲ್ಲ.. ನಾವೇನೂ ರೊಬೋಟ್ ಗಳಲ್ಲ..': ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಆಕ್ರೋಶ!

Delhi Blast: 'ಆರೋಪಿಗಳ ಜೊತೆ ಯಾವುದೇ ಸಂಬಂಧವಿಲ್ಲ, ರಾಸಾಯನಿಕಗಳ ಸಂಗ್ರಹಿಸಿಲ್ಲ': Al-Falah ವಿವಿ ಸ್ಪಷ್ಟನೆ

Delhi blast: ಬಂಧಿತ ವೈದ್ಯರು ಜನವರಿ ತಿಂಗಳಲ್ಲಿ ಹಲವು ಬಾರಿ ಕೆಂಪು ಕೋಟೆ ಪ್ರದೇಶಕ್ಕೆ ಭೇಟಿ ನೀಡಿದ್ದರು!

SCROLL FOR NEXT