ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಕೆಟ್ಟು ನಿಂತಿದ್ದ ಎಸ್‌ಯುವಿಗೆ ಅಪರಿಚಿತ ವಾಹನ ಡಿಕ್ಕಿ; ನಾಲ್ವರು ಸಾವು

ಗಂಗಾ ನಗರ ಪ್ರದೇಶದ ಬಿಗಾಹಿಯಾ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಉಪ ಪೊಲೀಸ್ ಆಯುಕ್ತ(ಗಂಗಾ ನಗರ) ಕುಲದೀಪ್ ಗುಣವತ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಪ್ರಯಾಗರಾಜ್: ಕಾನ್ಪುರ-ವಾರಣಾಸಿ ಹೆದ್ದಾರಿಯಲ್ಲಿ ಸೋಮವಾರ ಅಪರಿಚಿತ ವಾಹನವೊಂದು, ಕೆಟ್ಟು ನಿಂತಿದ್ದ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗಾ ನಗರ ಪ್ರದೇಶದ ಬಿಗಾಹಿಯಾ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಉಪ ಪೊಲೀಸ್ ಆಯುಕ್ತ(ಗಂಗಾ ನಗರ) ಕುಲದೀಪ್ ಗುಣವತ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಎಸ್‌ಯುವಿ ಕೆಟ್ಟು ರಸ್ತೆಬದಿಯಲ್ಲಿ ನಿಂತಿತ್ತು. ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಕಾರಿನ ಮುಂದೆ ಮಲಗಿದ್ದರು ಮತ್ತು ಮೂವರು ಮಹಿಳೆಯರು ಒಳಗೆ ವಿಶ್ರಾಂತಿ ಪಡೆಯುತ್ತಿದ್ದರು.

ಮೃತರನ್ನು ಕಾನ್ಪುರ ನಿವಾಸಿಗಳಾದ ಸುರೇಶ್ ಸೈನಿ, ಸುರೇಶ್ ಬಾಜ್‌ಪೈ, ಅವರ ಪತ್ನಿ ಮತ್ತು ರಾಮಸಾಗರ್ ಅವಸ್ಥಿ ಎಂದು ಗುರುತಿಸಲಾಗಿದೆ ಎಂದು ಗುಣವತ್ ಹೇಳಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನದ ಚಾಲಕನನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋದಿ ಮಹಾನ್ ಡೋಂಗಿ, 8 ವರ್ಷ ಹೆಚ್ಚು GST ವಿಧಿಸಿದ್ದೂ ಅವರೇ; ಈಗ ವಾಪಾಸ್ ಕೊಡ್ತೀರಾ?

GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ; ಕಾಂಗ್ರೆಸ್ ಈಶಾನ್ಯ ರಾಜ್ಯಗಳನ್ನು 'ನಿರ್ಲಕ್ಷಿಸಿದೆ'

Asia Cup 2025: 'ಐ ಡೋಂಟ್ ಕೇರ್..' ವಿವಾದಾತ್ಮಕ 'Gun-Firing' Celebration ಕುರಿತು ಪಾಕ್ ಬ್ಯಾಟರ್ Sahibzada Farhan!

ಜಾತಿ ಗಣತಿಗೆ ತಡೆ ಕೋರಿ ಅರ್ಜಿ; ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ನವೆಂಬರ್‌ನಲ್ಲಿ ಸಂಪುಟ ಪುನಾರಚನೆ, ಶೇ.50ರಷ್ಟು ಸಚಿವರ ಬದಲಾವಣೆ: ದೆಹಲಿಯಲ್ಲಿ ಸಲೀಂ ಅಹ್ಮದ್

SCROLL FOR NEXT