ಜೈಶಂಕರ್ ಮತ್ತು ರೂಬಿಯೋ ಮಾತುಕತೆ 
ದೇಶ

US Tariff war: ಜೈಶಂಕರ್-ರುಬಿಯೊ ಮಹತ್ವದ ಭೇಟಿ; ಭಾರತ-ಅಮೆರಿಕ ಸಂಬಂಧ ಕುರಿತು ಚರ್ಚೆ!

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಮೊದಲ ಬಾರಿಗೆ ವೈಯಕ್ತಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ನವದೆಹಲಿ: ಅಮೆರಿಕದ ಸುಂಕ ಏರಿಕೆ ಬಳಿಕ ಹಳ್ಳ ಹಿಡಿದಿರುವ ಭಾರತ-ಅಮೆರಿಕ ಸಂಬಂಧ ಸುಧಾರಣೆ ಕುರಿತು ಚರ್ಚೆಗಳು ತೀವ್ರವಾಗಿರುವಂತೆಯೇ ಭಾರತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಪರಸ್ಪರ ಭೇಟಿಯಾಗಿದ್ದಾರೆ.

ಭಾರತ ರಷ್ಯಾದ ತೈಲ ಖರೀದಿಯನ್ನು ಮುಂದುವರೆಸಿದ್ದಕ್ಕಾಗಿ ಅಮೆರಿಕ ಭಾರತದ ಪ್ರಮುಖ ರಫ್ತುಗಳ ಮೇಲೆ ತೀವ್ರ ಸುಂಕಗಳನ್ನು ವಿಧಿಸಿದ ನಂತರ ಸೋಮವಾರ ನ್ಯೂಯಾರ್ಕ್‌ನಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಮೊದಲ ಬಾರಿಗೆ ವೈಯಕ್ತಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಜೈಶಂಕರ್-ರುಬಿಯೊ ಚರ್ಚೆಯು ಆರ್ಥಿಕ ಸಹಕಾರ, ಇಂಧನ ಭದ್ರತೆ ಮತ್ತು ಇಂಡೋ-ಪೆಸಿಫಿಕ್‌ನಲ್ಲಿ ಪ್ರಾದೇಶಿಕ ಸ್ಥಿರತೆ ಸೇರಿದಂತೆ ವ್ಯಾಪಕ ಶ್ರೇಣಿಯ ದ್ವಿಪಕ್ಷೀಯ ಮತ್ತು ಜಾಗತಿಕ ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಸಭೆಯ ನಂತರ, ಜೈಶಂಕರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಎರಡೂ ಕಡೆಯವರು "ಆದ್ಯತೆಯ ಕ್ಷೇತ್ರಗಳಲ್ಲಿ ನಿರಂತರ ಮಾತುಕತೆಯ ಮಹತ್ವವನ್ನು" ಒಪ್ಪಿಕೊಂಡಿದ್ದಾರೆ, ಇದು ಹೆಚ್ಚುತ್ತಿರುವ ವ್ಯಾಪಾರ ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಸಂವಾದವನ್ನು ಮುಕ್ತವಾಗಿಡುವ ಪರಸ್ಪರ ಉದ್ದೇಶವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

"ನಮ್ಮ ಸಂಭಾಷಣೆಯು ಪ್ರಸ್ತುತ ಕಾಳಜಿಯ ಹಲವಾರು ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ಸಮಸ್ಯೆಗಳನ್ನು ಒಳಗೊಂಡಿದೆ. ಆದ್ಯತೆಯ ಕ್ಷೇತ್ರಗಳಲ್ಲಿ ಪ್ರಗತಿಗೆ ನಿರಂತರ ಮಾತುಕತೆಯ ಮಹತ್ವದ ಬಗ್ಗೆ ಒಪ್ಪಿಕೊಂಡಿದ್ದೇವೆ" ಎಂದು ಜೈಶಂಕರ್ ಹೇಳಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (UNGA) ಸಂದರ್ಭದಲ್ಲಿ ಈ ಸಭೆ ನಡೆದಿದ್ದು, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ವಾಷಿಂಗ್ಟನ್‌ನಲ್ಲಿ ಭಾರತ-ಯುಎಸ್ ವ್ಯಾಪಾರ ಮಾತುಕತೆಗಳು ಪುನರಾರಂಭಗೊಂಡಿರುವಂತೆಯೇ ಈ ಸಭೆ ನಡೆದಿರುವುದು ವ್ಯಾಪಕ ಕುತೂಹಲ ಕೆರಳಿಸಿದೆ.

ಈ ಹಿಂದೆ ಭಾರತದ ಕುರಿತು ಆಕ್ರಮಣಕಾರಿಯಾಗಿ ಮಾತನಾಡುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚಿನ ದಿನಗಳಲ್ಲಿ ಕೊಂಚ ಭಾರತದ ಕುರಿತು ಮೃದು ಧೋರಣೆ ತಳೆದಿರುವಂತಿದೆ. ಇದಕ್ಕೆ ಅವರ ಭಾರತದ ಕುರಿತ ಮಾತುಗಳು ಇಂಬು ನೀಡುತ್ತಿದ್ದು ಇದೇ ಹೊತ್ತಿನಲ್ಲಿ ಜೈಶಂಕರ್ ಮತ್ತು ರೂಬಿಯೋ ಮಾತುಕತೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪು ಕೋಟೆ ಬಳಿ ಕಾರು ಸ್ಫೋಟ 'ಭಯೋತ್ಪಾದಕ ದಾಳಿ': ಕೇಂದ್ರ ಸರ್ಕಾರ

ಧರ್ಮಸ್ಥಳ ಕೇಸ್: ತಿಮರೋಡಿ, ಗಿರೀಶ್ ಮಟ್ಟಣನವರ್ ತಂಡಕ್ಕೆ ಹೈಕೋರ್ಟ್ ಶಾಕ್; SIT ತನಿಖೆಗೆ ಅನುಮತಿ!

'BJP, ECಯಿಂದ ಬಹಿರಂಗವಾಗಿಯೇ ಮತಗಳ್ಳತನ': ಒಬ್ಬ ವ್ಯಕ್ತಿಯಿಂದ ಹಲವು ಕಡೆ ಮತದಾನ; ಪೋಸ್ಟ್ ಹಂಚಿಕೊಂಡ ರಾಹುಲ್

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆದರೆ ತಪ್ಪೇನು?- DK Shivakumar; ಸಿಎಂ ಹುದ್ದೆ ಕನಸು ಕೈಬಿಟ್ಟ DCM?

GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ; ದಶಕದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಣದುಬ್ಬರ

SCROLL FOR NEXT