ಜಾಕ್ವೆಲಿನ್ ಫರ್ನಾಂಡಿಸ್ 
ದೇಶ

Money laundering case: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ; ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು 'ಸುಪ್ರೀಂ' ನಕಾರ

ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡೀಸ್ ಆರೋಪಿಯಾಗಿದ್ದು, ತನಿಖೆಯಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದರು.

ನವದೆಹಲಿ: ಆರೋಪಿ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಸಿಐಆರ್ (ಎಫ್‌ಐಆರ್‌ಗೆ ಸಮ) ರದ್ದುಗೊಳಿಸುವಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

'ಈ ಹಂತದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ' ಎಂದು ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತಾ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಫರ್ನಾಂಡಿಸ್ ಅವರಿದ್ದ ಪೀಠವು ಹಿರಿಯ ವಕೀಲ ಮುಕುಲ್ ರೋಹಟಗಿ ಅವರಿಗೆ ತಿಳಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ಪ್ರಕರಣ ಮಾಹಿತಿ ವರದಿ (ECIR) ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಜುಲೈ 3ರ ದೆಹಲಿ ಹೈಕೋರ್ಟ್ ಆದೇಶವನ್ನು ಜಾಕ್ವೆಲಿನ್ ಫರ್ನಾಂಡಿಸ್ ಅವರು ಪ್ರಶ್ನಿಸಿದ್ದರು.

ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡೀಸ್ ಆರೋಪಿಯಾಗಿದ್ದು, ತನಿಖೆಯಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದರು.

ರ‍್ಯಾನ್‌ಬಾಕ್ಸಿಯ ಮಾಜಿ ಪ್ರವರ್ತಕರಾದ ಶಿವಿಂದರ್ ಸಿಂಗ್ ಮತ್ತು ಮಲ್ವಿಂದರ್ ಸಿಂಗ್ ಅವರ ಪತ್ನಿಯರಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಸುಕೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; ಕನಿಷ್ಠ 9 ಸಾವು, 20 ಜನರಿಗೆ ಗಾಯ; ದೆಹಲಿಯಲ್ಲಿ ಹೈ ಅಲರ್ಟ್; Video

Delhi ಸ್ಫೋಟ: ತನಿಖೆಗೆ ಕೈಜೋಡಿಸುವಂತೆ NIA, NSGಗೆ ಅಮಿತ್ ಶಾ ಆದೇಶ; ಕಾರು ಮಾಲೀಕ ವಶಕ್ಕೆ

Delhi ಕೆಂಪುಕೋಟೆ ಬಳಿ ಕಾರು ಸ್ಫೋಟ; ಬೆಂಗಳೂರಿನಲ್ಲೂ ತೀವ್ರ ಕಟ್ಟೆಚ್ಚರ; ಗಸ್ತು, ತಪಾಸಣೆ ಹೆಚ್ಚಿಸಲು ಸೂಚನೆ

Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

SCROLL FOR NEXT