ಪ್ರಧಾನಿ ಮೋದಿ 
ದೇಶ

GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ; ಕಾಂಗ್ರೆಸ್ ಈಶಾನ್ಯ ರಾಜ್ಯಗಳನ್ನು 'ನಿರ್ಲಕ್ಷಿಸಿದೆ' ಎಂದು ಆರೋಪ

ಇಂದು ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿ 5,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈಶಾನ್ಯ ರಾಜ್ಯಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಗುವಾಹಟಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ಶ್ಲಾಘಿಸಿದ್ದು, ಇದರ ಪ್ರಯೋಜನಗಳು ಜನರ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ ಎಂದು ಹೇಳಿದ್ದಾರೆ.

ಇಂದು ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿ 5,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈಶಾನ್ಯ ರಾಜ್ಯಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

"ಜಿಎಸ್ ಟಿ ಕಡಿತ ಮಾಡಿರುವುದರಿಂದ ಅಡುಗೆ ಸಾಮಗ್ರಿಗಳು, ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳು, ಪಾದರಕ್ಷೆಗಳು ಮತ್ತು ಬಟ್ಟೆಗಳಂತಹ ಅಗತ್ಯ ವಸ್ತುಗಳು ಹೆಚ್ಚು ಕೈಗೆಟುಕುವಂತಾಗಿವೆ. ಇದರಿಂದ ಕುಟುಂಬಗಳು ಈಗ ತಮ್ಮ ಮಾಸಿಕ ಬಜೆಟ್‌ನಲ್ಲಿ ಗಣನೀಯ ಉಳಿತಾಯ ಮಾಡಲಿವೆ" ಎಂದು ಹೇಳಿದರು.

ವರ್ಷಗಳಿಂದ ಪ್ರಮುಖ ಸವಾಲುಗಳನ್ನು ಎದುರಿಸುತ್ತಿದ್ದರೂ, ತಮ್ಮ ಸರ್ಕಾರ ನಿರಂತರವಾಗಿ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಿದೆ ಎಂದು ಪ್ರಧಾನಿ ಹೇಳಿದರು.

ಜಿಎಸ್‌ಟಿಯನ್ನು ಕೇವಲ ಎರಡು ಸ್ಲ್ಯಾಬ್‌ಗಳಿಗೆ, ಶೇ. 5 ಮತ್ತು ಶೇ. 18ಕ್ಕೆ ಸರಳೀಕರಿಸಲಾಗಿದೆ. ಅಲ್ಲದೆ ಅನೇಕ ವಸ್ತುಗಳು ತೆರಿಗೆ ಮುಕ್ತವಾಗಿವೆ ಮತ್ತು ಇತರ ಸರಕುಗಳ ಮೇಲಿನ ತೆರಿಗೆಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಮನೆ ನಿರ್ಮಿಸುವುದು, ಸ್ಕೂಟರ್ ಅಥವಾ ಬೈಕ್ ಖರೀದಿಸುವುದು, ಹೊರಗೆ ಊಟ ಮಾಡುವುದು ಮತ್ತು ಪ್ರಯಾಣಿಸುವುದು ಎಲ್ಲವೂ ಹೆಚ್ಚು ಕೈಗೆಟುಕುವಂತಾಗಿದೆ. ಜಿಎಸ್ಟಿ 'ಉಳಿತಾಯ ಉತ್ಸವ' ಜನರಿಗೆ ಒಂದು ಮೈಲಿಗಲ್ಲಾಗಲಿದೆ ಎಂದು ಮೋದಿ ಹೇಳಿದರು.

ಕಷ್ಟಕರವಾದ ಅಭಿವೃದ್ಧಿ ಕಾರ್ಯಗಳನ್ನು ತಪ್ಪಿಸುವುದು ಕಾಂಗ್ರೆಸ್‌ನ "ದೀರ್ಘಕಾಲದ ಪ್ರವೃತ್ತಿ"ಯಾಗಿದೆ. ಹೀಗಾಗಿ ಪರ್ವತ ಪ್ರದೇಶಗಳು, ಅರಣ್ಯ ಪ್ರದೇಶಗಳು - ಸವಾಲಿನ ಭೂಪ್ರದೇಶಗಳನ್ನು ಹೆಚ್ಚಾಗಿ ಹಿಂದುಳಿದ ಪ್ರದೇಶಗಳೆಂದು ಘೋಷಿಸಲಾಯಿತು ಮತ್ತು ಕಾಂಗ್ರೆಸ್ ಈಶಾನ್ಯ ರಾಜ್ಯಗಳನ್ನು ನಿರ್ಲಕ್ಷಿಸಿತು ಎಂದರು.

ಆದರೆ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ, ಕಳೆದ 10 ವರ್ಷಗಳಲ್ಲಿ ಅರುಣಾಚಲ ಪ್ರದೇಶಕ್ಕೆ 1 ಲಕ್ಷ ಕೋಟಿ ರೂ. ಹೆಚ್ಚು ಅನುದಾನ ನೀಡಿದೆ. ಇದು ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನೀಡಿದ್ದಕ್ಕಿಂತ 16 ಪಟ್ಟು ಹೆಚ್ಚು. ದೆಹಲಿಯಲ್ಲಿ ಕುಳಿತು ಈಶಾನ್ಯವನ್ನು ಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಈ ಹಿಂದೆ "ಹಿಂದುಳಿದ" ಎಂದು ಲೇಬಲ್ ಮಾಡಲಾದ ಜಿಲ್ಲೆಗಳನ್ನು ಈಗ "ಮಹತ್ವಾಕಾಂಕ್ಷೆಯ ಜಿಲ್ಲೆಗಳು" ಎಂದು ಮರು ವ್ಯಾಖ್ಯಾನಿಸಲಾಗಿದೆ. ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಮುಕ್ತಾಯ: ಪಳೆಯುಳಿಕೆ ಇಂಧನ ಕೊನೆಗೊಳಿಸುವ ವಿಚಾರ ಪ್ರತಿಜ್ಞೆಯಲ್ಲಿಲ್ಲ!

'ತಾಯಿ ಎದೆ ಹಾಲಿನಲ್ಲೇ ಯುರೇನಿಯಂ ಅಂಶ, ಬಿಹಾರದಲ್ಲಿ ಶಿಶುಗಳ ಮೇಲೆ ಮಾರಕ ಪರಿಣಾಮ': ತಜ್ಞರು ಹೇಳಿದ್ದೇನು?

ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಶೀಘ್ರವೇ ಭಾರತದ ವಶ; ಗಡಿಗಳು ಬದಲಾಗಲಿವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್; ಪಾಕ್ ಗಡ ಗಡ!

Video: 'ಮನೆಹಾಳು ಕೆಲಸ ಬೇಡ.. ನನ್ನ ಮತ್ತು ಕುಮಾರಸ್ವಾಮಿ ನಡುವೆ ತಂದಿಡಬೇಡಿ..'; ಮಾಧ್ಯಮಗಳ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು: 7 ಕೋಟಿ ರೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಅಮಾನತು!

SCROLL FOR NEXT