ಅಜಂ ಖಾನ್ 
ದೇಶ

Uttar Pradesh: 23 ತಿಂಗಳ ಬಳಿಕ ಜೈಲಿನಿಂದ ಹೊರಗೆ ಬಂದ SP ನಾಯಕ ಅಜಂ ಖಾನ್!

ಬ್ಲಾಕ್ ಕೋಟ್ ನೊಂದಿಗೆ ಬಿಳಿ ಕುರ್ತಾ-ಪೈಜಾಮಾ ಧರಿಸಿದ ಖಾನ್, ಖಾಸಗಿ ಕಾರಿನಲ್ಲಿ ಜೈಲು ಆವರಣದಿಂದ ತೆರಳಿದರು. ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದ ವರದಿಗಾರರೊಂದಿಗೆ ಮಾತುಕತೆ ನಡೆಸಲಿಲ್ಲ.

ಸೀತಾಪುರ: ಸಮಾಜವಾದಿ ಪಕ್ಷದ ನಾಯಕ ಮತ್ತು ಮಾಜಿ ಲೋಕಸಭಾ ಸದಸ್ಯ ಅಜಂ ಖಾನ್ 23 ತಿಂಗಳ ಬಳಿಕ ಉತ್ತರ ಪ್ರದೇಶದ ಸೀತಾಪುರದ ಜೈಲಿನಿಂದ ಹೊರಗೆ ಬಂದಿದ್ದಾರೆ. Quality Bar ಭೂಮಿ ಅತಿಕ್ರಮಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೈಲು ಸೇರಿದ್ದರು.

ಬ್ಲಾಕ್ ಕೋಟ್ ನೊಂದಿಗೆ ಬಿಳಿ ಕುರ್ತಾ-ಪೈಜಾಮಾ ಧರಿಸಿದ ಖಾನ್, ಖಾಸಗಿ ಕಾರಿನಲ್ಲಿ ಜೈಲು ಆವರಣದಿಂದ ತೆರಳಿದರು. ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದ ವರದಿಗಾರರೊಂದಿಗೆ ಏನನ್ನೂ ಮಾತನಾಡದೇ ಹೊರಟು ಹೋದರು.

ಅವರನ್ನು ಬರಮಾಡಿಕೊಳ್ಳಲು ಎಸ್‌ಪಿ ಶಾಸಕ ಶಿವಪಾಲ್ ಸಿಂಗ್ ಯಾದವ್, ಅಜಂ ಖಾನ್ ಅವರ ಹಿರಿಯ ಮಗ ಅದೀಬ್ ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಅಜಂ ಖಾನ್ ಅವರನ್ನು ಬರಮಾಡಿಕೊಳ್ಳಲು ಸೀತಾಪುರ ಜಿಲ್ಲಾ ಕಾರಾಗೃಹದ ಹೊರಗೆ ಬೆಳಿಗ್ಗೆಯಿಂದಲೇ ಜಮಾಯಿಸಿದ್ದರು.

ಈ ವೇಳೆ ಮಾತನಾಡಿದ ಎಸ್‌ಪಿ ಶಾಸಕ ಶಿವಪಾಲ್ ಸಿಂಗ್ ಯಾದವ್, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಹೋದ್ಯೋಗಿ ಹಾಗೂ ಲೋಕಸಭೆಯ ಮಾಜಿ ಸಂಸದ ಆಜಂ ಖಾನ್ ಅವರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದರು.

ಅಜಂಖಾನ್ ಜೈಲಿನಿಂದ ಬಿಡುಗಡೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸ್ವಾಗತಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಅಜಂಖಾನ್ ಮೇಲಿನ ಎಲ್ಲಾ "ಸುಳ್ಳು" ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಘೋಷಿಸಿದರು.

"ಅಜಂ ಖಾನ್ ಸಮಾಜವಾದಿ ಪಕ್ಷದ ಸಂಸ್ಥಾಪಕ ಸದಸ್ಯ ಮಾತ್ರವಲ್ಲದೆ ಸಮಾಜವಾದಿ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂದು ಬಹಳ ಸಂತೋಷದ ಕ್ಷಣವಾಗಿದೆ. ಕೊನೆಗೂ ಅವರಿಗೆ ನ್ಯಾಯ ಸಿಕ್ಕಿದೆ ಎಂದು ಯಾದವ್ ಸುದ್ದಿಗಾರರಿಗೆ ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; SRK, ವಿಕ್ರಾಂತ್ ಮಾಸ್ಸೆ ಹಾಗೂ ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರದಾನ!

'ಭಾರತ ವಿರುದ್ಧ ಗೆಲ್ಲಬೇಕಿದ್ರೆ ಪಾಕ್ ಸೇನಾ ಮುಖ್ಯಸ್ಥರೇ ಬ್ಯಾಟ್ ಹಿಡೀಬೇಕು': PCB ವಿರುದ್ಧ Imran Khan ಗರಂ!

KRSನಲ್ಲಿ 5 ದಿನ ‘ಕಾವೇರಿ ಆರತಿ’: ಸೆ.26ಕ್ಕೆ DCM ಡಿ.ಕೆ ಶಿವಕುಮಾರ್ ಉದ್ಘಾಟನೆ

Bengaluru: 'ನನ್ ಗಂಡ ನಪುಂಸಕ.. 2 ಕೋಟಿ ರೂ ಕೊಡ್ಸಿ...'; ನವ ವಿವಾಹಿತೆ ಬೇಡಿಕೆ! ಆದ್ರೆ ಗಂಡನಿಂದಲೇ FIR

ಧರ್ಮಸ್ಥಳ ಪ್ರಕರಣ: ಅಗತ್ಯವಿದ್ದರೆ ಚಿನ್ನಯ್ಯ ಕುಟುಂಬಕ್ಕೆ ರಕ್ಷಣೆ ನೀಡಲಾಗುವುದು- ಪರಮೇಶ್ವರ; Video

SCROLL FOR NEXT