ಸೋನಮ್ ವಾಂಗ್‌ಚುಕ್ 
ದೇಶ

ಲಡಾಖ್‌ ಬಿಜೆಪಿ ಕಚೇರಿಗೆ ಬೆಂಕಿ; ಹಿಂಸಾಚಾರದ ನಂತರ ಮುಷ್ಕರ ಹಿಂಪಡೆ ಸೋನಮ್ ವಾಂಗ್‌ಚುಕ್

ಇಂದು ನೂರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಲೇಹ್ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಸಹ ನಡೆಸಿದರು.

ಲಡಾಖ್‌: ಲಡಾಖ್‌ಗೆ ರಾಜ್ಯದ ಸ್ಥಾನಮಾನ ಮತ್ತು ಆರನೇ ಪರಿಚ್ಛೇದದಡಿಯಲ್ಲಿ ಸೇರಿಸುವಂತೆ ಒತ್ತಾಯಿಸಿ ಬುಧವಾರ ನಡೆಸಲಾಗುತ್ತಿದ್ದ ಪ್ರತಿಭಟನೆ ಮತ್ತು ಬಂದ್ ಹಿಂಸಾಚಾರಕ್ಕೆ ತಿರುಗಿದ್ದು, ಬಿಜೆಪಿ ಕಚೇರಿ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಇಂದು ನೂರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಲೇಹ್ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಸಹ ನಡೆಸಿದರು. ನಂತರ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿ ಲಾಠಿ ಪ್ರಹಾರ ನಡೆಸಿದರು.

ಇದೀಗ ಹವಾಮಾನ ಹೋಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ 15 ದಿನಗಳ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ.

"ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ನಾನು ಲಡಾಖ್‌ನ ಯುವಕರನ್ನು ವಿನಂತಿಸುತ್ತೇನೆ. ಏಕೆಂದರೆ ಅದು ನಮ್ಮ ಉದ್ದೇಶಕ್ಕೆ ಹಾನಿಯನ್ನುಂಟುಮಾಡುತ್ತದೆ ಮತ್ತು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸುತ್ತದೆ. ನಾವು ಲಡಾಖ್ ಮತ್ತು ದೇಶದಲ್ಲಿ ಅಸ್ಥಿರತೆಯನ್ನು ಬಯಸುವುದಿಲ್ಲ" ಎಂದು ಮುಷ್ಕರದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ತಮ್ಮ ಬೆಂಬಲಿಗರಿಗೆ ವಾಂಗ್‌ಚುಕ್ ಹೇಳಿದರು.

ಹಿಂಸಾಚಾರ ತೀವ್ರಗೊಳ್ಳುತ್ತಿದ್ದಂತೆ, ವಾಂಗ್‌ಚುಕ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಸಂದೇಶ ಬಿಡುಗಡೆ ಮಾಡಿ, ಯುವಕರು ಶಾಂತಿಯುತವಾಗಿರಬೇಕು ಮತ್ತು ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ಲಡಾಖ್ ರಾಜಧಾನಿಯಲ್ಲಿ ಸಂಪೂರ್ಣ ಬಂದ್ ನಡುವೆಯೂ ಬೆಂಕಿ ಜ್ವಾಲೆಗಳು ಮತ್ತು ನಗರದಾದ್ಯಂತ ಹೊಗೆ ಆವರಿಸಿತ್ತು. ಐದು ಅಥವಾ ಅದಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಲು ಸರ್ಕಾರ ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ

ಅಮೆರಿಕ ವೆನೆಜುವೆಲಾದಿಂದ ಮಾರುಕಟ್ಟೆ ಬೆಲೆಗೆ 30 ರಿಂದ 50 ಮಿಲಿಯನ್ ಬ್ಯಾರೆಲ್ ತೈಲ ಪಡೆಯಲಿದೆ: Donald Trump

ಎಷ್ಟು ದಿನ ಕುರ್ಚಿ ಮೇಲೆ ಕೂತಿದ್ದರು ಎನ್ನುವುದಕ್ಕಿಂತ ಆ ಸ್ಥಾನದಲ್ಲಿ ಕುಳಿತು ಮಾಡಿದ ಕೆಲಸಗಳಿಗೆ ಮಹತ್ವ ಹೆಚ್ಚು..!

ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪರಿಷತ್ ಚುನಾವಣೆ: ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧೆ ಇಂಗಿತ, ಕೋರ್ ಕಮಿಟಿಯಲ್ಲಿ ಚರ್ಚೆ

India–US trade row: 'ಎಲ್ಲವೂ ಬದಲಾಗಿದೆ.. ಪ್ರಧಾನಿ ಮೋದಿ ಕೋಪಗೊಂಡಿದ್ದಾರೆ..': ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್! Video

SCROLL FOR NEXT