ಚುನಾವಣಾ ಆಯೋಗ 
ದೇಶ

ಮತ ಎಣಿಕೆ ನಿಯಮ ಪರಿಷ್ಕರಿಸಿದ ಚುನಾವಣಾ ಆಯೋಗ; ಬಿಹಾರ ಚುನಾವಣೆಯಿಂದಲೇ ಜಾರಿ

ಇಲ್ಲಿಯವರೆಗೆ, ಎಣಿಕೆಯ ದಿನದಂದು, ಅಂಚೆ ಮತಪತ್ರಗಳ ಎಣಿಕೆ ಬೆಳಗ್ಗೆ 8 ಗಂಟೆಗೆ ಮತ್ತು ಇವಿಎಂ ಮತಗಳ ಎಣಿಕೆ ಬೆಳಗ್ಗೆ 8:30 ಕ್ಕೆ ಪ್ರಾರಂಭವಾಗುತ್ತದೆ.

ನವದೆಹಲಿ: ಹೆಚ್ಚಿನ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ ಚುನಾವಣಾ ಆಯೋಗವು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅಂಚೆ ಮತಪತ್ರಗಳ ಎಣಿಕೆ ಪ್ರಕ್ರಿಯೆಯನ್ನು ಸುಗಮಗೊಳಿಸಿದೆ.

ಇಲ್ಲಿಯವರೆಗೆ, ಎಣಿಕೆಯ ದಿನದಂದು, ಅಂಚೆ ಮತಪತ್ರಗಳ ಎಣಿಕೆ ಬೆಳಗ್ಗೆ 8 ಗಂಟೆಗೆ ಮತ್ತು ಇವಿಎಂ ಮತಗಳ ಎಣಿಕೆ ಬೆಳಗ್ಗೆ 8:30 ಕ್ಕೆ ಪ್ರಾರಂಭವಾಗುತ್ತದೆ.

ಹಿಂದಿನ ಸೂಚನೆಗಳ ಪ್ರಕಾರ, ಅಂಚೆ ಮತಪತ್ರಗಳ ಎಣಿಕೆಯ ಹಂತವನ್ನು ಲೆಕ್ಕಿಸದೆ ಇವಿಎಂ ಎಣಿಕೆ ಸೈದ್ಧಾಂತಿಕವಾಗಿ ಮುಂದುವರಿಯಬಹುದು ಮತ್ತು ಅಂಚೆ ಮತಪತ್ರಗಳ ಎಣಿಕೆ ಪೂರ್ಣಗೊಳ್ಳುವ ಮೊದಲು ಇವಿಎಂ ಮತ ಎಣಿಕೆ ಪೂರ್ಣಗೊಳಿಸಬಹುದಾಗಿತ್ತು.

ಆದರೆ ಎಣಿಕೆ ಪ್ರಕ್ರಿಯೆಯಲ್ಲಿ ಏಕರೂಪತೆ ಮತ್ತು ಅತ್ಯಂತ ಸ್ಪಷ್ಟತೆಯನ್ನು ಖಚಿತಪಡಿಸಿಕೊಳ್ಳಲು, ಚುನಾವಣಾ ಆಯೋಗ ಇವಿಎಂಗಳ ಮತ ಎಣಿಕೆಗೂ ಮೊದಲು ಅಂಚೆ ಮತಪತ್ರಗಳ ಎಣಿಕೆ ಪೂರ್ಣಗೊಳಿಸಲು ನಿರ್ಧರಿಸಿದೆ. ಈಗ ಅಂಚೆ ಮತಪತ್ರಗಳ ಎಣಿಕೆ ನಡೆಯುತ್ತಿರುವ ಎಣಿಕೆ ಕೇಂದ್ರದಲ್ಲಿ ಅಂತಿಮ ಸುತ್ತಿನ ಇವಿಎಂ ಎಣಿಕೆ ಕೈಗೊಳ್ಳುವ ಮುನ್ನ ಅಂಚೆ ಮತಪತ್ರಗಳ ಎಣಿಕೆ ಪೂರ್ಣಗೊಳಿಸಲು ನಿರ್ಧರಿಸಿದೆ.

ನವೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಈ ಹೊಸ ನಿಯಮ ಮೊದಲು ಜಾರಿಗೆ ತರಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಹೆಚ್ಚಿನ ಸಂಖ್ಯೆಯ ಅಂಚೆ ಮತಪತ್ರಗಳಿರುವ ಸಂದರ್ಭಗಳಲ್ಲಿ, ಯಾವುದೇ ವಿಳಂಬವಾಗದಂತೆ ಮತ್ತು ಎಣಿಕೆ ಪ್ರಕ್ರಿಯೆಯನ್ನು ಮತ್ತಷ್ಟು ಸುಗಮಗೊಳಿಸಲು ಚುನಾವಣಾಧಿಕಾರಿಗಳು ಸಾಕಷ್ಟು ಸಂಖ್ಯೆಯ ಮೇಜುಗಳು ಮತ್ತು ಎಣಿಕೆ ಸಿಬ್ಬಂದಿ ಇರುವಂತೆ ನೋಡಿಕೊಳ್ಳಬೇಕು ಎಂದು ಆಯೋಗವು ನಿರ್ದೇಶಿಸಿದೆ.

ಅಂಗವಿಕಲರು ಮತ್ತು 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಆಯೋಗ ಇತ್ತೀಚೆಗೆ ಅವಕಾಶ ನೀಡಿದ ನಂತರ ಅಂಚೆ ಮತಪತ್ರಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT