ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್. Photo | IANS
ದೇಶ

ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಗೆ ಕರೆ ಮಾಡಿಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ತೈಲ ಖರೀದಿಗೆ ಸಂಬಂಧಿಸಿದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಕರೆ ಮಾಡಿ, ಮಾತನಾಡುತ್ತಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ಯಾವುದೇ ಫೋನ್ ಸಂಭಾಷಣೆ ನಡೆದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ತೈಲ ಖರೀದಿಗೆ ಸಂಬಂಧಿಸಿದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಕರೆ ಮಾಡಿ, ಮಾತನಾಡುತ್ತಿದ್ದಾರೆ ಎಂದು ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಅವರ ಹೇಳಿಕೆಯನ್ನು ನಾವು ಗಮನಿಸಿದ್ದೇವೆ. ಆ ಈ ಹೇಳಿಕೆ ವಾಸ್ತವಿಕವಾಗಿ ತಪ್ಪಾಗಿದೆ ಮತ್ತು ಸಂಪೂರ್ಣ ಆಧಾರರಹಿತವಾಗಿದೆ ಎಂದು ಜೈಸ್ವಾಲ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಅಧ್ಯಕ್ಷ ಪುಟಿನ್ ಅವರೊಂದಿಗೆ ಯಾವುದೇ ಹಂತದಲ್ಲೂ ಮಾತನಾಡಿಲ್ಲ. ಅಂತಹ ಯಾವುದೇ ಸಂಭಾಷಣೆ ನಡೆದಿಲ್ಲ. ನ್ಯಾಟೋದಂತಹ ಪ್ರಮುಖ ಮತ್ತು ಗೌರವಾನ್ವಿತ ಸಂಸ್ಥೆಯ ನಾಯಕತ್ವವು ಸಾರ್ವಜನಿಕವಾಗಿ ಹೇಳಿಕೆ ನೀಡುವಾಗ ಹೆಚ್ಚಿನ ಜವಾಬ್ದಾರಿ ಮತ್ತು ನಿಖರತೆಯನ್ನು ನಾವು ನಿರೀಕ್ಷಿಸುತ್ತೇವೆ ಎಂದಿದ್ದಾರೆ.

"ಊಹಾತ್ಮಕ ಅಥವಾ ಅಸಡ್ಡೆ ಹೇಳಿಕೆಗಳು ಎಂದಿಗೂ ಸ್ವೀಕಾರಾರ್ಹವಲ್ಲ. ಹಿಂದೆ ಹೇಳಿದಂತೆ, ಭಾರತದ ಇಂಧನ ಆಮದು ಭಾರತೀಯ ಗ್ರಾಹಕರಿಗೆ ಊಹಿಸಬಹುದಾದ ಮತ್ತು ಕೈಗೆಟುಕುವ ಇಂಧನ ವೆಚ್ಚವನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ. ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳು ಮತ್ತು ಆರ್ಥಿಕ ಭದ್ರತೆಯನ್ನು ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತದೆ" ಎಂದು ಅವರು ತಿಳಿಸಿದ್ದಾರೆ.

ರಷ್ಯಾದ ತೈಲ ಖರೀದಿಗಾಗಿ ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ ಸುಂಕಗಳು, ಮಾಸ್ಕೋದ ಮೇಲೆ "ದೊಡ್ಡ ಪರಿಣಾಮ" ಬೀರುತ್ತಿವೆ ಎಂದು ಮಾರ್ಕ್ ರುಟ್ಟೆ ಹೇಳಿದ್ದಾರೆ. ಅಲ್ಲದೇ ಇದೇ ವಿಚಾರವಾಗಿ ನರೇಂದ್ರ ಮೋದಿ ಅವರು ಪದೇ ಪದೇ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಕರೆ ಮಾಡಿ, ಮುಂದಿನ ರಣತಂತ್ರದ ಕುರಿತು ಪ್ರಶ್ನೆ ಕೇಳುತ್ತಿದ್ದಾರೆ ಎಂದೂ ಮಾರ್ಕ್‌ ರುಟ್ಟೆ ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Sonam Wangchuk Arrested: NSA ಅಡಿ ಕೇಸ್; ಜಾಮೀನು ಸಿಗುವ ಸಾಧ್ಯತೆಯೇ ಇಲ್ಲ!

ಜಾತಿ ಗಣತಿ: ಇಲ್ಲಿಯವರೆಗೆ ಕೇವಲ ಶೇ.2 ರಷ್ಟು ಪ್ರಗತಿ; ಪ್ರತಿದಿನ ಶೇ.10 ರಷ್ಟು ಸಮೀಕ್ಷೆಗೆ ಸಿಎಂ ಸೂಚನೆ; ಗಡುವಿನೊಳಗೆ ಪೂರ್ಣ!

Asia Cup 2025: Indian Army ಕುರಿತು ವ್ಯಂಗ್ಯ, ಪಾಕ್ ಕ್ರಿಕೆಟಿಗ Haris Rauf ಗೆ ಬರೆ ಹಾಕಿದ ICC, ದಂಡ, ಫರ್ಹಾನ್ ಗೂ ಎಚ್ಚರಿಕೆ!

'I Love Muhammed' row: ಬರೇಲಿಯ ಮಸೀದಿ ಹೊರಗೆ ಸ್ಥಳೀಯ ಮುಸ್ಲಿಮರು, ಪೊಲೀಸರ ನಡುವೆ ಭಾರಿ ಘರ್ಷಣೆ! ಕಾರಣವೇನು?

Cricket: 'ಅವರ ''ಗರ್ವ'' ಮುರಿಯಿರಿ'..: Asia Cup Final ನಲ್ಲಿ ಭಾರತ ಮಣಿಸಲು Shoaib Akhtar ಮಾಸ್ಟರ್ ಪ್ಲಾನ್!

SCROLL FOR NEXT