ಪೊಲೀಸರು ಮತ್ತು ಸ್ಥಳೀಯರ ನಡುವಿನ ಘರ್ಷಣೆಯ ಚಿತ್ರ 
ದೇಶ

'I Love Muhammed' row: ಬರೇಲಿಯ ಮಸೀದಿ ಹೊರಗೆ ಸ್ಥಳೀಯ ಮುಸ್ಲಿಮರು, ಪೊಲೀಸರ ನಡುವೆ ಭಾರಿ ಘರ್ಷಣೆ! ಕಾರಣವೇನು?

ಬರೇಲಿಯ ಮಸೀದಿಯ ಹೊರಗೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಗುಂಪು ಮತ್ತು ಪೊಲೀಸರ ನಡುವೆ ಘರ್ಷಣೆ ಭುಗಿಲೆದ್ದಿತ್ತು.

ಬರೇಲಿ: ಉತ್ತರ ಪ್ರದೇಶದ ಬರೇಲಿಯ ಮಸೀದಿ ಹೊರಗಡೆ ಪೊಲೀಸರು ಹಾಗೂ ಸ್ಥಳೀಯ ಮುಸ್ಲಿಮರ ನಡುವೆ ಶುಕ್ರವಾರ ಭಾರಿ ಘರ್ಷಣೆ ನಡೆದಿದೆ.

I Love Muhammad' ಪ್ರಚಾರಂದೋಲನಾ ಬೆಂಬಲಿಸಿ ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಯನ್ನು ಮುಂದೂಡುವುದಾಗಿ ಸ್ಥಳೀಯ ಧರ್ಮಗುರು ಮತ್ತು ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್‌ನ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಘೋಷಿಸುತ್ತಿದ್ದಂತೆಯೇ ಬರೇಲಿಯ ಮಸೀದಿಯ ಹೊರಗೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಗುಂಪು ಮತ್ತು ಪೊಲೀಸರ ನಡುವೆ ಘರ್ಷಣೆ ಭುಗಿಲೆದ್ದಿತ್ತು.

ಶುಕ್ರವಾರದ ಪ್ರಾರ್ಥನೆಯ ನಂತರ ಕೋಟ್ವಾಲಿ ಪ್ರದೇಶದಲ್ಲಿನ ಧರ್ಮಗುರುಗಳ ನಿವಾಸದ ಹೊರಗೆ ಮತ್ತು ಮಸೀದಿಯ ಬಳಿ I Love Muhammad'ಎಂದು ಬರೆಯಲಾದ ಪೋಸ್ಟರ್‌ಗಳನ್ನು ಹಿಡಿದ ಜನರು ಪ್ರತಿಭಟನೆ ಸ್ಥಗಿತದ ಸುದ್ದಿ ಕೇಳಿ ಆಕ್ರೋಶ ಭರಿತರಾದರು ಎಂದು ಪೊಲೀಸರು ಹೇಳಿದ್ದಾರೆ.

ಈ ಪ್ರತಿಭಟನೆಗೆ ಪೊಲೀಸ್ ಅಧಿಕಾರಿಗಳು ಅನುಮತಿ ನೀಡದೆ ಇದುದ್ದರಿಂದ ರಾಜಾ ಅವರು ಕೊನೆ ಕ್ಷಣದಲ್ಲಿ ಪ್ರತಿಭಟನೆ ಸ್ಥಗಿತದ ಘೋಷಣೆ ಮಾಡಿದರು ಎಂದು ಮೂಲಗಳು ತಿಳಿಸಿವೆ. ಏನೇ ಆಗಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ಗುರುವಾರ ಹೇಳಿದ್ದರು.

ಮಸೀದಿಯ ಹೊರಗೆ ಜಮಾಯಿಸಿದ ಗುಂಪನ್ನು ಚದುರಿಸಲು ಪೊಲೀಸರು ಪ್ರಯತ್ನಿಸಿದಾಗ ಉದ್ರಿಕ್ತರಾದ ಪ್ರತಿಭಟನಾಕಾರರು ಕಲ್ಲು ತೂರಾಟ ಆರಂಭಿಸಿದ್ದಾರೆ. ಇದರಿಂದಾಗಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಡಿಐಜಿ ಅಜಯ್ ಕುಮಾರ್ ಸಾಹ್ನಿ, ಎಸ್‌ಎಸ್‌ಪಿ ಅನುರಾಗ್ ಆರ್ಯ ಮತ್ತು ಡಿಎಂ ಅವಿನಾಶ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೊತ್ವಾಲಿ ಪ್ರದೇಶಕ್ಕೆ ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಸ್ಥಳೀಯ ಮುಸ್ಲಿಂರು ಶಸ್ತ್ರ ಸಜ್ಜಿತರಾದ ಪೊಲೀಸರೊಂದಿಗೆ ಘರ್ಷಣೆ ನಡೆಸುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮ ಮತ್ತು ದೂರದರ್ಶನ ಸುದ್ದಿ ವಾಹಿನಿಗಳಲ್ಲಿನ ವೈರಲ್ ಆಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!