ದೇಶ

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 8 ಮಕ್ಕಳು ಸೇರಿ 36 ಮಂದಿ ಸಾವು; 40 ಜನರಿಗೆ ಗಂಭೀರ ಗಾಯ!

ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ.

ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ. ಜನಸಮೂಹ ಇದ್ದಕ್ಕಿದ್ದಂತೆ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದ್ದು ಎಂಟು ಮಕ್ಕಳು ಸೇರಿದಂತೆ ಸುಮಾರು 36ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಗದಿತ ಸಮಯಕ್ಕಿಂತ 6 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ಇನ್ನು ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರೂ ಸಂಖ್ಯೆಯಲ್ಲಿ ಜನ ನುಗ್ಗಲು ಪ್ರಾರಂಭಿಸಿದರು. ಈ ವೇಳೆ ಜನಸಂದಣಿ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ.

ಕಾಲ್ತುಳಿತದ ವೇಳೆ ಹಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಹಲವು ಮಕ್ಕಳು ಕಾಣೆಯಾಗಿವೆ ಎಂದು ವರದಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ವಿಜಯ್ ತಕ್ಷಣ ತಮ್ಮ ಭಾಷಣವನ್ನು ನಿಲ್ಲಿಸಿ ಕಾರ್ಯಕರ್ತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವಂತೆ ಕೇಳಿಕೊಂಡರು.

ಟಿವಿಕೆ ಪಕ್ಷದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ಕುರಿತಂತೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕರೂರ್ ಜಿಲ್ಲಾಧಿಕಾರಿಗೆ ಸ್ಥಳಕ್ಕೆ ಧಾವಿಸಿ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದರು. ಆರೋಗ್ಯ ಸಚಿವರು ಮತ್ತು ಶಾಲಾ ಶಿಕ್ಷಣ ಸಚಿವರು ಕರೂರ್ ಗೆ ತೆರಳುವಂತೆ ಸೂಚಿಸಿದ್ದಾರೆ.

10 ಸಾವಿರ ಮಂದಿ ಸೇರುವ ನಿರೀಕ್ಷೆ ಇತ್ತು. ಹೀಗಾಗಿ ಪೊಲೀಸರಿಗೆ ಭದ್ರತೆ ನೀಡುವಂತೆ ವಿಜಯ್ ಕೇಳಿಕೊಂಡಿದ್ದರು. ಆದರೆ ಅಂದಾಜಿನ ಪ್ರಕಾರ ಸುಮಾರು 30,000 ಜನರು ರ‍್ಯಾಲಿಗೆ ಸೇರಿದ್ದು ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಇನ್ನು ಡಿಎಂಕೆ ಪಕ್ಷ ಈ ಕಾಲ್ತುಳಿತಕ್ಕೆ ವಿಜಯ್ ಅವರ ನಿರ್ಲಕ್ಷ್ಯಕ್ಕೆ ಕಾರಣ ಎಂದು ದೂಷಿಸಿದ್ದು, ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!

'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಬೆದರಿಕೆಗಳಿಗೆ ಹೆದರಲ್ಲ, ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು, ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!