ವ್ಲಾಡಿಮಿರ್ ಪುಟಿನ್, ಪ್ರಧಾನಿ ಮೋದಿ 
ದೇಶ

Putin-Modi: ಮೋದಿ ನಾಯಕತ್ವದ ಭಾರತ ಅತ್ಯಧಿಕ ಆರ್ಥಿಕ ಬೆಳವಣಿಗೆ; ವ್ಲಾಡಿಮಿರ್ ಪುಟಿನ್ ಶ್ಲಾಘನೆ

ಕ್ರೆಮ್ಲಿನ್‌ನ ಅಧಿಕೃತ ವೆಬ್‌ಸೈಟ್ ವರದಿ ಮಾಡಿದೆ. ರಷ್ಯಾ- ಭಾರತದ ಸಂಬಂಧಗಳನ್ನು 'ರಾಷ್ಟ್ರೀಯ ಒಮ್ಮತದ ಆಧಾರದ ಮೇಲೆ' ಸ್ಥಿರವಾದದ್ದು ಎಂದು ಹೇಳಿರುವ ಪುಟಿನ್, ಮೋದಿಯವರ ನಾಯಕತ್ವದಲ್ಲಿ ಆಡಳಿತ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಭಾರತದ ಸಾಧನೆಗಳನ್ನು ಶ್ಲಾಘಿಸಿದ್ದಾರೆ.

ನವದೆಹಲಿ: ಮೋದಿ ನಾಯಕತ್ವದ ಭಾರತ ಅತ್ಯಧಿಕ ಆರ್ಥಿಕ ಬೆಳವಣಿಗೆ ಸಾಧಿಸಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶ್ಲಾಘಿಸಿದ್ದಾರೆ.

ಹೌದು. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ವ್ಲಾಡಿಮಿರ್ ಪುಟಿನ್, ರಷ್ಯಾ ಮತ್ತು ಭಾರತ ನಡುವಿನ ಸದೃಢ ಸಂಬಂಧವನ್ನು ಪುನರುಚ್ಚರಿಸಿದ್ದಾರೆ. ರಷ್ಯಾ ಸರ್ಕಾರದ ಸದಸ್ಯರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ ಜೊತೆಗಿನ ಮಾತುಕತೆಯ ವಿವರಗಳನ್ನು ಪುಟಿನ್ ಹಂಚಿಕೊಂಡಿರುವುದಾಗಿ ಕ್ರೆಮ್ಲಿನ್‌ನ ಅಧಿಕೃತ ವೆಬ್‌ಸೈಟ್ ವರದಿ ಮಾಡಿದೆ.

ರಷ್ಯಾ- ಭಾರತದ ಸಂಬಂಧಗಳನ್ನು 'ರಾಷ್ಟ್ರೀಯ ಒಮ್ಮತದ ಆಧಾರದ ಮೇಲೆ' ಸ್ಥಿರವಾದದ್ದು ಎಂದು ಹೇಳಿರುವ ಪುಟಿನ್, ಮೋದಿಯವರ ನಾಯಕತ್ವದಲ್ಲಿ ಆಡಳಿತ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಭಾರತದ ಸಾಧನೆಗಳನ್ನು ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತ ಸಂಪೂರ್ಣ ಸ್ವತಂತ್ರ, ಸಾರ್ವಭೌಮ ನೀತಿಯನ್ನು ಅನುಸರಿಸುತ್ತಿದೆ. ಮುಖ್ಯವಾಗಿ ಆರ್ಥಿಕ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಸಾಧಿಸುತ್ತಿದೆ. ವಿಶ್ವದ ಪ್ರಮುಖ ಆರ್ಥಿಕತೆಗಳಲ್ಲಿ ಭಾರತವು ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಿದೆ ಎಂದು ಅವರು ಹೇಳಿದ್ದಾರೆ.

ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಟೆಲಿಗ್ರಾಂ ಮೂಲಕ ಶುಭಾಶಯ ಕಳುಹಿಸಿದ ಕೂಡಲೇ ಉಭಯ ನಾಯಕರು ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದು, ಉಭಯ ರಾಷ್ಟ್ರಗಳ ಸದೃಢ ಸಂಬಂಧದಲ್ಲಿ ಮೋದಿ ಅವರ ವೈಯಕ್ತಿಕ ಕೊಡುಗೆಗಳನ್ನು ಪುಟಿನ್ ಒತ್ತಿ ಹೇಳಿರುವುದಾಗಿ ಟಿವಿ ಬ್ರಿಕ್ಸ್ ವರದಿ ಮಾಡಿದೆ. ರಷ್ಯಾ ಧೀರ್ಘಕಾಲದ ಪ್ರಾಮಾಣಿಕ ಮಿತ್ರ ರಾಷ್ಟ್ರವಾಗಿದೆ. ರಷ್ಯಾ-ಭಾರತ ನಡುವಿನ ಸಂಬಂಧ ಅಭಿವೃದ್ಧಿ ಭಾರತದ ವಿದೇಶಾಂಗ ನೀತಿಯಲ್ಲಿ ಪ್ರಮುಖವಾಗಿದೆ ಎಂದು ಎಂದು MEA ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT