ಕರೂರು ಕಾಲ್ತುಳಿತ ದುರಂತ 
ದೇಶ

ಕರೂರು ಕಾಲ್ತುಳಿತ ದುರಂತ: 36 ಮಂದಿ ಸಾವು; ತಮಿಳುನಾಡಿನಿಂದ ವರದಿ ಕೇಳಿದ ಕೇಂದ್ರ; TVK ವಿಜಯ್ ಪ್ರತಿಕ್ರಿಯೆ ಏನು?

40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತ ಕುರಿತು ಕೇಂದ್ರ ಸರ್ಕಾರ ತಮಿಳುನಾಡಿನಿಂದ ವರದಿ ಕೇಳಿದೆ.

ಕರೂರು: ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ಎಂಟು ಮಕ್ಕಳು, 16 ಮಹಿಳೆಯರು ಸೇರಿದಂತೆ ಮೂವತ್ತಾರು ಜನರು ಸಾವನ್ನಪ್ಪಿದ್ದಾರೆ.

40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತ ಕುರಿತು ಕೇಂದ್ರ ಸರ್ಕಾರ ತಮಿಳುನಾಡಿನಿಂದ ವರದಿ ಕೇಳಿದೆ.

ಈ ಮಧ್ಯೆ ದುರಂತ ಕುರಿತು ಟಿವಿಕೆ ಮುಖ್ಯಸ್ಥ ವಿಜಯ್ ಮೌನ ಮುರಿದಿದ್ದಾರೆ. ಈ ದುರಂತದಿಂದ ಹೃದಯ ಚೂರಾಗಿದೆ. "ಅಸಹನೀಯ, ವಿವರಿಸಲಾಗದ ನೋವು ಮತ್ತು ದುಃಖದಲ್ಲಿರುವುದಾಗಿ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ವಿಜಯ್, ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ವರದಿ ಕೇಳಿದ ಕೇಂದ್ರ

ಕರೂರಿನಲ್ಲಿ ಕಾಲ್ತುಳಿತದ ನಂತರ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರೊಂದಿಗೆ ಮಾತನಾಡಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವಾಲಯವು ಘಟನೆಯ ಬಗ್ಗೆ ತಮಿಳುನಾಡು ಸರ್ಕಾರದಿಂದ ವರದಿಯನ್ನು ಕೋರಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡು ಸರ್ಕಾರಕ್ಕೆ ಕಳುಹಿಸಿರುವ ಪತ್ರದಲ್ಲಿ, ಕಾಲ್ತುಳಿತಕ್ಕೆ ಕಾರಣವಾದ ಪರಿಸ್ಥಿತಿ ಮತ್ತು ಬಲಿಪಶುಗಳ ರಕ್ಷಣೆ ಮತ್ತು ಚಿಕಿತ್ಸೆಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ವಿವರಗಳನ್ನು ನೀಡುವಂತೆ ಗೃಹ ಸಚಿವಾಲಯ ಕೇಳಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರ್ ಕಾಲ್ತುಳಿತ ಘಟನೆ ತನಿಖೆಗೆ ಆಯೋಗ; ಮೃತರ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ: ಸಿಎಂ ಸ್ಟಾಲಿನ್ ಘೋಷಣೆ

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 36ಕ್ಕೂ ಹೆಚ್ಚು ಮಂದಿ ಸಾವು; ಪ್ರಧಾನಿ ಸಂತಾಪ; ಸಿಎಂ ಸ್ಟಾಲಿನ್ ಹೇಳಿದ್ದು ಏನು?

Asia CUP 2025: ಭಾರತ-ಪಾಕ್ ಫೈನಲ್ ಪಂದ್ಯಕ್ಕೂ ಮುನ್ನ ಕಿಡಿ ಹೊತ್ತಿಸಿದ PCB ಮುಖ್ಯಸ್ಥ! ಏನಿದು?

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 8 ಮಕ್ಕಳು ಸೇರಿ 36 ಮಂದಿ ಸಾವು; 40 ಜನರಿಗೆ ಗಂಭೀರ ಗಾಯ!

Putin-Modi: ಮೋದಿ ನಾಯಕತ್ವದ ಭಾರತ ಅತ್ಯಧಿಕ ಆರ್ಥಿಕ ಬೆಳವಣಿಗೆ; ವ್ಲಾಡಿಮಿರ್ ಪುಟಿನ್ ಶ್ಲಾಘನೆ

SCROLL FOR NEXT