ಮುಂಬೈನಲ್ಲಿ ಭಾರಿ ಮಳೆ 
ದೇಶ

ಮುಂಬೈ: 100 MM ಮಳೆ, ಪ್ರವಾಹದಲ್ಲಿ ಮುಳುಗಿದ ದಕ್ಷಿಣ ಭಾಗ!

ಕಳೆದ 24 ಗಂಟೆಗಳಲ್ಲಿ ದಕ್ಷಿಣ ಮುಂಬೈನ ಕೆಲವು ಭಾಗಗಳಲ್ಲಿ 100 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ.

ಮುಂಬೈ: ದಿಢೀರ್ ಸುರಿದ ಭಾಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಖ್ಯಾತಿಯ ಮುಂಬೈ ತತ್ತರಿಸಿ ಹೋಗಿದ್ದು, ಇಡೀ ದಕ್ಷಿಣ ಮುಂಬೈ ಪ್ರವಾಹದಲ್ಲಿ ಮುಳುಗಿದೆ.

ಹೌದು.. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಮುಂಬೈನ ಕೆಲವು ಭಾಗಗಳಲ್ಲಿ 100 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ.

'ರೆಡ್ ಅಲರ್ಟ್' ಎಚ್ಚರಿಕೆಯ ನಡುವೆಯೂ, ಮುಂಬೈನಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಭಾನುವಾರ ಬೆಳಗಿನ ಜಾವದ ವೇಳೆಗೆ ತೀವ್ರತೆ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಮುಂಬೈನ ಕೆಲವು ಭಾಗಗಳಲ್ಲಿ 100 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ.

ಮಳೆಯಿಂದಾಗಿ ಕೇಂದ್ರ ರೈಲ್ವೆ ಮತ್ತು ಪಶ್ಚಿಮ ರೈಲ್ವೆಯ ಸ್ಥಳೀಯ ರೈಲು ಸೇವೆಗಳು ವಿಳಂಬಗೊಂಡವು. ಅಂತೆಯೇ ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (BEST) ಸಂಸ್ಥೆಯ ಬಸ್‌ಗಳು ಯಾವುದೇ ಮಾರ್ಗ ಬದಲಾವಣೆಯಿಲ್ಲದೆ ಎಂದಿನಂತೆ ಸೇವೆ ಮುಂದುವರಿಸಿದೆಯಾದರೂ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಸೇವೆಯಲ್ಲಿ ವ್ಯತ್ಯಯವಾಗಿದೆ.

ಇನ್ನು ಶನಿವಾರ ಮುಂಬೈ ಮಳೆ ಕುರಿತು ಮಾಹಿತಿ ನೀಡಿದ್ದ, ಹವಾಮಾನ ಇಲಾಖೆ "ಭಾರೀಯಿಂದ ಅತಿ ಹೆಚ್ಚಿನ" ಮಳೆಯಾಗುವ ಮುನ್ಸೂಚನೆ ನೀಡಿತ್ತು. ಭಾನುವಾರ ಬೆಳಿಗ್ಗೆ 8 ಗಂಟೆಗೆ ನೀಡಲಾದ IMD ಯ ಮುನ್ಸೂಚನೆಯನ್ನು ಉಲ್ಲೇಖಿಸಿ ನಾಗರಿಕ ಅಧಿಕಾರಿಯೊಬ್ಬರು, ನಗರ ಮತ್ತು ಉಪನಗರಗಳಲ್ಲಿ "ಮೋಡ ಕವಿದ ಆಕಾಶದೊಂದಿಗೆ ಭಾರೀ ಅಥವಾ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ" ಎಂದು ಹೇಳಿದರು.

ಮಧ್ಯರಾತ್ರಿ ಸುರಿದ ಭಾರಿ ಮಳೆ

ಮುಂಬೈನಲ್ಲಿ ಮಧ್ಯರಾತ್ರಿಯ ನಂತರ ಭಾರೀ ಮಳೆಯಾಯಿತು, ಬೆಳಗಿನ ಜಾವದ ವರೆಗೂ ಮುಂದುವರೆದ ಮಳೆ, ಬೆಳಗಿನ ಜಾವ ತೀವ್ರತೆ ಕಡಿಮೆಯಾಯಿತು. ನಗರದ ಹೆಚ್ಚಿನ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುತ್ತಿದೆ, ಮಧ್ಯಂತರ ಪ್ರಮಾಣದ ತೀವ್ರ ಮಳೆಯಾಗಿದೆ.

ಭಾನುವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ, ಕೊಲಾಬಾ ವೀಕ್ಷಣಾಲಯ (ದ್ವೀಪ ನಗರದ ಪ್ರತಿನಿಧಿ) 120.8 ಮಿಮೀ ಮಳೆಯನ್ನು ದಾಖಲಿಸಿದೆ, ಆದರೆ ಸಾಂತಾಕ್ರೂಜ್ ವೀಕ್ಷಣಾಲಯ (ಉಪನಗರಗಳನ್ನು ಪ್ರತಿನಿಧಿಸುತ್ತದೆ) 83.8 ಮಿಮೀ ಮಳೆಯನ್ನು ದಾಖಲಿಸಿದೆ.

ದಾಖಲೆಯ 100 ಎಂಎಂ ಮಳೆ

ದಕ್ಷಿಣ ಮುಂಬೈನಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದ್ದು, ಇಡೀ ರಾತ್ರಿ ಬರೊಬ್ಬರಿ 100 ಎಂಎಂ ಮಳೆಯಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ, ಜುಹು 88 ಮಿಮೀ, ಬಾಂದ್ರಾ 82.5 ಮಿಮೀ ಮತ್ತು ಮಹಾಲಕ್ಷ್ಮಿಯಲ್ಲಿ 28 ಮಿಮೀ ಮಳೆಯಾಗಿದೆ. ಐಎಂಡಿ ಭಾನುವಾರ ನೆರೆಯ ರಾಯಗಢ, ಥಾಣೆ ಮತ್ತು ಪಾಲ್ಘರ್ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ