ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಅಣ್ಣಾಮಲೈ 
ದೇಶ

Karur Stampede: ವಿಜಯ್ ತಪ್ಪಲ್ಲ, ಡಿಎಂಕೆ ಸರ್ಕಾರವನ್ನು ದೂಷಿಸಿದ ಬಿಜೆಪಿ, ಮೃತರ ಕುಟುಂಬಗಳಿಗೆ ರೂ.1 ಲಕ್ಷ ಪರಿಹಾರ ಘೋಷಣೆ!

ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.

ಕರೂರು: ತಮಿಳುನಾಡಿನ ಕರೂರಿನಲ್ಲಿ ನಿನ್ನೆ ಸಂಭವಿಸಿದ ಕಾಲ್ತುಳಿತ ಘಟನೆಗೆ 'ವಿಜಯ್ ಅವರದ್ದು ತಪ್ಪೇನಿಲ್ಲಾ' ಎಂದಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರವನ್ನು ದೂಷಿಸಿದೆ.

ಭಾನುವಾರ ಕರೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.

ಕಾಲ್ತುಳಿತ ದುರಂತಕ್ಕೆ ವಿಜಯ್ ಅವರದ್ದು ತಪ್ಪೇನಿಲ್ಲಾ, ಹೆಚ್ಚಿನ ಜನ ಸೇರುವುದನ್ನು ನಿರೀಕ್ಷಿಸಿ ರಾಜ್ಯ ಪೊಲೀಸರು ಮತ್ತು ಗುಪ್ತಚರ ಇಲಾಖೆ ಸಮರ್ಪಕವಾಗಿ ಪೋಲೀಸರನ್ನು ನಿಯೋಜಿಸಬೇಕಾಗಿತ್ತು. ಪೊಲೀಸರು ಯಾಕೆ 7 ಗಂಟೆ ಅನುಮತಿ ನೀಡಬೇಕಾಯಿತು? ಎರಡು ಗಂಟೆ ನೀಡಿದ್ದರೆ ಸಾಕಾಗಿತ್ತು ಎಂದು ಟೀಕಾ ಪ್ರಹಾರ ನಡೆಸಿದರು.

ತಮಿಳುನಾಡು ಬಿಜೆಪಿಯಾಗಿ ದುರಂತ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ. ಮಾಜಿ ನ್ಯಾಯಾಧೀಶರ ನೇತೃತ್ವದ ತನಿಖಾ ಆಯೋಗದಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಬಯಸಿದ್ದಾರೆ. ಇದರಿಂದ ಹೇಗೆ ನ್ಯಾಯಯುತ ತನಿಖೆ ನಡೆಯಲಿದೆ ಎಂದು ಅಣ್ಣಾಮಲೈ ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Wangchuk’s wife: ಸೇನೆಗೆ ಶೆಲ್ಟರ್ ನಿರ್ಮಿಸಿ, ಚೀನಾ ವಸ್ತುಗಳನ್ನು ಬಹಿಷ್ಕರಿಸಿದ ಆತ ಹೇಗೆ ದೇಶ ವಿರೋಧಿ ಆಗ್ತಾನೆ? ವಾಂಗ್‌ಚುಕ್ ಪತ್ನಿ

Asia Cup 2025: ಭಾರತದ ಬೌಲರ್ ಗಳ ವೇಗಕ್ಕೆ ತತ್ತರಿಸಿದ ಪಾಕಿಸ್ತಾನ, 146 ರನ್ ಗಳಿಗೆ ಆಲೌಟ್!

Asia cup 2025: ಹ್ಯಾರಿಸ್ ರೌಫ್ ಗೆ ತಿರುಗೇಟು ನೀಡಿದ ಬೂಮ್ರಾ! Video ವೈರಲ್

ಲಡಾಖ್‌ಗೆ ಧ್ವನಿ ನೀಡಿ, ಬೇಡಿಕೆಯಂತೆ 6ನೇ ಶೆಡ್ಯೂಲ್ಗೆ ಸೇರಿಸಿ: ಹಿಂಸಾಚಾರಕ್ಕೆ BJP ಮತ್ತು RSS ದೂಷಿಸಿದ ರಾಹುಲ್!

Bollywood ನಟಿಯ ಪುತ್ರ, ಬಾಲನಟ ವೀರ್ ಶರ್ಮಾ ಹಾಗೂ ಸಹೋದರ ಅಗ್ನಿ ಅವಘಡದಲ್ಲಿ ಸಾವು!

SCROLL FOR NEXT