ಬಿಸಿ ಹಾಲಿನ ಪಾತ್ರೆಗೆ ಬಿದ್ದ ಮಗು 
ದೇಶ

Horrific: ಬಿಸಿ ಹಾಲಿನ ಪಾತ್ರೆಗೆ ಬಿದ್ದು ಪುಟ್ಟ ಮಗು ಸಾವು, Video Viral

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಬುಕ್ಕರಾಯಸಮುದ್ರಂ ಗ್ರಾಮದ ಅಂಬೇಡ್ಕರ್ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಅನಂತಪುರಂ: ಶಾಲೆಯ ಅಡುಗೆ ಮನೆಯಲ್ಲಿ ಇರಿಸಲಾಗಿದ್ದ ಕುದಿಯುತ್ತಿದ್ದ ಹಾಲಿನ ಪಾತ್ರೆಯಲ್ಲಿ ಆಕಸ್ಮಿಕವಾಗಿ ಬಿದ್ದು ಒಂದೂವರೆ ವರ್ಷದ ಬಾಲಕಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿರುವ ಭೀಕರ ಘಟನೆ ಆಂಧ್ರ ಪ್ರದೇಶದಲ್ಲಿ ವರದಿಯಾಗಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಬುಕ್ಕರಾಯಸಮುದ್ರಂ ಗ್ರಾಮದ ಅಂಬೇಡ್ಕರ್ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ದುರ್ಘಟನೆಯಲ್ಲಿ 17 ತಿಂಗಳ ಅಕ್ಷಿತಾ ಎಂಬ ಪುಟ್ಟ ಮಗು ಸಾವನ್ನಪ್ಪಿದೆ.

ಮೂಲಗಳ ಪ್ರಕಾರ ಶಾಲೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ತನ್ನ ತಾಯಿಯೊಂದಿಗೆ ಮಗು ಇತ್ತು. ಆದರೆ ತಾಯಿಯ ಕಣ್ತಪ್ಪಿಸಿ ಶಾಲೆಯ ಅಡುಗೆಮನೆಗೆ ಹೋಗಿ ಅಲ್ಲಿ ಬಿಸಿ ಹಾಲಿನ ಪಾತ್ರೆಗೆ ಬಿದ್ದಿದೆ ಎನ್ನಲಾಗಿದೆ.

ವಿದ್ಯಾರ್ಥಿಗಳಿಗೆ ವಿತರಿಸಲು ಹಾಲು ಕಾಯಿಸಿ ಇಡಲಾಗಿತ್ತು. ಈ ವೇಳೆ ಅಕ್ಷಿತಾ ಮತ್ತು ಆಕೆಯ ತಾಯಿ ಕೃಷ್ಣವೇಣಿ ಅಡುಗೆಮನೆಯಿಂದ ಸ್ವಲ್ಪ ಸಮಯ ಹೊರಗೆ ಹೋಗಿ ಹಿಂತಿರುಗಿದರು. ಮಗು ತನ್ನ ತಾಯಿ ಇಲ್ಲದ ಹೊತ್ತಿನಲ್ಲೇ ಕೋಣೆಗೆ ಮತ್ತೆ ಪ್ರವೇಶಿಸಿದೆ. ಅಲ್ಲಿದ್ದ ಬೆಕ್ಕನ್ನು ಹಿಂಬಾಲಿಸುತ್ತಾ ಬಂದ ಮಗು ನೋಡ ನೋಡುತ್ತಲೇ ಆಯತಪ್ಪಿ ಬಿಸಿ ಹಾಲಿನ ಪಾತ್ರೆಗೆ ಬಿದ್ದಿದೆ.

ಈ ವೇಳೆ ಹಾಲಿನ ಬಿಸಿಗೆ ಮಗುವಿನ ದೇಹದಾದ್ಯಂತ ತೀವ್ರ ಸುಟ್ಟಗಾಯಗಳಾಗಿವೆ. ಮಗು ಅಕ್ಷಿತಾಳ ಕಿರುಚಾಟ ಕೇಳಿದ ಆಕೆಯ ತಾಯಿ ಕೃಷ್ಣವೇಣಿ ಅಲ್ಲಿಗೆ ದೌಡಾಯಿಸಿ ಮಗುವನ್ನು ಹಾಲಿನ ಪಾತ್ರೆಯಿಂದ ಹೊರತೆಗೆದಿದ್ದಾರೆ. ಅಲ್ಲದೆ ತೀವ್ರಗಾಯಗಳಿಂದ ಕೂಡಿದ್ದ ಮಗುವನ್ನು ಅನಂತಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.

ವೈದ್ಯರ ಶಿಫಾರಸಿನ ಮೇರೆಗೆ, ಅಕ್ಷಿತಾಳನ್ನು ಉತ್ತಮ ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆಯ ಸಮಯದಲ್ಲಿ ಮಗು ಸಾವನ್ನಪ್ಪಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT