ಲಡಾಖ್‌ನ ಲೇಹ್‌ನಲ್ಲಿ ಸೆಪ್ಟೆಂಬರ್ 29, 2025 ರಂದು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಲೇಹ್ ಅಪೆಕ್ಸ್ ಬಾಡಿ (LAB) ಸಹ-ಅಧ್ಯಕ್ಷ ಚೆರಿಂಗ್ ಡೋರ್ಜಯ್ (ಮಧ್ಯದಲ್ಲಿ) ಮತ್ತು ಇತರ ಸದಸ್ಯರು ಮಾತನಾಡಿದರು. PTI Photo
ದೇಶ

ಸಹಜ ಸ್ಥಿತಿಗೆ ಮರಳುವವರೆಗೆ ಮಾತುಕತೆ ಇಲ್ಲ; ವಾಂಗ್‌ಚುಕ್ ಬೇಷರತ್ ಬಿಡುಗಡೆಗೆ ಕೆಡಿಎ ಆಗ್ರಹ

"ಲಡಾಖ್‌ನಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಶಾಂತಿ ಪುನಃಸ್ಥಾಪಿಸುವವರೆಗೆ ನಾವು ಯಾವುದೇ ಮಾತುಕತೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಸರ್ವಾನುಮತದಿಂದ ನಿರ್ಧರಿಸಿದ್ದೇವೆ".

ಲೇಹ್: ಲಡಾಖ್‌ನಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ಗೃಹ ಸಚಿವಾಲಯದ ಉನ್ನತ ಮಟ್ಟದ ಸಮಿತಿಯೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಲೇಹ್ ಅಪೆಕ್ಸ್ ಸಂಸ್ಥೆ ಸೋಮವಾರ ಘೋಷಿಸಿದೆ.

"ಲಡಾಖ್‌ನಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಶಾಂತಿ ಪುನಃಸ್ಥಾಪಿಸುವವರೆಗೆ ನಾವು ಯಾವುದೇ ಮಾತುಕತೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಸರ್ವಾನುಮತದಿಂದ ನಿರ್ಧರಿಸಿದ್ದೇವೆ" ಎಂದು ಲೇಹ್ ಅಪೆಕ್ಸ್ ಸಂಸ್ಥೆಯ ಅಧ್ಯಕ್ಷ ಥುಪ್ಸ್ತಾನ್ ಚೆವಾಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

"ಅಲ್ಲಿರುವ ಭಯ, ದುಃಖ ಮತ್ತು ಕೋಪದ ವಾತಾವರಣವನ್ನು ಪರಿಹರಿಸಲು ಕ್ರಮ ತೆಗೆದುಕೊಳ್ಳುವಂತೆ ನಾವು ಗೃಹ ಸಚಿವಾಲಯ, ಲಡಾಖ್ ಆಡಳಿತವನ್ನು ಒತ್ತಾಯಿಸುತ್ತೇವೆ" ಎಂದು ಅವರು ಹೇಳಿದರು.

ಹಿಂಸಾಚಾರದ ನಂತರ ಬಂಧಿಸಲ್ಪಟ್ಟ ಹೋರಾಟಗಾರ ಸೋನಮ್ ವಾಂಗ್‌ಚುಕ್ ಮತ್ತು ಇತರರನ್ನು ತಕ್ಷಣ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕೆಂದು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್(ಕೆಡಿಎ) ಸೋಮವಾರ ಒತ್ತಾಯಿಸಿದೆ.

ಲಡಾಖ್ ರಾಜ್ಯತ್ವ ಮತ್ತು ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿರುವುದು ಹಿಮಾಲಯ ಪ್ರದೇಶದ ಜನರನ್ನು "ದೂರ ತಳ್ಳಿದಂತೆ" ಎಂದು ಕೆಡಿಎ ಹೇಳಿದೆ.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೆಡಿಎ ಸದಸ್ಯ ಸಜ್ಜದ್ ಕಾರ್ಗಿಲಿ, ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿ, ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿರುವ ವಾಂಗ್‌ಚುಕ್ ಮತ್ತು ಲೇಹ್‌ನಲ್ಲಿ ಬಂಧಿಸಲ್ಪಟ್ಟ ಇತರ ಯುವ ನಾಯಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜಧಾನಿ 'ಚಂಡೀಗಢ' ಕಸಿದುಕೊಳ್ಳಲು ಕೇಂದ್ರದ ಪಿತೂರಿ: ಪಂಜಾಬ್ ನಾಯಕರ ಕಳವಳ, MHA ಕೊಟ್ಟ ಸ್ಪಷ್ಟನೆ ಏನು..?

ರಾಜಧಾನಿ 'ಚಂಡೀಗಢ' ಕಸಿದುಕೊಳ್ಳಲು ಪಿತೂರಿ: ಕೇಂದ್ರದ ವಿರುದ್ಧ ಸಿಡಿದೆದ್ದ ಪಂಜಾಬ್! ಗಂಭೀರ ಪರಿಣಾಮದ ಎಚ್ಚರಿಕೆ

2nd Test: ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 489ರನ್ ಗಳಿಗೆ ಆಲೌಟ್, ಕುಲದೀಪ್ ಯಾದವ್ ಗೆ 4 ವಿಕೆಟ್!

ಗಾಜಾದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ: ಇಸ್ರೇಲ್​ ವೈಮಾನಿಕ ದಾಳಿಗೆ 21 ಜನರು ಸಾವು!

ರಾಜ್ಯದ ಜನತೆ ದಿನಬೆಳಗಾದರೆ ನೋಡಿ ಬೇಸತ್ತು ಹೋಗಿದ್ದಾರೆ, ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರು ಎಂದು ಸ್ಪಷ್ಟಪಡಿಸಲಿ: ಆರ್ ಅಶೋಕ್

SCROLL FOR NEXT