ಭಾರತ ತಂಡ ಹಾಗೂ ಪ್ರಧಾನಿ ಮೋದಿ 
ದೇಶ

ಆಟದ ಮೈದಾನದಲ್ಲೂ 'operation sindoor': ಪಾಕ್ ಕಾಲೆಳೆದ ಪ್ರಧಾನಿ ಮೋದಿ, ಭಾರತ ತಂಡಕ್ಕೆ ಅಭಿನಂದನೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು.

ನವದೆಹಲಿ: ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನದ ಕಾಲೆಳೆದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಮೋದಿಯವರು, ಭಾರತದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, ಇದೇ ವೇಳೆ ಪಾಕಿಸ್ತಾನದ ಕಾಲೆಳೆದಿದ್ದಾರೆ.

ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ. ಫಲಿತಾಂಶ ಒಂದೇ - ಭಾರತ ಗೆದ್ದಿದೆ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು. ಈ ದಾಳಿಯ ವೇಳೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳನ್ನ ಭಾರತ ವಾಯು ಸೇನ್ ಧ್ವಂಸಗೊಳಿಸಿತ್ತು.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೈಬಾ (LeT) ನಂತಹ ಉಗ್ರ ಸಂಘಟನೆಗಳ 9 ತರಬೇತಿ ಶಿಬಿರಗಳನ್ನು ನಾಶಪಡಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ನಡೆಸಿತ್ತು. ಇದಕ್ಖೂ ಪ್ರತಿಕ್ರಿಯೆ ನೀಡಿದ್ದ ಭಾರತೀಯ ಸೇನೆ ಹಲವು ಪಾಕಿಸ್ತಾನದ ವಾಯುನೆಲೆಗಳನ್ನ ಧ್ವಂಸ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: ಪಾಕ್ ಸಚಿವನಿಂದ ಟ್ರೋಫ್ ಸ್ವೀಕರಿಸಲು ಭಾರತ ನಕಾರ; ತಡರಾತ್ರಿ ದುಬೈನಲ್ಲಿ ಹೈಡ್ರಾಮಾ, ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ..!

Asia Cup 2025: ಸೋಲು ಬೆನ್ನಲ್ಲೇ ಟ್ರೋಫಿಯೊಂದಿಗೆ ಮೈದಾನ ತೊರೆದ ಪಾಕ್ ಸಚಿವ; ICCಗೆ ದೂರು ನೀಡಲು BCCI ಮುಂದು..!

ಏಷ್ಯಾ ಕಪ್ 2025 ಫೈನಲ್: ಸೋಲಿನ ಹತಾಶೆ, ರನ್ನರ್-ಅಪ್ ಚೆಕ್ ಬಿಸಾಡಿ ಹೋದ ಪಾಕ್ ನಾಯಕ; ವಿಡಿಯೋ

Asia Cup 2025: champion ತಂಡಕ್ಕೆ ಟ್ರೋಫಿ ಕೊಡದಿದ್ದನ್ನು ಎಂದೂ ನೋಡಿಲ್ಲ, ನನ್ನ ತಂಡವೇ ನನಗೆ ಟ್ರೋಫಿ; ಸೂರ್ಯಕುಮಾರ್ ಯಾದವ್

ಪಾಕ್ ಮಣಿಸಿ ಏಷ್ಯಾಕಪ್ ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ BCCI ಭರ್ಜರಿ ಗಿಫ್ಟ್

SCROLL FOR NEXT