ಭಾರತ ತಂಡ ಹಾಗೂ ಪ್ರಧಾನಿ ಮೋದಿ 
ದೇಶ

ಆಟದ ಮೈದಾನದಲ್ಲೂ Operation Sindoor: ಪಾಕ್ ಕಾಲೆಳೆದ ಪ್ರಧಾನಿ ಮೋದಿ; ಭಾರತ ತಂಡಕ್ಕೆ ಅಭಿನಂದನೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು.

ನವದೆಹಲಿ: ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನದ ಕಾಲೆಳೆದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಮೋದಿಯವರು, ಭಾರತದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, ಇದೇ ವೇಳೆ ಪಾಕಿಸ್ತಾನದ ಕಾಲೆಳೆದಿದ್ದಾರೆ.

ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ. ಫಲಿತಾಂಶ ಒಂದೇ - ಭಾರತ ಗೆದ್ದಿದೆ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು. ಈ ದಾಳಿಯ ವೇಳೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳನ್ನ ಭಾರತ ವಾಯು ಸೇನ್ ಧ್ವಂಸಗೊಳಿಸಿತ್ತು.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೈಬಾ (LeT) ನಂತಹ ಉಗ್ರ ಸಂಘಟನೆಗಳ 9 ತರಬೇತಿ ಶಿಬಿರಗಳನ್ನು ನಾಶಪಡಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ನಡೆಸಿತ್ತು. ಇದಕ್ಖೂ ಪ್ರತಿಕ್ರಿಯೆ ನೀಡಿದ್ದ ಭಾರತೀಯ ಸೇನೆ ಹಲವು ಪಾಕಿಸ್ತಾನದ ವಾಯುನೆಲೆಗಳನ್ನ ಧ್ವಂಸ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT