ಶಹಪುರ್ ಕಾಲೋನಿ ತೆರವು ಕಾರ್ಯಾಚರಣೆ 
ದೇಶ

ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರ!

ಚಂಡೀಗಢ ಆಡಳಿತವು ಇಂದು ತನ್ನ ವ್ಯಾಪ್ತಿಯಲ್ಲಿ ಉಳಿದಿದ್ದ ಕೊನೆಯ ಕೊಳೆಗೇರಿ ಶಹಪುರ್ ಕಾಲೋನಿಯನ್ನು ತೆರವುಗೊಳಿಸಿದ್ದು, ಇದರೊಂದಿಗೆ ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರವಾಗಿದೆ.

ಚಂಡೀಗಢ: ಕೇಂದ್ರಾಡಳಿತ ಪ್ರದೇಶದ ಆಡಳಿತವು ಉಳಿದಿದ್ದ ಏಕೈಕ ಕೊಳೆಗೇರಿಯನ್ನು ಮಂಗಳವಾರ ತೆರವುಗೊಳಿಸುವ ಮೂಲಕ ಚಂಡೀಗಢ ದೇಶದ ಮೊದಲ ಕೊಳೆಗೇರಿ ಮುಕ್ತ ನಗರ ಎಂಬ ಗೌರವಕ್ಕೆ ಪಾತ್ರವಾಗಿದೆ.

ಚಂಡೀಗಢ ಆಡಳಿತವು ಇಂದು ತನ್ನ ವ್ಯಾಪ್ತಿಯಲ್ಲಿ ಉಳಿದಿದ್ದ ಕೊನೆಯ ಕೊಳೆಗೇರಿ ಶಹಪುರ್ ಕಾಲೋನಿಯನ್ನು ತೆರವುಗೊಳಿಸಿದ್ದು, ಇದರೊಂದಿಗೆ ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರವಾಗಿದೆ.

ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಯಿತು ಮತ್ತು ಅದು ದಿನವಿಡೀ ಮುಂದುವರೆಯಿತು ಎಂದು ಎಸ್ಟೇಟ್ ಕಚೇರಿಯ ಜಾರಿ ವಿಭಾಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.

"ಹೆಚ್ಚಿನ ಗುಡಿಸಲುಗಳನ್ನು ತೆರವುಗೊಳಿಸಲಾಗಿದೆ ಮತ್ತು ಹೊಸ ಅತಿಕ್ರಮಣವನ್ನು ತಡೆಯಲು ತಕ್ಷಣವೇ ಬೇಲಿ ಹಾಕಲಾಗುವುದು" ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಭೂಮಿಯಿಂದ ಎಲ್ಲಾ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ ಮತ್ತು ದೊಡ್ಡ ಪ್ರಮಾಣದ ಪುನರ್ವಸತಿ ಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಕೊಳೆಗೇರಿ ನಿರ್ಮೂಲನಾ ಉಪಕ್ರಮದ ಅಂತಿಮ ಹಂತವನ್ನು ಪೂರ್ಣಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಚಂಡೀಗಢ ಆಡಳಿತವು ಸೆಕ್ಟರ್ 38 ರ ಶಹಪುರ್ ಕಾಲೋನಿಯಲ್ಲಿರುವ ಕೊಳೆಗೇರಿಯನ್ನು ತೆರವುಗೊಳಿಸಿತು. ಇದು 4 ರಿಂದ 4.5 ಎಕರೆಗಳಲ್ಲಿ ಹರಡಿಕೊಂಡಿತ್ತು ಮತ್ತು ಸುಮಾರು 250 ಕೋಟಿ ರೂ. ಮೌಲ್ಯದ್ದಾಗಿದೆ.

ಈ ಕೊಳಗೇರಿಯಲ್ಲಿ ಸುಮಾರು 300 ಗುಡಿಸಲುಗಳು ಮತ್ತು ಮನೆಗಳು ಇದ್ದವು. ಸುಮಾರು 1,000 ನಿವಾಸಿಗಳು ಇಲ್ಲಿ ವಾಸಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ ರೂ. 8,500 ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು: ವಾರಸುದಾರರಿಗೆ ಪರಿಹಾರ ವಿತರಣೆ- ಸಿಎಂ ಸಿದ್ದರಾಮಯ್ಯ

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ: ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ, BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT