ಹಪುರ್ ಕಾಲೋನಿ ತೆರವು ಕಾರ್ಯಾಚರಣೆ 
ದೇಶ

ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರ!

ಸರ್ಕಾರಿ ಭೂಮಿಯಿಂದ ಎಲ್ಲಾ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ ಮತ್ತು ದೊಡ್ಡ ಪ್ರಮಾಣದ ಪುನರ್ವಸತಿ ಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.

ಚಂಡೀಗಢ: ಕೇಂದ್ರಾಡಳಿತ ಪ್ರದೇಶದ ಆಡಳಿತವು ಉಳಿದಿದ್ದ ಏಕೈಕ ಕೊಳೆಗೇರಿಯನ್ನು ಮಂಗಳವಾರ ತೆರವುಗೊಳಿಸುವ ಮೂಲಕ ಚಂಡೀಗಢ ದೇಶದ ಮೊದಲ ಕೊಳೆಗೇರಿ ಮುಕ್ತ ನಗರ ಎಂಬ ಗೌರವಕ್ಕೆ ಪಾತ್ರವಾಗಿದೆ.

ಚಂಡೀಗಢ ಆಡಳಿತವು ಇಂದು ತನ್ನ ವ್ಯಾಪ್ತಿಯಲ್ಲಿ ಉಳಿದಿದ್ದ ಕೊನೆಯ ಕೊಳೆಗೇರಿ ಶಹಪುರ್ ಕಾಲೋನಿಯನ್ನು ತೆರವುಗೊಳಿಸಿದ್ದು, ಇದರೊಂದಿಗೆ ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರವಾಗಿದೆ.

ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಯಿತು ಮತ್ತು ಅದು ದಿನವಿಡೀ ಮುಂದುವರೆಯಿತು ಎಂದು ಎಸ್ಟೇಟ್ ಕಚೇರಿಯ ಜಾರಿ ವಿಭಾಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.

"ಹೆಚ್ಚಿನ ಗುಡಿಸಲುಗಳನ್ನು ತೆರವುಗೊಳಿಸಲಾಗಿದೆ ಮತ್ತು ಹೊಸ ಅತಿಕ್ರಮಣವನ್ನು ತಡೆಯಲು ತಕ್ಷಣವೇ ಬೇಲಿ ಹಾಕಲಾಗುವುದು" ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಭೂಮಿಯಿಂದ ಎಲ್ಲಾ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ ಮತ್ತು ದೊಡ್ಡ ಪ್ರಮಾಣದ ಪುನರ್ವಸತಿ ಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಕೊಳೆಗೇರಿ ನಿರ್ಮೂಲನಾ ಉಪಕ್ರಮದ ಅಂತಿಮ ಹಂತವನ್ನು ಪೂರ್ಣಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಚಂಡೀಗಢ ಆಡಳಿತವು ಸೆಕ್ಟರ್ 38 ರ ಶಹಪುರ್ ಕಾಲೋನಿಯಲ್ಲಿರುವ ಕೊಳೆಗೇರಿಯನ್ನು ತೆರವುಗೊಳಿಸಿತು. ಇದು 4 ರಿಂದ 4.5 ಎಕರೆಗಳಲ್ಲಿ ಹರಡಿಕೊಂಡಿತ್ತು ಮತ್ತು ಸುಮಾರು 250 ಕೋಟಿ ರೂ. ಮೌಲ್ಯದ್ದಾಗಿದೆ.

ಈ ಕೊಳಗೇರಿಯಲ್ಲಿ ಸುಮಾರು 300 ಗುಡಿಸಲುಗಳು ಮತ್ತು ಮನೆಗಳು ಇದ್ದವು. ಸುಮಾರು 1,000 ನಿವಾಸಿಗಳು ಇಲ್ಲಿ ವಾಸಿಸುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT