ಸಾಂದರ್ಭಿಕ ಚಿತ್ರ 
ದೇಶ

Elephant stolen: ಜಾರ್ಖಂಡ್‌ನಿಂದ 'ಕಳುವಾಗಿದ್ದ ಹೆಣ್ಣಾನೆ' ಬಿಹಾರದಲ್ಲಿ ಪತ್ತೆ! ಸಿಕ್ಕಿದ್ದು ಹೇಗೆ ಗೊತ್ತಾ?

ಪಲಾಮು ಜಿಲ್ಲೆಯ ಚುಕುರ್ ಪ್ರದೇಶದಲ್ಲಿ ಹೆಣ್ಣಾನೆ ಜಯಮತಿ ಕಳ್ಳತನದ ಬಗ್ಗೆ ಉತ್ತರ ಪ್ರದೇಶದ ಮಿರ್ಜಾಪುರದ ನಿವಾಸಿ ನರೇಂದ್ರ ಕುಮಾರ್ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್‌ನ ಪೊಲೀಸ್ ದೂರು ನೀಡಿದ್ದರು.

ಪಲಾಮು: ಜಾರ್ಖಂಡ್‌ನ ಪಲಾಮು ಜಿಲ್ಲೆಯಿಂದ ಕದ್ದು ರೂ. 27 ಲಕ್ಷಕ್ಕೆ ಮಾರಾಟವಾಗಿದ್ದ ಹೆಣ್ಣಾನೆಯನ್ನು ಬಿಹಾರದ ಚಾಪ್ರಾ ಜಿಲ್ಲೆಯಲ್ಲಿ ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪಲಾಮು ಜಿಲ್ಲೆಯ ಚುಕುರ್ ಪ್ರದೇಶದಲ್ಲಿ ಹೆಣ್ಣಾನೆ ಜಯಮತಿ ಕಳ್ಳತನದ ಬಗ್ಗೆ ಉತ್ತರ ಪ್ರದೇಶದ ಮಿರ್ಜಾಪುರದ ನಿವಾಸಿ ನರೇಂದ್ರ ಕುಮಾರ್ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್‌ನ ಪೊಲೀಸ್ ದೂರು ನೀಡಿದ್ದರು.

ಶುಕ್ಲಾ ಅವರು ರಾಂಚಿಯಿಂದ ರೂ. 40 ಲಕ್ಷಕ್ಕೆ ಆ ಆನೆಯನ್ನು ಖರೀದಿಸಿದ್ದರು. ಈ ಸಂಬಂಧ ಸದರ್ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಆದರೆ ಸೋಮವಾರ ಬಿಹಾರದ ಛಪ್ರಾದ ಪಹಾದ್‌ಪುರದಲ್ಲಿ ಕಾಣೆಯಾಗಿದ್ದ ಆನೆ ಬಗ್ಗೆ ಸುಳಿವು ಸಿಕ್ಕಿತು, ತದನಂತರ ಸಹಾಯಕ್ಕಾಗಿ ಬಿಹಾರ ಪೊಲೀಸರಿಗೆ ಮನವಿ ಮಾಡಿದ್ದೇವು ಎಂದು ಮೇದಿನಿನಗರದ ಎಸ್‌ಡಿಪಿಒ ಮಣಿಭೂಷಣ ಪ್ರಸಾದ್ ತಿಳಿಸಿದ್ದಾರೆ.

ತನಿಖೆ ವೇಳೆಯಲ್ಲಿ ಆನೆಯನ್ನು ಚಾಪ್ರಾದಿಂದ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಯಾರನ್ನೂ ಬಂಧಿಸಿಲ್ಲ. ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ‘KD’ ಸಿನಿಮಾದ ಅಶ್ಲೀಲ ಹಾಡು; ‘ಸರ್ಸೆ ನಿನ್ನ ಸೆರಗ ಸರ್ಸೆ’ ಬ್ಯಾನ್!

ಉಪ ಚುನಾವಣೆ 2026: ಸಿದ್ದರಾಮಯ್ಯ ಸಂಧಾನ ಯಶಸ್ವಿ, ಬಾಗಲಕೋಟೆ ಕಾಂಗ್ರೆಸ್ ಕದನಕ್ಕೆ ಕೊನೆಗೂ ತೆರೆ!

'ಮಾರ್ಚ್ 25ರೊಳಗೆ ಬಾಕಿ ಇರುವ ಎಲ್ಲಾ ಉತ್ತರಗಳ ಸಲ್ಲಿಸಿ': ಸರ್ಕಾರಕ್ಕೆ ಪರಿಷತ್ ಸಭಾಪತಿ ಹೊರಟ್ಟಿ ಗಡುವು!

'ನನ್ನ ಘನತೆಗೆ ಧಕ್ಕೆ, ಪ್ರಚಾರಕ್ಕೆ ಬರಲ್ಲ..' 'ನಿರ್ದೇಶಕ ಪ್ರೇಮ್ ಗೆ ಮೊದಲೇ ಎಚ್ಚರಿಕೆ ನೀಡಿದ್ದೆ..': ಬಾಲಿವುಡ್ ನಟಿ Nora Fatehi ಶಾಕಿಂಗ್ ಹೇಳಿಕೆ

SCROLL FOR NEXT