ಸಾಂದರ್ಭಿಕ ಚಿತ್ರ 
ದೇಶ

Elephant stolen: ಜಾರ್ಖಂಡ್‌ನಿಂದ 'ಕಳುವಾಗಿದ್ದ ಹೆಣ್ಣಾನೆ' ಬಿಹಾರದಲ್ಲಿ ಪತ್ತೆ! ಸಿಕ್ಕಿದ್ದು ಹೇಗೆ ಗೊತ್ತಾ?

ಪಲಾಮು ಜಿಲ್ಲೆಯ ಚುಕುರ್ ಪ್ರದೇಶದಲ್ಲಿ ಹೆಣ್ಣಾನೆ ಜಯಮತಿ ಕಳ್ಳತನದ ಬಗ್ಗೆ ಉತ್ತರ ಪ್ರದೇಶದ ಮಿರ್ಜಾಪುರದ ನಿವಾಸಿ ನರೇಂದ್ರ ಕುಮಾರ್ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್‌ನ ಪೊಲೀಸ್ ದೂರು ನೀಡಿದ್ದರು.

ಪಲಾಮು: ಜಾರ್ಖಂಡ್‌ನ ಪಲಾಮು ಜಿಲ್ಲೆಯಿಂದ ಕದ್ದು ರೂ. 27 ಲಕ್ಷಕ್ಕೆ ಮಾರಾಟವಾಗಿದ್ದ ಹೆಣ್ಣಾನೆಯನ್ನು ಬಿಹಾರದ ಚಾಪ್ರಾ ಜಿಲ್ಲೆಯಲ್ಲಿ ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪಲಾಮು ಜಿಲ್ಲೆಯ ಚುಕುರ್ ಪ್ರದೇಶದಲ್ಲಿ ಹೆಣ್ಣಾನೆ ಜಯಮತಿ ಕಳ್ಳತನದ ಬಗ್ಗೆ ಉತ್ತರ ಪ್ರದೇಶದ ಮಿರ್ಜಾಪುರದ ನಿವಾಸಿ ನರೇಂದ್ರ ಕುಮಾರ್ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್‌ನ ಪೊಲೀಸ್ ದೂರು ನೀಡಿದ್ದರು.

ಶುಕ್ಲಾ ಅವರು ರಾಂಚಿಯಿಂದ ರೂ. 40 ಲಕ್ಷಕ್ಕೆ ಆ ಆನೆಯನ್ನು ಖರೀದಿಸಿದ್ದರು. ಈ ಸಂಬಂಧ ಸದರ್ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಆದರೆ ಸೋಮವಾರ ಬಿಹಾರದ ಛಪ್ರಾದ ಪಹಾದ್‌ಪುರದಲ್ಲಿ ಕಾಣೆಯಾಗಿದ್ದ ಆನೆ ಬಗ್ಗೆ ಸುಳಿವು ಸಿಕ್ಕಿತು, ತದನಂತರ ಸಹಾಯಕ್ಕಾಗಿ ಬಿಹಾರ ಪೊಲೀಸರಿಗೆ ಮನವಿ ಮಾಡಿದ್ದೇವು ಎಂದು ಮೇದಿನಿನಗರದ ಎಸ್‌ಡಿಪಿಒ ಮಣಿಭೂಷಣ ಪ್ರಸಾದ್ ತಿಳಿಸಿದ್ದಾರೆ.

ತನಿಖೆ ವೇಳೆಯಲ್ಲಿ ಆನೆಯನ್ನು ಚಾಪ್ರಾದಿಂದ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಯಾರನ್ನೂ ಬಂಧಿಸಿಲ್ಲ. ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

ಬೆಂಗಳೂರಿನ ಐದು ಹೊಸ ಪಾಲಿಕೆಗಳಿಗೆ 368 ವಾರ್ಡ್ ರಚನೆ: ಪಶ್ಚಿಮ ಪಾಲಿಕೆಗೆ ಗರಿಷ್ಠ 111 ವಾರ್ಡ್

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ

ಟ್ರೋಫಿ 'ಕಳ್ಳ' ಮೊಹ್ಸಿನ್ ನಖ್ವಿಗೆ ಸಂಕಷ್ಟ? ಏಷ್ಯಾ ಕಪ್ ಟ್ರೋಫಿ ಮರಳಿ ಪಡೆಯಲು ಅಖಾಡಕ್ಕೀಳಿದ BCCI; ಷರತ್ತು ಹಾಕಿದ ನಖ್ವಿ!

ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರ!

SCROLL FOR NEXT