ಪ್ರಾತಿನಿಧಿಕ ಚಿತ್ರ 
ದೇಶ

ವಿಶಾಖಪಟ್ಟಣಂ: ಒಂದು ರನ್‌ಗಾಗಿ ಆಟಗಾರರ ನಡುವೆ ಜಗಳ; ಯುವಕನ ಕೊಲೆಯಲ್ಲಿ ಕ್ರಿಕೆಟ್ ಪಂದ್ಯ ಅಂತ್ಯ!

ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಒಂದು ರನ್‌ಗೆ ಸಂಬಂಧಿಸಿದಂತೆ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಆದರೆ, ಪಂದ್ಯದ ಅಂಪೈರ್ ಚಿರಂಜೀವಿ ಮಧ್ಯಪ್ರವೇಶಿಸಿದಾಗ ಅದು ಆರಂಭದಲ್ಲಿ ಇತ್ಯರ್ಥವಾಯಿತು.

ವಿಶಾಖಪಟ್ಟಣಂ: ಇಲ್ಲಿನ ಖಾಸಗಿ ಜಮೀನೊಂದರ ಬಳಿ ಎರಡು ಸ್ಥಳೀಯ ತಂಡಗಳ ನಡುವಿನ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಒಂದು ರನ್‌ಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಯುವಕನೊಬ್ಬ ಕೊಲೆಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಒಂದು ರನ್‌ಗೆ ಸಂಬಂಧಿಸಿದಂತೆ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಆದರೆ, ಪಂದ್ಯದ ಅಂಪೈರ್ ಚಿರಂಜೀವಿ ಮಧ್ಯಪ್ರವೇಶಿಸಿದಾಗ ಅದು ಆರಂಭದಲ್ಲಿ ಇತ್ಯರ್ಥವಾಯಿತು.

ಆದರೆ ಸಂಜೆ, ಆರೋಪಿ ಕೆ. ಕಿಶೋರ್ (26) ಅಂಪೈರ್ ಸಹೋದರ ಅಜಿತ್ (23) ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಅದೇ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ವಾಗ್ವಾದ ನಡೆದ ನಂತರ ಅವರ ಎದೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಜಿತ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾದಿತ ರನ್ ಬಗ್ಗೆ ಖಾಸಗಿ ಛಾಯಾಗ್ರಾಹಕರಾಗಿರುವ ಆರೋಪಿ ಕಿಶೋರ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಆದರೆ, ಆ ದಿನದ ನಂತರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದಾಗ, ವಾಗ್ವಾದ ವಿಕೋಪಕ್ಕೆ ತಿರುಗಿ ಮಾರಣಾಂತಿಕ ಹಲ್ಲೆಗೆ ಕಾರಣವಾಯಿತು ಎಂದು ಅಧಿಕಾರಿ ಹೇಳಿದರು.

ಈಮಧ್ಯೆ, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್