ಪ್ರಾತಿನಿಧಿಕ ಚಿತ್ರ 
ದೇಶ

ವಿಶಾಖಪಟ್ಟಣಂ: ಒಂದು ರನ್‌ಗಾಗಿ ಆಟಗಾರರ ನಡುವೆ ಜಗಳ; ಯುವಕನ ಕೊಲೆಯಲ್ಲಿ ಕ್ರಿಕೆಟ್ ಪಂದ್ಯ ಅಂತ್ಯ!

ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಒಂದು ರನ್‌ಗೆ ಸಂಬಂಧಿಸಿದಂತೆ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಆದರೆ, ಪಂದ್ಯದ ಅಂಪೈರ್ ಚಿರಂಜೀವಿ ಮಧ್ಯಪ್ರವೇಶಿಸಿದಾಗ ಅದು ಆರಂಭದಲ್ಲಿ ಇತ್ಯರ್ಥವಾಯಿತು.

ವಿಶಾಖಪಟ್ಟಣಂ: ಇಲ್ಲಿನ ಖಾಸಗಿ ಜಮೀನೊಂದರ ಬಳಿ ಎರಡು ಸ್ಥಳೀಯ ತಂಡಗಳ ನಡುವಿನ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಒಂದು ರನ್‌ಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಯುವಕನೊಬ್ಬ ಕೊಲೆಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಒಂದು ರನ್‌ಗೆ ಸಂಬಂಧಿಸಿದಂತೆ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಆದರೆ, ಪಂದ್ಯದ ಅಂಪೈರ್ ಚಿರಂಜೀವಿ ಮಧ್ಯಪ್ರವೇಶಿಸಿದಾಗ ಅದು ಆರಂಭದಲ್ಲಿ ಇತ್ಯರ್ಥವಾಯಿತು.

ಆದರೆ ಸಂಜೆ, ಆರೋಪಿ ಕೆ. ಕಿಶೋರ್ (26) ಅಂಪೈರ್ ಸಹೋದರ ಅಜಿತ್ (23) ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಅದೇ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ವಾಗ್ವಾದ ನಡೆದ ನಂತರ ಅವರ ಎದೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಜಿತ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾದಿತ ರನ್ ಬಗ್ಗೆ ಖಾಸಗಿ ಛಾಯಾಗ್ರಾಹಕರಾಗಿರುವ ಆರೋಪಿ ಕಿಶೋರ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಆದರೆ, ಆ ದಿನದ ನಂತರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದಾಗ, ವಾಗ್ವಾದ ವಿಕೋಪಕ್ಕೆ ತಿರುಗಿ ಮಾರಣಾಂತಿಕ ಹಲ್ಲೆಗೆ ಕಾರಣವಾಯಿತು ಎಂದು ಅಧಿಕಾರಿ ಹೇಳಿದರು.

ಈಮಧ್ಯೆ, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel