ಹಿಮಂತ್ ಬಿಸ್ವಾಸ್ ಶರ್ಮಾ ಮತ್ತು ಪವನ್ ಖೇರಾ 
ದೇಶ

'ಪೊಲೀಸರು ಬಂದಾಗ ಅವರು ಓಡಿ ಹೋಗಿದ್ದಾರೆ': ಪವನ್ ಖೇರಾ ವಿರುದ್ಧ ಅಸ್ಸಾಂ ಸಿಎಂ ಹಿಮಂತ್ ಶರ್ಮಾ ಟೀಕೆ

ಪವನ್ ಖೇರಾ ನಿನ್ನೆ ಗುವಾಹಟಿಯಿಂದ ಓಡಿಹೋಗಿದ್ದಾರೆ. ಮಾಧ್ಯಮಗಳ ಮೂಲಕ ನನಗೆ ತಿಳಿದಂತೆ, ಪೊಲೀಸರು ದೆಹಲಿಯ ಅವರ ನಿವಾಸಕ್ಕೆ ಹೋಗಿದ್ದಾರೆ. ಆದರೆ ಅವರು ಹೈದರಾಬಾದ್‌ಗೆ ತೆರಳಿದ್ದಾರೆ. ಕಾನೂನು ತನ್ನ ದಾರಿಯಲ್ಲಿ ನಡೆಯುತ್ತದೆ ಎಂದು ಸಾರ್ವಜನಿಕ ಸಭೆಯಲ್ಲಿ ಶರ್ಮಾ ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು “ಹೈದರಾಬಾದ್‌ಗೆ ಓಡಿಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ. ಹಿಮಂತ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ್ದ ಎಫ್ ಐಆರ್ ಪ್ರಕರಣದ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಅವರ ನಿವಾಸದಲ್ಲಿ ಶೋಧ ನಡೆಸುತ್ತಿರುವ ಸಂದರ್ಭದಲ್ಲಿಯೇ ನಡೆದಿದೆ.

ಎಫ್‌ಐಆರ್ ಕಾಂಗ್ರೆಸ್ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದೆ. ಕಾಂಗ್ರೆಸ್ ಶರ್ಮಾ ಅವರ ಪತ್ನಿಯ ಬಳಿ ಹಲವಾರು ಪಾಸ್‌ಪೋರ್ಟ್‌ಗಳಿವೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಪವನ್ ಖೇರಾ ನಿನ್ನೆ ಗುವಾಹಟಿಯಿಂದ ಓಡಿಹೋಗಿದ್ದಾರೆ. ಮಾಧ್ಯಮಗಳ ಮೂಲಕ ನನಗೆ ತಿಳಿದಂತೆ, ಪೊಲೀಸರು ದೆಹಲಿಯ ಅವರ ನಿವಾಸಕ್ಕೆ ಹೋಗಿದ್ದಾರೆ. ಆದರೆ ಅವರು ಹೈದರಾಬಾದ್‌ಗೆ ತೆರಳಿದ್ದಾರೆ. ಕಾನೂನು ತನ್ನ ದಾರಿಯಲ್ಲಿ ನಡೆಯುತ್ತದೆ ಎಂದು ಸಾರ್ವಜನಿಕ ಸಭೆಯಲ್ಲಿ ಶರ್ಮಾ ಹೇಳಿದರು.

ಅಸ್ಸಾಂ ಪೊಲೀಸ್ ತಂಡವು ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ದೆಹಲಿ ನಿವಾಸದಲ್ಲಿ ವಿಚಾರಣೆಗಾಗಿ ಹಾಜರಾಗಿದೆ. ಅವರು ದೆಹಲಿ ಪೊಲೀಸರಿಗೆ ಅಧಿಕೃತವಾಗಿ ಮಾಹಿತಿ ನೀಡಿದ ನಂತರ, ಸ್ಥಳೀಯ ಪೊಲೀಸ್ ತಂಡವೂ ಸಹ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ.

ದೆಹಲಿ ಮತ್ತು ಗುವಾಹಟಿಯಲ್ಲಿ ನಡೆದ ಸಭೆಗಳಲ್ಲಿ, ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮತ್ತು ಅಸ್ಸಾಂ ಘಟಕದ ಅಧ್ಯಕ್ಷ ಗೌರವ್ ಗೊಗೊಯ್, ಸಿಎಂ ಹಿಮಂತ್ ಶರ್ಮಾ ಅವರ ಪತ್ನಿಗೆ ಯುಎಇ, ಈಜಿಪ್ಟ್ ಮತ್ತು ಆಂಟಿಗುವಾ & ಬರ್ಬುಡಾ ದೇಶಗಳ ಪಾಸ್‌ಪೋರ್ಟ್‌ಗಳಿವೆ ಎಂದು ಆರೋಪಿಸಿದ್ದರು. ಜೊತೆಗೆ ದುಬೈನಲ್ಲಿ ಆಸ್ತಿಗಳು ಮತ್ತು ಅಮೆರಿಕದ ವ್ಯೋಮಿಂಗ್‌ನಲ್ಲಿ ಕಂಪನಿ ಹೊಂದಿದ್ದಾರೆ ಎಂದೂ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಹಿಮಂತ ಶರ್ಮಾ, ಕಾಂಗ್ರೆಸ್ ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಗುಂಪಿನಿಂದ ಪಡೆದ ತಪ್ಪು ಮಾಹಿತಿಯನ್ನು ಬಳಸಿಕೊಂಡು ಆರೋಪ ಮಾಡಿದೆ ಎಂದು ಆರೋಪಿಸಿದ್ದರು. ಇದು ಅಸ್ಸಾಂ ಚುನಾವಣೆಯನ್ನು ಪ್ರಭಾವಿಸಲು ಮಾಡಿದ ಪ್ರಯತ್ನವಾಗಿದ್ದು, ಶಿಕ್ಷಾರ್ಹ ಅಪರಾಧ ಎಂದು ಹೇಳಿದ್ದರು.

ಇದರ ನಡುವೆ, ರಿನಿಕಿ ಭುಯಾನ್ ಶರ್ಮಾ ತಮ್ಮ ಎಫ್‌ಐಆರ್ ದಾಖಲಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡು, ಆರೋಪಗಳು ಗಂಭೀರವಾಗಿರುವುದರಿಂದ ಅವನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಸ್ಸಾಂನಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶೀಘ್ರದಲ್ಲೇ ವಿಶ್ವಕ್ಕೆ ಸಿಹಿ ಸುದ್ದಿ: ಅಮೆರಿಕಾ–ಇರಾನ್ ಸಂಘರ್ಷ ಅಂತ್ಯ ಸಾಧ್ಯತೆ, ಮಾರ್ಕೊ ರುಬಿಯೊ ಮಹತ್ವದ ಹೇಳಿಕೆ..!

ಅಮೆರಿಕದಲ್ಲಿ ಭಾರತೀಯರ ವಿರುದ್ಧ ಜನಾಂಗೀಯ ಹೇಳಿಕೆ: ಮಾರ್ಕೊ ರೂಬಿಯೊ ಹೇಳಿದ್ದೇನು?

ಪಾಕಿಸ್ತಾನದಲ್ಲಿ ಮುಂದುವರಿದ ರಕ್ತಪಾತ: ಚಲಿಸುತ್ತಿದ್ದ ರೈಲಿನಲ್ಲಿ ಆತ್ಮಾಹುತಿ ಬಾಂಬ್ ದಾಳಿ; 24 ಪ್ರಯಾಣಿಕರ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಎಬೋಲಾ ಭೀತಿ: ಡಿಆರ್‌ಸಿ, ಉಗಾಂಡಾ, ದಕ್ಷಿಣ ಸುಡಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಅಮೆರಿಕ-ಇರಾನ್ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿದೆ ಎಂದ ಡೊನಾಲ್ಟ್ ಟ್ರಂಪ್, ಹಾರ್ಮುಜ್ ಜಲಸಂಧಿ ಪುನರಾರಂಭ ನಿರೀಕ್ಷೆ

SCROLL FOR NEXT