ದಾಲ್- ಚಾವಲ್ ಊಟದಲ್ಲಿ ಹುಳು ಪತ್ತೆ 
ದೇಶ

Vande Bharat train: ದಾಲ್- ಚಾವಲ್ ಊಟದಲ್ಲಿ ಹುಳು ಪತ್ತೆ: ವೆಂಡರ್ ಗೆ 10 ಲಕ್ಷ ರೂ. ದಂಡ ಹಾಕಿದ IRCTC!

ಎಕ್ಸ್ ನಲ್ಲಿ ಹಂಚಿಕೊಂಡ ವಿಡಿಯೋ ಹಾಗೂ ಫೋಟೋದಲ್ಲಿ ದಾಲ್- ಚಾವಲ್ ಊಟದ ಬಾಕ್ಸ್ ನಲ್ಲಿ ಜೀರಳೆ ರೀತಿಯ ಹುಳುಗಳು ಪತ್ತೆಯಾಗಿವೆ. ವೆಂಡರ್ RK ಗ್ರೂಪ್‌ನ ಭಾಗವಾಗಿರುವ M/S ಬ್ರಂದಾವನ್ ಫುಡ್ ಪ್ರಾಡಕ್ಟ್ಸ್ ಎಂದು ಅವರು ಬಹಿರಂಗಪಡಿಸಿದ್ದಾರೆ.

ಮುಂಬೈ: ಅಹಮದಾಬಾದ್‌ನಿಂದ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಂಬೈ ನಿವಾಸಿಯೊಬ್ಬರು, ದಾಲ್-ಚಾವಲ್ ಊಟದಲ್ಲಿ ಹುಳು ಕಂಡು ಆಘಾತಕ್ಕೊಳಗಾಗಿದ್ದಾರೆ.

ಬಳಿಕ ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, ತನ್ನ ಕೋಚ್‌ನಲ್ಲಿ ಇಂತಹ ಎರಡು ಪ್ರಕರಣಗಳು ಕಂಡುಬಂದಿದ್ದು, ಪ್ರತಿಯೊಬ್ಬರೂ ಊಟ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಎಕ್ಸ್ ನಲ್ಲಿ ಹಂಚಿಕೊಂಡ ವಿಡಿಯೋ ಹಾಗೂ ಫೋಟೋದಲ್ಲಿ ದಾಲ್- ಚಾವಲ್ ಊಟದ ಬಾಕ್ಸ್ ನಲ್ಲಿ ಜೀರಳೆ ರೀತಿಯ ಹುಳುಗಳು ಪತ್ತೆಯಾಗಿವೆ. ವೆಂಡರ್ RK ಗ್ರೂಪ್‌ನ ಭಾಗವಾಗಿರುವ M/S ಬ್ರಂದಾವನ್ ಫುಡ್ ಪ್ರಾಡಕ್ಟ್ಸ್ ಎಂದು ಅವರು ಬಹಿರಂಗಪಡಿಸಿದ್ದಾರೆ.

ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳಿಗೆ ಇದನ್ನು ಟ್ಯಾಗ್ ಮಾಡಿದ್ದು, ವೆಂಡರ್ ಮೇಲೆ ದಯವಿಟ್ಟು ದಾಳಿ ಮಾಡಿ ಎಂದು ಒತ್ತಾಯಿಸಿದ್ದಾರೆ.

FSSAI ಮಾನದಂಡಗಳ ಪ್ರಕಾರ ಆಹಾರವನ್ನು ತಯಾರಿಸಲಾಗುತ್ತಿಲ್ಲ ಎಂದು ನನಗೆ ಖಚಿತವಾಗಿದೆ. ತಪ್ಪಿತಸ್ಥರೆಂದು ಕಂಡುಬಂದಾಗ, ಅವರ ಪರವಾನಗಿಯನ್ನು ರದ್ದುಗೊಳಿಸಬೇಕು. ಇದು ಲಂಚದ ಮೂಲಕ ಇತ್ಯರ್ಥವಾಗುವುದಿಲ್ಲ ಎಂದು ಭಾವಿಸುತ್ತೇವೆ ಎಂದು ಅವರು ಬರೆದುಕೊಂಡಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ಒಪ್ಪಂದದ ಮುಕ್ತಾಯದ ಸೂಚನೆಯೊಂದಿಗೆ 10 ಲಕ್ಷ ರೂ. ಭಾರೀ ದಂಡವನ್ನು ಸೇವಾ ಪೂರೈಕೆದಾರರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದು, ಶುಚಿಗೊಳಿಸುವಿಕೆ ಮತ್ತು ಕೀಟ ನಿಯಂತ್ರಣಕ್ಕಾಗಿ ಕಿಚನ್ ಮುಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ತೀವ್ರ ವಿಷಾದವಿದೆ. ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ನೈರ್ಮಲ್ಯ ಮತ್ತು ಪ್ರಯಾಣಿಕರ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು IRCTC ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ಸರ್ವಾಧಿಕಾರಿ ಈಗ 'ಜೀವಂತ ಶವ', 'ಪ್ರಜ್ಞಾಹೀನ'.. ಯುದ್ಧವೂ ಗೊತ್ತಿಲ್ಲ.. ಕದನ ವಿರಾಮದ ಅರಿವೂ ಇಲ್ಲ: ವರದಿ

'ಹೇಳಿ ಇಲ್ಲದಿದ್ದರೆ ಜೈಲಿಗೆ ಹೋಗಿ': F-15 ಜೆಟ್‌ ಸೂಕ್ಷ್ಮ ಮಾಹಿತಿ 'ಸೋರಿಕೆದಾರನ' ಪತ್ತೆಗೆ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ, ಮಾಧ್ಯಮಗಳಿಗೆ ಬೆದರಿಕೆ!

ವಲಸೆ ಕಾರ್ಮಿಕರಿಗೆ ಬಿಗ್ ರಿಲೀಫ್: ರಾಜ್ಯಗಳಿಗೆ 5 ಕೆಜಿ ಸಿಲಿಂಡರ್ ಹಂಚಿಕೆ ದ್ವಿಗುಣಗೊಳಿಸಿದ 'ಕೇಂದ್ರ ಸರ್ಕಾರ'

400 ಕೋಟಿ ರೂ. ಸೈಬರ್ ವಂಚನೆ ಜಾಲ ಭೇದಿಸಿದ ಜೈಪುರ ಪೊಲೀಸರು; ವಂಚಕರು ಮಾಡಿದ್ದೇನು ಗೊತ್ತಾ?

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವಲ್ಲೇ ಅಮೆರಿಕಾ ಪ್ರವಾಸ ಹೊರಟ ವಿಕ್ರಮ್ ಮಿಸ್ರಿ: ವ್ಯಾಪಾರ-ರಕ್ಷಣಾ ಸಹಕಾರ ಕುರಿತು ಚರ್ಚೆ

SCROLL FOR NEXT